ದೇವಾಲಯಗಳ ಆದಾಯದ ಮೇಲೆ ಶೇ 10 ತೆರಿಗೆ ಕಡ್ಡಾಯಗೊಳಿಸುವ ಮಸೂದೆಗೆ ರಾಜ್ಯವಿಧಾನ ಪರಿಷತ್ತಿನಲ್ಲಿ ಸೋಲು

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, 1 ಕೋಟಿ ರೂಗಿಂತ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳ ಆದಾಯದ ಮೇಲೆ ಶೇ 10 ರಷ್ಟು ತೆರಿಗೆಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಶುಕ್ರವಾರ ಸಂಜೆ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಲಿಸಲಾಯಿತು. ರಾಜ್ಯ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಅಂಗೀಕರಿಸಿದ ಎರಡು ದಿನಗಳ ನಂತರ ವಿಧಾನಪರಿಷತ್ತಿನಲ್ಲಿ ಮಸೂದೆಗೆ ಬಹುಮತ ದೊರೆಯಲಿಲ್ಲ. ಈ ಮಸೂದೆಯು ದೇಶಾದ್ಯಂತ ಭಾರೀ ವಿವಾದವನ್ನು ಹುಟ್ಟುಹಾಕಿತ್ತು ಮತ್ತು ಕಾಂಗ್ರೆಸ್ ‘ಹಿಂದೂ ವಿರೋಧಿ’ ನೀತಿಗಳನ್ನು ಜಾರಿಗೆ ತಂದಿದೆ ಎಂದು ಪ್ರತಿಪಕ್ಷ ಬಿಜೆಪಿ […]
55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ

ಬೆಂಗಳೂರು: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ […]
ಅಡಿಕೆ ದರ ಕುಸಿತ: ಕಂಗಾಲಾಗಿರುವ ರೈತರು

ಬೆಂಗಳೂರು: ಅಡಿಕೆ ಬೆಳೆ ದರ ದಿನ ಕಳೆದಂತೆ ಕುಸಿಯುತ್ತಿದೆ. ಕಳೆದ ಹದಿನೈದು ದಿನಗಳಲ್ಲಿ ಬರೋಬ್ಬರಿ 2300 ರೂಪಾಯಿ ಪ್ರತಿ ಕ್ವಿಂಟಲ್ ಗೆ ಕುಂಠಿತವಾಗಿದೆ. ಇದರಿಂದ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಾರಿ ಬರಗಾಲ ತಲೆದೋರಿದೆ. ಒಂದೆಡೆ ನೀರಿಲ್ಲ. ಮತ್ತೊಂದೆಡೆ ತೋಟಗಳನ್ನು ಉಳಿಸಿಕೊಳ್ಳಲು ಅಡಿಕೆ ಬೆಳೆಗಾರರು ಪರದಾಡುತ್ತಿರುವ ದೃಶ್ಯ ಕಂಡು ಬರುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಂತೂ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲಾಗಿದೆ. ಈ ನಡುವೆ ಅಡಿಕೆ ಧಾರಣೆ ಕುಸಿತಗೊಳ್ಳಲು ಅಕ್ರಮವಾಗಿ ಅಡಿಕೆ ಆಮದು […]
ದೇವಸ್ಥಾನಗಳ ಆದಾಯದ ಶೇ 10ರಷ್ಟು ಸರ್ಕಾರಕ್ಕೆ ಸಲ್ಲಿಕೆ; ವ್ಯವಸ್ಥಾಪನಾ ಸಮಿತಿಯಲ್ಲಿ ಹಿಂದೂಯೇತರರ ನೇಮಕ: ಬಿಜೆಪಿ ಕೆಂಡಾಮಂಡಲ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಬುಧವಾರ ವಿಧಾನಸಭೆಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕ(ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದೆ. 1 ಕೋಟಿಗೂ ಹೆಚ್ಚು ಆದಾಯವಿರುವ ದೇವಸ್ಥಾನಗಳ ಆದಾಯದ ಶೇ 10ರಷ್ಟು ಹಣವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮಸೂದೆಯಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಮಸೂದೆಯ ಬಗ್ಗೆ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವನ್ನು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ. ರಾಜ್ಯ ಸರ್ಕಾರವು “ಹಿಂದೂ ವಿರೋಧಿ ನೀತಿಗಳಲ್ಲಿ” ತೊಡಗಿಸಿಕೊಂಡಿದೆ ಮತ್ತು ಹಣದ ದುರುಪಯೋಗವಾಗುವುದು ನಿಶ್ಚಿತ ಎಂದು ಆರೋಪಿಸಿದೆ. ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ […]
ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸಾರಿಗೆ ನೌಕರರಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು: ಇಲ್ಲಿನ ಫ್ರೀಡಂಪಾರ್ಕ್ನಲ್ಲಿ ಸಾರಿಗೆ ನೌಕರರು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಹೊಸ ಒಪ್ಪಂದದ ಪ್ರಕಾರ ಜನವರಿ 1 ರಿಂದ ಸಾರಿಗೆ ನೌಕರರ ವೇತನ ಪರಿಷ್ಕರಣೆ ಆಗಬೇಕು. ಆದರೆ, ವೇತನ ಸುಧಾರಣೆಯ ಪ್ರಶ್ನೆಯನ್ನು ಸಾರಿಗೆ ಸಂಸ್ಥೆಗಳು ಇನ್ನೂ ಚರ್ಚಿಸಿಲ್ಲ. ಹೀಗಾಗಿ ವೇತನ ಪರಿಷ್ಕರಣೆ ಸೇರಿದಂತೆ ನಾನಾ […]