ರಾಜ್ಯಕ್ಕೆ ಗಾಯದ ಮೇಲೆ ಬರೆ: ತಮಿಳುನಾಡಿಗೆ 2.5 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ

ಬೆಂಗಳೂರು: ಒಂದೆಡೆ ಮಳೆ ಕೊರತೆ ಮತ್ತೊಂದೆಡೆ ಬರದಿಂದ ರಾಜ್ಯವು ಸಂಕಷ್ಟದಲ್ಲಿದ್ದು ಇದೀಗ ಗಾಯದ ಮೇಲೆ ಬರೆ ಎಂಬಂತೆ ತಮಿಳುನಾಡಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ತಲಾ 2.5 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ. ದೆಹಲಿಯಲ್ಲಿ ಸೋಮವಾರ ಸಮಿತಿಯ ಸಭೆ ನಡೆದಿದ್ದು, 7.61 ಟಿಎಂಸಿ ಬಾಕಿ ಜೊತೆಗೆ ಫೆಬ್ರವರಿಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕೆಂದು ತಮಿಳುನಾಡು ಸಭೆಯಲ್ಲಿ ಒತ್ತಾಯಿಸಿದೆ. ಇದಕ್ಕೆ ತೀವ್ರ ಆಕ್ಷೇಪ […]

ತುಳು ಕನ್ನಡಿಗರ ಶೃದ್ದಾಕೇಂದ್ರ ಬೊಯಿಸರ್ ನ ನಿತ್ಯಾನಂದ ಮಂದಿರದಲ್ಲಿ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ

ಬೊಯಿಸರ್: ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲೆಯಲ್ಲಿನ ತುಳು ಕನ್ನಡಿಗರ ಶೃದ್ದಾಕೇಂದ್ರವೆನಿಸಿದ ಬೊಯಿಸರ್ ನ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಠಾನ ಫೆ.5 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಶ್ರೀ ರಾಮ ಮಂದಿರದಲ್ಲಿ ದೀಪಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡು ನಿತ್ಯಾನಂದ ಮಂದಿರದ ಆವರಣದಲ್ಲಿ ಕಲಶ ಪೂಜೆ, ದೀಪಾರಾಧನೆ, ಷೋಡಶ ಪೂಜೆ ಹಾಗೂ ದುರ್ಗಾ ಅಷ್ಟೋತ್ತರ ನಾಮಾರ್ಚನೆ ಹಾಗೂ ಸಂಪನ್ನ […]

ರಾಜ್ಯಾದ್ಯಂತ ಇ-ಚಲನ್ ದಂಡ ವ್ಯವಸ್ಥೆಗೆ ಚಾಲನೆ ನೀಡಿದ ಸಂಚಾರಿ ಪೊಲೀಸ್ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು ಸಂಚಾರಿ ಪೊಲೀಸ್ ಇನ್ನು ಮುಂದೆ ಪೆನ್ನು-ಪೇಪರು ಹಿಡಿದು ದಂಡ ವಿಧಿಸುವ ಬದಲಿಗೆ ಹೈಟೆಕ್ ದಂಡ ಪಾವತಿಯನ್ನು ಅಳವಡಿಸ್ಕೊಂಡಿದೆ. ಹೈಟೆಕ್ ದಂಡ ಪಾವತಿ ಬಗ್ಗೆ ಕರ್ನಾಟಕ ಟ್ರಾಫಿಕ್ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲೆಡೆ ಇನ್ಮುಂದೆ ಇ-ಚಲನ್ ಮೂಲಕ ದಂಡ ವ್ಯವಸ್ಥೆಗೆ ಚಾಲನೆ ಸಿಕ್ಕಿದೆ. ರಾಜ್ಯದಲ್ಲಿ ಶೇ.100 ರಷ್ಟು ಪೇಪರ್‌ಲೆಸ್ ದಂಡ ಪಾವತಿ ವ್ಯವಸ್ಥೆ ಜಾರಿಯಾಗಿದೆ. ದೇಶದಲ್ಲೆ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಸಂಚಾರ ನಿರ್ವಹಣೆಯಲ್ಲಿ […]

