ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾಧೆ; ರೈತರಿಗೆ ತೀವ್ರ ಸಂಕಷ್ಟ- ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ‘ತೆಂಗು ಬೆಳೆಗಾರರಿಗೆ ಕಾಡುತ್ತಿರುವ ಕಪ್ಪು ತಲೆ ಹುಳುವಿನ ಬಾಧೆ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ತಜ್ಞರಿಂದ ತಕ್ಷಣ ವರದಿ ಪಡೆದು ಪ್ರಸ್ತಾವ ಮಂಡಿಸಬೇಕು’ ಎಂದು ತೋಟಗಾರಿಕಾ ಇಲಾಖೆಯ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ‘ತೆಂಗು ಬೆಳೆಗೆ ಕಪ್ಪು ತಲೆ ಹುಳುವಿನ ಬಾಧೆ ವ್ಯಾಪಕವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು’ ಎಂದು ವಿಧಾನ ಪರಿಷತ್‌ ಕಾಂಗ್ರೆಸ್ ಸದಸ್ಯ ದಿನೇಶ್‌ ಗೂಳಿಗೌಡ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು. ತುರ್ತು ಕ್ರಮಕ್ಕೆ ಮನವಿ: ‘ಮಂಡ್ಯ, ತುಮಕೂರು, […]

ಇಸ್ರೇಲ್-ಇರಾನ್ ನಡುವೆ ಸಂಘರ್ಷ: ಇರಾನ್‌ನಿಂದ ತಾಯ್ನಾಡಿಗೆ ಮರಳಿದ 290 ವಿದ್ಯಾರ್ಥಿಗಳು

ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವೆ ಉಂಟಾಗಿರುವ ಸಂಘರ್ಷದ ಹಿನ್ನೆಲೆ 290 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ವಿಮಾನವು ಶುಕ್ರವಾರ ತಡರಾತ್ರಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಇರಾನ್‌ನಿಂದ ಭಾರತೀಯರನ್ನು ಸ್ಥಳಾಂತರಿಸಲು ಭಾರತ ಸರ್ಕಾರ ‘ಆಪರೇಷನ್ ಸಿಂಧು’ವನ್ನು ಪ್ರಾರಂಭಿಸಿದೆ. ಇರಾನ್‌ನ ಮಶಾದ್‌ನಿಂದ 290 ವಿದ್ಯಾರ್ಥಿಗಳನ್ನು ಹೊತ್ತ ವಿಮಾನವು ದೆಹಲಿ ತಲುಪಿತು. ಇದರಲ್ಲಿ ಹೆಚ್ಚಿನವರು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳ ಮರಳುವಿಕೆಗಾಗಿ ಕಾತರದಿಂದ ಕಾಯುತ್ತಿದ್ದ ಕುಟುಂಬಗಳಿಗೆ ಇದೊಂದು ಉತ್ತಮವಾದ ಕ್ರಮವಾಗಿದೆ. ಭಾರತ […]

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ: ಅಪಘಾತದಲ್ಲಿ 241 ಮಂದಿ ಮೃತ್ಯು.

ನವದೆಹಲಿ: ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ 242 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಜೂ.12 ರಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ತಕ್ಷಣ ಪತನಗೊಂಡಿತು, ಇದು ಭಾರತದ ಇದುವರೆಗಿನ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಒಂದಾಗಿದೆ. ಲಂಡನ್‌ಗೆ ತೆರಳುತ್ತಿದ್ದ ವಿಮಾನದಲ್ಲಿ 230 ಪ್ರಯಾಣಿಕರು, 10 ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಇದ್ದರು. ಸೀಟ್ ಸಂಖ್ಯೆ 11A ಯ ಪ್ರಯಾಣಿಕನೊಬ್ಬ ಅಪಘಾತದಲ್ಲಿ ಬದುಕುಳಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ […]

242 ಪ್ರಯಾಣಿಕರನ್ನು ಹೊತ್ತು ಗುಜರಾತಿನ ಅಹಮದಾಬಾದಿನಿಂದ ಲಂಡನ್‌ಗೆ ಹೊರಟಿದ್ದ ವಿಮಾನ ಟೇಕ್ ಆಫ್ ಆಗಿ 20 ನಿಮಿಷದಲ್ಲಿ ಪತನ

ಅಹಮದಾಬಾದ್: ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂ.12) ಮಧ್ಯಾಹ್ನ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ.ಇದೇ ವಿಮಾನದಲ್ಲಿ ಗುಜರಾತಾ ನ ಮಾಜಿ ಸಿಎಂ ವಿಜಯ ರೂಪಾಣಿ ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏ‌ರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ ಎಂದು ರಾಜ್ಯ ಪೊಲೀಸ್ ನಿಯಂತ್ರಣ ಕೊಠಡಿ ದೃಢಪಡಿಸಿದೆ. ಬೋಯಿಂಗ್ 787-8 ಗ್ರೀಮ್‌ಲೈನ‌ರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 […]

ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ: ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ‌ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಆರ್‌.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು […]