CCL: ಕರ್ನಾಟಕ ಬುಲ್ಡೋಜರ್ಸ್ ಶುಭಾರಂಭ; ಮುಂಬೈ ಹೀರೋಸ್ ಗೆ ಸೋಲು

ಶಾರ್ಜಾ: ಎರಡು ದಿನಗಳ ಹಿಂದೆ ಅದ್ಧೂರಿಯಾಗಿ ಶುರುವಾಗಿರುವ ಸಿಲೆಬ್ರಿಟಿ ಕ್ರಿಕೆಟ್ ಲೀಗ್ (CCL) ನಿನ್ನೆ ತನ್ನ ಮೊದಲ ಪಂದ್ಯವನ್ನು ಆಡಿದ್ದು, ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ (Karnataka Bulldozers)ಭಾನುವಾರ ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಹೀರೋಸ್ ತಂಡವನ್ನು ಸೋಲಿಸಿದೆ. ಹತ್ತು ಓವರ್ ಗಳ ಈ ಪಂದ್ಯದಲ್ಲಿ ಬಾಲಿವುಡ್ ತಂಡವನ್ನು ರಿತೇಶ್ ದೇಶಮುಖ್ ಮುನ್ನಡೆಸುತ್ತಿದ್ದರೆ, ಕರ್ನಾಟಕ ಬುಲ್ಡೋಜರ್ಸ್ ತಂಡಕ್ಕೆ ನಟ ಪ್ರದೀಪ್ ನಾಯಕರಾಗಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ ಮುಂಬೈ ಹೀರೋಸ್ ನೀರಸ ಪ್ರದರ್ಶನ ತೋರಿದ್ದರಿಂದ ಕರ್ನಾಟಕ ಬುಲ್ಡೋಜರ್ಸ್ 38 […]
ಮದುವೆಯಾಗಲು ಖ್ಯಾತ ಟಿವಿ ನಿರೂಪಕನನ್ನು ಅಪಹರಿಸಿದ ಯುವತಿ..!

ಹೈದರಾಬಾದ್: ಮಹಿಳಾ ಉದ್ಯಮಿಯೊಬ್ಬಳು ಮದುವೆಯಾಗಲು ಖ್ಯಾತ ಟಿವಿ ನಿರೂಪಕನನ್ನು ಅಪಹರಿಸಿ ಜೈಲು ಸೇರಿದ ಘಟನೆ ಶುಕ್ರವಾರ ಹೈದರಾಬಾದ್ ನಲ್ಲಿ ನಡೆದಿದೆ. ಬಂಧಿತ ಭೋಗಿರೆಡ್ಡಿ ತ್ರಿಶಾ ಐದು ಸ್ಟಾರ್ಟಪ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕಿ ಎಂದು ತಿಳಿದು ಬಂದಿದೆ. ತ್ರಿಶಾ ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ನಲ್ಲಿ ಟಿವಿ ಆಂಕರ್ ಪ್ರಣವ್ ಎಂಬವರ ಪ್ರೊಫೈಲ್ ನೋಡಿ ಮದುವೆ ಪ್ರಸ್ತಾಪ ಮಾಡಿದ್ದಳು. ಈ ಪ್ರಸ್ತಾಪಕ್ಕೆ ಪ್ರಣವ್ ಕಡೆಯಿಂದಲೂ ಒಪ್ಪಿಗೆ ಸಿಕ್ಕಿತ್ತು. ಇದಾದ ಬಳಿಕ ಚಾಟಿಂಗ್ ಆರಂಭಿಸಿ ಹಲವು ತಿಂಗಳ ಬಳಿಕ ಅದು ನಕಲಿ […]
ಎಕರೆಗೆ 100 ರೂನಂತೆ 14 ಎಕರೆ ಭೂಮಿ ಚರ್ಚಿಗೆ ಹಸ್ತಾಂತರ: ಕೇರಳ ಸರ್ಕಾರದ ಕ್ರಮವನ್ನು ರದ್ದುಗೊಳಿಸಿದ ಕೇರಳ ಹೈಕೋರ್ಟ್

