ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ – ಮುಂಬೈ ಇಂಡಿಯನ್ಸ್ ಕದನ; ರಾಜಧಾನಿಯಲ್ಲಿ ತಪಾಸಣೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಆರ್ಸಿಬಿ – ಮುಂಬೈ ಇಂಡಿಯನ್ಸ್ (RCB vs MI) ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಸುಮಾರು 35 ಸಾವಿರ ಹಾಸನಗಳ ಸಾಮರ್ಥ್ಯವುಳ್ಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಸೇರಿವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳ ಸ್ಟೇಡಿಯಂನಲ್ಲಿ ತಪಾಸಣೆಗೆ ಮುಂದಾಗಿದೆ. ಅಲ್ಲದೆ, ಬೆಂಗಳೂರು ನಗರದ ಬಹುತೇಕ ಕಡೆಗಳಲ್ಲಿ ತಪಾಸಣೆ ನಡೆಯುತ್ತಿದೆ.
ಪಾಕಿಸ್ತಾನ್ ಜ಼ಿಂದಾಬಾದ್ ಘೋಷಣೆ ಫೊರೆನ್ಸಿಕ್ ವರದಿಯಲ್ಲಿ ಬಹಿರಂಗ: ಒಬ್ಬನ ವಿಚಾರಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ನಾಸಿರ್ ಹುಸೇನ್ ರಾಜ್ಯಸಭಾ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜ಼ಿಂದಾಬಾದ್ ಘೋಷಣೆ ಹಾಕಿದ್ದು ನಿಜ ಎಂದು ಫೊರೆನ್ಸಿಕ್ ತಜ್ಞರು ವರದಿಯಲ್ಲಿ ಖಚಿತಪಡಿಸಿದ್ದಾರೆ ಮಾಧ್ಯಮ ವರದಿಯಾಗಿದ್ದು, ಈ ಸಂಬಂಧ ಒಬ್ಬರನ್ನು ವಶಕ್ಕೆ ಪಡೆದು ವಿಚಾರಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾದ ವರದಿಯು ವಿಡಿಯೋ ಮತ್ತು ಆಡಿಯೋ ಎರಡರಲ್ಲೂ ಪಾಕಿಸ್ತಾನ ಪರ ಘೋಷಣೆಗಳ ಉಪಸ್ಥಿತಿಯನ್ನು ದೃಢಪಡಿಸಿದೆ ಮತ್ತು ದೃಶ್ಯಗಳನ್ನು ಕೃತಕವಾಗಿ ಮಾಡಲಾಗಿಲ್ಲ ಎಂದು ಹೇಳಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಶಫೀಕ್ ನಾಶಿಪುಡಿ ಎಂದು ಗುರುತಿಸಲಾಗಿದೆ ಎಂದು ಹಾವೇರಿ […]
ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟಕ್ಕೂ ಬೆಂಗಳೂರು ಸ್ಪೋಟಕ್ಕೂ ಸಾಮ್ಯತೆ? ಬಿಹಾರದಲ್ಲೂ ಆರು ಸಜೀವ ಬಾಂಬ್ ಪತ್ತೆ!!

ಬೆಂಗಳೂರು: ರಾಮೇಶ್ವರಂನ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಈ ಘಟನೆಯ ಬಗ್ಗೆ ಮಾಹಿತಿಯ ಮಹಾಪೂರ ಹರಿದುಬರುತ್ತಿದ್ದು, ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸ್ಫೋಟಕ್ಕೂ ಹಿಂದಿನ ಸ್ಫೋಟಗಳಿಗೂ ಸಾಮ್ಯತೆ ಇದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ. ಈ ಹಿಂದೆ ನಡೆದ ಸ್ಫೋಟಗಳಿಗೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಇರುವ ಸಾಮ್ಯತೆಗಳ ಕುರಿತು ಪೊಲೀಸರು ತನಿಖೆ ನಡೆಸಿದ್ದು, ಮಂಗಳೂರು ಕುಕ್ಕರ್ ಸ್ಫೋಟಕ್ಕೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಕಂಡುಬಂದಿದೆ. ಕುಕ್ಕರ್ ಬಾಂಬ್ ಸ್ಫೋಟಕ್ಕೆ ಬಳಸಲಾದ ಸ್ಫೋಟಕಗಳನ್ನು ರಾಮೇಶ್ವರಂ […]
ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ: ಶಂಕಿತನ ಚಹರೆ ಸಿಸಿಟಿವಿಯಲ್ಲಿ ಪತ್ತೆ; ತನಿಖೆ ಚುರುಕು

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಒಂದು ದಿನದ ನಂತರ, ಕರ್ನಾಟಕದ ರಾಜಧಾನಿಯ ವೈಟ್ಫೀಲ್ಡ್ ಪ್ರದೇಶದ ಕೆಫೆಯ ಆವರಣದಲ್ಲಿ ವ್ಯಕ್ತಿಯೊಬ್ಬ ಚೀಲವನ್ನು ಹೊತ್ತುಕೊಂಡು ಹೋಗುತ್ತಿರುವುದನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ಪೊಲೀಸರ ಪ್ರಕಾರ, ಶಂಕಿತ ವ್ಯಕ್ತಿಈ ಚೀಲವನ್ನು ಕೆಫೆಯಲ್ಲಿ ಇರಿಸಿ ನಂತರ ಸ್ಫೋಟ ಸಂಭವಿಸುವ ಮೊದಲು ಹೊರಟುಹೋಗಿದ್ದಾನೆ. ಶಂಕಿತನ ಜೊತೆಗೆ ಕಾಣಿಸಿಕೊಂಡಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಂಕಿತ ವ್ಯಕ್ತಿ ತನ್ನ ಮುಖವನ್ನು ಮುಖವಾಡ, ಕನ್ನಡಕ ಮತ್ತು ಕ್ಯಾಪ್ ನಿಂದ […]
15ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ. ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ. ಸಿನಿಮಾಗಳ […]