ಹೊಸದಿಲ್ಲಿ:’ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬೆನ್ನಲ್ಲೇ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ,ಇಂದು ಸರ್ವಪಕ್ಷ ಸಭೆಗೆ ಕರೆ

ಹೊಸದಿಲ್ಲಿ: “ಆಪರೇಷನ್‌ ಸಿಂದೂರ’ ನಡೆಸಿ ಪಾಕಿಸ್ಥಾನದ ಮೇಲೆ “ಉಗ್ರ ಪ್ರತೀಕಾರ’ ತೀರಿಸಿ­ಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರಕಾರ, ಇನ್ನಷ್ಟು ದಾಳಿ ನಡೆಸಲಿದೆಯೇ?ಇಂತಹದೊಂದು ಕುತೂಹಲಕ್ಕೆ ಕಾರಣವಾಗಿರುವುದು ಸ್ವತಃ ಮೋದಿ ನಡೆಸುತ್ತಿರುವ ಸರಣಿ ಸಭೆಗಳು ಹಾಗೂ ಮೋದಿ ಪ್ರಭಾ ವಲಯ ದಲ್ಲಿರುವ ಜನಪ್ರತಿನಿಧಿ ಹಾಗೂ ಮಾಜಿ ಸೇನಾ ಮುಖ್ಯಸ್ಥರ ಹೇಳಿಕೆಗಳು. ಮಂಗಳವಾರ ತಡರಾತ್ರಿಯ ದಾಳಿ ಬೆನ್ನಲ್ಲೇ ಬುಧವಾರ ತಮ್ಮ ಸಂಪುಟ ಸಭೆ ನಡೆಸಿರುವ ಮೋದಿ, ಗುರುವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ದಾಳಿ ಕುರಿತ ವಿವರ ನೀಡಲು ಈ […]

ಆಪರೇಷನ್ ಸಿಂಧೂರ್: ಪಹಲ್ಗಾಮ್ ದಾಳಿಗೆ ಪ್ರತಿಕಾರ ;100 ಕ್ಕೂ ಅಧಿಕ ಉಗ್ರರನ್ನು ಧ್ವಂಸಗೊಳಿಸಿದ ಭಾರತದ ಸೇನೆ

ಹೊಸದಿಲ್ಲಿ: ಎಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತದ ಸೇನೆ ಪಾಕಿಸ್ತಾನದ ವಿರುದ್ದ ಪ್ರತೀಕಾರ ಆರಂಭಿಸಿದೆ. ಮೇ 7ರ ಬುಧವಾರ ನಸುಕಿನ ವೇಳೆ ‘ಆಪರೇಷನ್ ಸಿಂದೂರ್’ ಅಡಿಯಲ್ಲಿ ಭಾರತೀಯ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದೆ ಎಂದು ಭಾರತ ದೃಢಪಡಿಸಿದೆ. ಭಾರತದಲ್ಲಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿವೆ ಎನ್ನಲಾದ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೊಯ್ಬಾ ಸಂಘಟನೆಗಳ ಮುಖ್ಯಸ್ಥರನ್ನು ಗುರಿಯಾಗಿಸಿಕೊಂಡು ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ. ಒಟ್ಟು 9 ಉಗ್ರ ಅಡಗುತಾಣಗಳನ್ನು ಧ್ವಂಸ ಮಾಡಿದೆ. ಭಾರತವು ಕೋಟ್ಲಿ, […]

ನಾಳೆ(ಮೇ.2) SSLC ಪರೀಕ್ಷೆ ಫಲಿತಾಂಶ ಪ್ರಕಟ.

ಬೆಂಗಳೂರು, ಮೇ 01: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್​​ಎಲ್​ಸಿ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಈಗಾಗಲೇ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ (ಮೇ.02) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ […]

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 8 (ಇಂದು) ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದವು. ಇಂದು ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಟಿ ನಂತರ ಮಧ್ಯಾಹ್ನ 1 ಗಂಟೆಗೆhttps://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

ಪ್ರಸಾದ್ ಶೆಣೈ ಅವರ “ನೇರಳೆ ಐಸ್ ಕ್ರೀಂ” ಕೃತಿ ವೀರಲೋಕ ಪ್ರಕಾಶನದಿಂದ ಅದ್ದೂರಿ ಬಿಡುಗಡೆ

ಬೆಂಗಳೂರು: ಯುವ ಕತೆಗಾರ, ಕನ್ನಡನಾಡಿನ ಪ್ರತಿಷ್ಠಿತ ಟೊಟೋ ಪ್ರಶಸ್ತಿ ಪುರಸ್ಕೃತ ಬರಹಗಾರ ಕಾರ್ಕಳದ ಪ್ರಸಾದ್ ಶೆಣೈ ಆರ್ ಕೆ ಅವರ ಮೂರನೇ ಕೃತಿ “ನೇರಳೆ ಐಸ್ ಕ್ರೀಂ” ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮ ಸಾಹಿತ್ಯ ಯುಗಾದಿ ಭಾನುವಾರ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ , ಕಾದಂಬರಿಗಾರ್ತಿ ಸಹನಾ ವಿಜಯ್ ಕುಮಾರ್, ವಿಮರ್ಶಕ ಬಸವರಾಜ್ ಸರಬದ, ಸಾಹಿತಿ ಡಾ.ಬೈರಮಂಗಲ ರಾಮೇಗೌಡ, ವೀರಲೋಕದ ಪ್ರತಿಷ್ಠಾನದ ವೀರಕಪುತ್ರ ಶ್ರೀನಿವಾಸ […]