ಬೊರಿವಿಲಿ-ದಹಿಸರ್ ಬಿಲ್ಲವರ ಅಸೋಸಿಯೇಶನ್ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮ

ಬೊರಿವಿಲಿ: ಹಳದಿ ಕುಂಕುಮ ಸುಮಂಗಲೆಯರ ಬರೇ ಸಂಕೇತವೆಂದು ತಿಳಿಯದೆ ಅದರ ಇತಿಹಾಸ ಮಹತ್ವವನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ಮನುಷ್ಯ ಹುಟ್ಟು ಜನ್ಮದಿಂದ ಜೀವನಪೂರ್ತಿ ಹಳದಿ ಕುಂಕುಮ ಪ್ರತಿಯೊಂದು ಕಾರ್ಯಕ್ರಮದಲ್ಲಿ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸುವ ವಸ್ತುವಾಗಿದೆ. ದೇವತಾ ಕಾರ್ಯಕ್ರಮದಲ್ಲಿ ತೀರ್ಥ ಪ್ರಸಾದದ ಅರಿವಾಣದಲ್ಲಿ ಯಾವಾಗಲೂ ಅರಸಿನ ಕುಂಕುಮ ಎರಡನ್ನು ಒಟ್ಟಿಗೆ ಇರುವುದು ಪ್ರತಿ ಧಾರ್ಮಿಕ ಸ್ಥಳಗಳಲ್ಲಿ ಇದನ್ನು ಕಾಣ ಬಹದು. ಧಾರ್ಮಿಕತೆಯ ಪ್ರತಿ ಹಂತದಲ್ಲೂ ಅರಿಶಿನ ಕುಂಕುಮ ವಿಶೇಷ ಮಹತ್ವ ಪಡೆದೆ ಎಂದು ಸಮಾಜ ಸೇವಕಿ ಸರಸ್ವತಿ ರಾವ್ […]

ಮೀರಾ ಡಹಾಣೂ ಬಂಟ್ಸ್ ವಾರ್ಷಿಕ ಟರ್ಫ್ ಫುಟ್ ಬಾಲ್ ಪಂದ್ಯಾವಳಿ

ಬೊಯಿಸರ್: ಸ್ಪರ್ಧೆಗಳು ನಮ್ಮಲ್ಲಿನ ಕ್ರೀಡಾಮನೋಭಾವವನ್ನು ಹುರಿದುಂಬಿಸುತ್ತವೆ. ಇಲ್ಲಿ ಸೋಲು ಗೆಲುವು ಮುಖ್ಯವಲ್ಲ. ಇಂತಹ ಕ್ರೀಡೆಗಳಲ್ಲಿ ಸ್ಪರ್ಧಿಸುವಲ್ಲಿನ ಹುಮ್ಮಸ್ಸು ನಮ್ಮಲ್ಲಿನ ಆತ್ಮಸ್ಥೈರ್ಯ ಹಾಗೂ ಮನೋಬಲವನ್ನು ಹೆಚ್ಚಿಸುತ್ತದೆ ಎಂದು ಮೀರಾ ಡಹಾಣೂ ಬಂಟ್ಸ್ ನ ಟ್ರಸ್ಟೀ ಹಾಗೂ ಮಾಜಿ ಅಧ್ಯಕ್ಷ ಕೆ. ಭುಜಂಗ ಶೆಟ್ಟಿ ಹೇಳಿದರು. ಮಹಾರಾಷ್ಟ್ರದ ಪಶ್ಚಿಮ ಕರಾವಳಿಯಲ್ಲಿನ ಪಾಲ್ಘರ್ ಜಿಲ್ಲಾ ಬೊಯಿಸರ್ ಪೂರ್ವದಲ್ಲಿನ ಸ್ಕೋರ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ರವಿವಾರ ಜರಗಿದ ಮೀರಾ ಡಹಾಣೂ ಬಂಟ್ಸ್ (ರಿ) ವಾರ್ಷಿಕ ಟರ್ಫ್ ಫುಟ್ ಬಾಲ್ ಟೂರ್ನಮೆಂಟ್ ಉದ್ಘಾಟನೆಯ ಸಮಾರಂಭದಲ್ಲಿ […]