ಕೊಚ್ಚಿ: ವಯನಾಡು ಜಿಲ್ಲೆಯ ಮನಂತವಾಡಿ ತಾಲೂಕಿನ ಕಲ್ಲೋಡಿಯ ಸೇಂಟ್ ಜಾರ್ಜ್ ಫೊರೇನ್ ಚರ್ಚ್ಗೆ ಅಂದಾಜು 5.5358 ಹೆಕ್ಟೇರ್ (ಸುಮಾರು 14 ಎಕರೆ) ಭೂಮಿಯನ್ನು ಎಕರೆಗೆ 100 ರೂನಂತೆ ಮಂಜೂರು ಮಾಡಿದ ರಾಜ್ಯ ಸರ್ಕಾರದ ವಿವಾದಾತ್ಮಕ ಕ್ರಮವನ್ನು ಕೇರಳ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. 2015 ರಲ್ಲಿ ಆಗಿನ ಯುಡಿಎಫ್ ಸರ್ಕಾರವು ತೆಗೆದುಕೊಂಡ ಈ ನಿರ್ಧಾರವು ಆಕ್ರೋಶವನ್ನು ಹುಟ್ಟುಹಾಕಿದೆ. ವಿಶೇಷವಾಗಿ ಕೃಷಿ ಮತ್ತು ವಸತಿ ಭೂಮಿಗಾಗಿ ಕಾಯುತ್ತಿರುವ ಹಲವಾರು ಬುಡಕಟ್ಟು ಸಮುದಾಯಗಳ ತುರ್ತು ಅಗತ್ಯಗಳ ಸಂದರ್ಭದಲ್ಲಿ ಸರ್ಕಾರದ ಈ ನಡೆ […]
ದೇವಾಲಯಗಳ ಆದಾಯದ ಮೇಲೆ ಶೇ 10 ತೆರಿಗೆ ಕಡ್ಡಾಯಗೊಳಿಸುವ ಮಸೂದೆಗೆ ರಾಜ್ಯವಿಧಾನ ಪರಿಷತ್ತಿನಲ್ಲಿ ಸೋಲು

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, 1 ಕೋಟಿ ರೂಗಿಂತ ಹೆಚ್ಚು ಆದಾಯ ಹೊಂದಿರುವ ದೇವಾಲಯಗಳ ಆದಾಯದ ಮೇಲೆ ಶೇ 10 ರಷ್ಟು ತೆರಿಗೆಯನ್ನು ಕಡ್ಡಾಯಗೊಳಿಸುವ ಮಸೂದೆಯನ್ನು ಶುಕ್ರವಾರ ಸಂಜೆ ರಾಜ್ಯ ವಿಧಾನ ಪರಿಷತ್ತಿನಲ್ಲಿ ಸೋಲಿಸಲಾಯಿತು. ರಾಜ್ಯ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಅಂಗೀಕರಿಸಿದ ಎರಡು ದಿನಗಳ ನಂತರ ವಿಧಾನಪರಿಷತ್ತಿನಲ್ಲಿ ಮಸೂದೆಗೆ ಬಹುಮತ ದೊರೆಯಲಿಲ್ಲ. ಈ ಮಸೂದೆಯು ದೇಶಾದ್ಯಂತ ಭಾರೀ ವಿವಾದವನ್ನು ಹುಟ್ಟುಹಾಕಿತ್ತು ಮತ್ತು ಕಾಂಗ್ರೆಸ್ ‘ಹಿಂದೂ ವಿರೋಧಿ’ ನೀತಿಗಳನ್ನು ಜಾರಿಗೆ ತಂದಿದೆ ಎಂದು ಪ್ರತಿಪಕ್ಷ ಬಿಜೆಪಿ […]
55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ

ಬೆಂಗಳೂರು: 55 ಲಕ್ಷ ಸರ್ಕಾರಿ ಶಾಲೆ ಮಕ್ಕಳ ಮಾನಸಿಕ ದೈಹಿಕ ಆರೋಗ್ಯಕ್ಕಾಗಿ ರಾಗಿ ಮಾಲ್ಟ್ ವಿತರಣೆ ಮಾಡಲು ಶುರು ಮಾಡಿದ್ದೇವೆ. ಉತ್ತಮ ಪೌಷ್ಠಿಕಾಂಶ ಉತ್ತಮ ಶಿಕ್ಷಣಕ್ಕೆ ರಹದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ […]