ವಿಆರ್‌ಎಲ್ ಸಮೂಹ ಸಂಸ್ಥೆ ಪ್ರಾಯೋಜಕತ್ವದ ಬ್ರೈಲ್ ಲಿಪಿಯಲ್ಲಿ ಬರೆದ ಪತ್ರಿಕೆ ಲೋಕಾರ್ಪಣೆ: ನೇತ್ರಹೀನರಿಗೆ ಪ್ರಧಾನಿ ಮೋದಿ ಜೀವನದ ಬಗ್ಗೆ ತಿಳಿಸುವ ಪ್ರಯತ್ನ

ನವದೆಹಲಿ: ದೇಶದ ಏಳು ಕೋಟಿ ಅಂಧರು, ದೃಷ್ಟಿದೋಷ ಇರುವವರು ಪ್ರಧಾನಿ ನರೇಂದ್ರ ಮೋದಿಯವರ ಜೀವನ, ಕಾರ್ಯ ಮತ್ತು ನಾಯಕತ್ವದ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಉದ್ದೇಶದಿಂದ ಹುಬ್ಬಳ್ಳಿ ಮೂಲದ ಟೀಮ್ ಸೆನ್ಸ್ ಎಸೆನ್ಸ್ ಸಂಸ್ಥೆಯು ಬ್ರೈಲ್ ಲಿಪಿಯಲ್ಲಿ ಸಿದ್ಧಪಡಿಸಿದ ‘ಎ ಪ್ರಾಮೀಸ್ಡ್ ನೇಷನ್ ಹಾನರೇಬಲ್ ಶ್ರೀ ನರೇಂದ್ರ ಮೋದಿ- ದ ಮೇಕರ್ ನ್ಯೂ ಆಫ್ ಇಂಡಿಯಾ’ ಎಂಬ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಲೋಕಾರ್ಪಣೆಗೊಳಿಸಿದರು. ವಿಆರ್‌ಎಲ್ ಸಮೂಹ ಸಂಸ್ಥೆಯ ಸಹಯೋಗ ಮತ್ತು ಪ್ರಾಯೋಜಕತ್ವದಲ್ಲಿ ಈ ಪುಸ್ತಕ […]

ಫೆ.2 ರಿಂದ ಹಂಪಿ ಉತ್ಸವ ಪ್ರಾರಂಭ: ‘ಆಗಸದಿಂದ ಹಂಪಿಯ ನೋಟ’ ಹೆಲಿಕಾಪ್ಟರ್‌ ಯಾನಕ್ಕೆ ಚಾಲನೆ

ರಾಯಚೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಪ್ರಾರಂಭವಾಗಲಿದ್ದು ಉತ್ಸವ ಆರಂಭಕ್ಕೂ ಮುನ್ನಾ ದಿನ ಫೆ.1ರಂದು ‘ಹಂಪಿ ಬೈ ಸ್ಕೈ’ ಹೆಲಿಕಾಪ್ಟರ್‌ ಯಾನ ಆರಂಭವಾಗಲಿದೆ. ಫೆಬ್ರವರಿ 1 ರಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ‘ಹಂಪಿ ಬೈ ಸ್ಕೈ’ ಹೆಲಿಕಾಪ್ಟರ್‌ ಯಾನಕ್ಕೆ ಚಾಲನೆ ನೀಡಲಿದ್ದಾರೆ. ಇದು ವಿಶ್ವ ಪಾರಂಪರಿಕ ತಾಣದ ಪಕ್ಷಿನೋಟಕ್ಕೆ ಅವಕಾಶ ಕಲ್ಪಿಸುತ್ತದೆ ಎಂದು ವಿಜಯನಗರ ಜಿಲ್ಲಾಡಳಿತದ ಅಧಿಕಾರಿಗಳು ಹೇಳಿದ್ದಾರೆ. ಈ ಹಿಂದೆ ಹೆಲಿಕಾಪ್ಟರ್ ಯಾನವನ್ನು ಉತ್ಸವ ದಿನದಂದೇ […]

ವಿಮಾನದಲ್ಲಿ ನೀರಿನ ಬದಲು ಆಸಿಡ್ ಕುಡಿದ ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್: ಆಸ್ಪತ್ರೆಗೆ ದಾಖಲು; ತನಿಖೆ ಆರಂಭ

ಅಗರ್ತಲಾ: ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಸಿಡ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ತಂಡವು ತ್ರಿಪುರಾದ ಅಗರ್ತಲಾದಿಂದ ಗುಜರಾತ್‌ನ ಸೂರತ್‌ಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸೋಮವಾರ ನಡೆದ ರಣಜಿ ಪಂದ್ಯದಲ್ಲಿ ತ್ರಿಪುರಾ ವಿರುದ್ಧ ಕರ್ನಾಟಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದ ಮಯಾಂಕ್ ಅಗರ್ವಾಲ್ ವಿಮಾನದಲ್ಲಿ ನೀರು ಕುಡಿದು ತೀವ್ರ ಅಸ್ವಸ್ಥಗೊಂಡಿದ್ದರು. ತನಗೆ ಒದಗಿಸಲಾದ ನೀರನ್ನು ಸೇವಿಸಿದ ಸ್ವಲ್ಪ ಸಮಯದ ನಂತರ, ಅಗರ್ವಾಲ್ ಅವರ ನಾಲಿಗೆ, ಬಾಯಿ ಮತ್ತು ಕೆನ್ನೆಗಳಲ್ಲಿ […]

ಅಕ್ರಮ ಆಸ್ತಿ ಗಳಿಕೆ ಆರೋಪ: ರಾಜ್ಯಾದ್ಯಂತ ಅಧಿಕಾರಿಗಳ ಮೇಲೆ ‘ಲೋಕಾ’ ಪ್ರಹಾರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬುಧವಾರ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ, ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ […]

ಏರುಗತಿಯಲ್ಲಿ ಬೆಳ್ಳುಳ್ಳಿ ದರ: ಕೆಜಿಗೆ 400 ರೂ; ಫೆಬ್ರವರಿ ಅತ್ಯಂಕ್ಕೆ ಇಳಿಕೆ ಸಾಧ್ಯತೆ

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಬೆಳ್ಳುಳ್ಳಿ ದರ ಏರಿಕೆ ಕಂಡಿದ್ದು ಇಳಿಕೆಯಾಗುವ ಲಕ್ಷಣ ಸದ್ಯಕ್ಕಿಲ್ಲ. ಕೆಲ ದಿನಗಳಿಂದ ಕೆಜಿಗೆ 300 ರೂ.ವರೆಗೆ ಇದ್ದ ಬೆಳ್ಳುಳ್ಳಿ ದರ ಈ ವಾರ ಮತ್ತೆ ಏರಿಕ ಕಂಡಿದೆ. ಬೆಂಗಳೂರು ಸಹಿತ ಬಹುತೇಕ ಕಡೆ ಕೆಜಿಗೆ 400 ರೂ. ಗೆ ಮಾರಾಟವಾಗಿದೆ. ಉತ್ತಮ ಗುಣಮಟ್ಟದ ನಾಟಿ ಬೆಳ್ಳುಳ್ಳಿ ದರ 450 ರೂ.ದಿಂದ 500 ರೂ.ವರೆಗೂ ಮಾರಾಟವಾಗುತ್ತಿದೆ. ಮಾರುಕಟ್ಟೆಗೆ ಬರುವ ಬೆಳ್ಳುಳ್ಳಿ ಪ್ರಮಾಣ ಕಡಿಮೆಯಾಗಿರುವುದು ದರ ಏರಿಕೆಯಾಗಲು ಕಾರಣ ಎನ್ನಲಾಗಿದೆ. ಫೆಬ್ರವರಿಯಲ್ಲಿ ಉತ್ತರ ಭಾರತದ […]