ಸಕಲೇಶಪುರ ಸೇರಿ ಹಲವು ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಭೀತಿ: 16 ಅಪಾಯದ ಪ್ರದೇಶಗಳ ಗುರುತು

ಹಾಸನ: ಜಿಲ್ಲೆಯ ಮಲೆನಾಡು ಭಾಗ, ವಿಶೇಷವಾಗಿ ಸಕಲೇಶಪುರ ತಾಲ್ಲೂಕಿನಲ್ಲಿ ಸಂಭವನೀಯ ಭೂಕುಸಿತದ ಆತಂಕ ಹೆಚ್ಚಾಗಿದ್ದು, ಜಿಲ್ಲಾಡಳಿತ 16 ಭೂಕುಸಿತ ಸಂಭವಿಸಬಹುದಾದ ಸ್ಥಳಗಳು ಹಾಗೂ 4 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಿದೆ. ಸುರಕ್ಷತಾ ದೃಷ್ಟಿಯಿಂದ ಈ ಪ್ರದೇಶಗಳ ನಿವಾಸಿಗಳಿಗೆ ಮನೆ ಖಾಲಿ ಮಾಡುವಂತೆ ಸೂಚನೆ ನೀಡಲಾಗಿದೆ. ಆದರೆ, ಕಳೆದ ಐವತ್ತು ವರ್ಷಗಳಿಂದ ಈ ಪ್ರದೇಶಗಳಲ್ಲಿ ಮನೆ ಕಟ್ಟಿಕೊಂಡು ಜೀವನ ನಡೆಸುತ್ತಿರುವ ಕುಟುಂಬಗಳು, “ಮೊದಲು ಬದಲಿ ಜಾಗ ಅಥವಾ ಸೂಕ್ತ ಪರಿಹಾರ ನೀಡಿ, ಬಳಿಕವೇ ಸ್ಥಳಾಂತರವಾಗುತ್ತೇವೆ” ಎಂದು ಪಟ್ಟು ಹಿಡಿದಿವೆ. […]
ಇನ್ನು ‘ನಮ್ಮ ಮೆಟ್ರೋ’ದಲ್ಲಿ ಈ ಹುಚ್ಚಾಟಗಳನ್ನೆಲ್ಲಾ ಮಾಡಿದ್ರೆ ಬೀಳುತ್ತೆ ಭಾರೀ ದಂಡ! ಜಾಗೃತೆ!

ಬೆಂಗಳೂರು: ಇನ್ಮುಂದೆ ನಮ್ಮ ಮೆಟ್ರೋದಲ್ಲಿ ನಿಯಮ ಉಲ್ಲಂಘಿಸಿದರೆ ಪ್ರಯಾಣಿಕರು ಭಾರೀ ದಂಡ ತೆರಬೇಕಾಗುತ್ತದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಹೊಸ ದಂಡದ ನಿಯಮಗಳನ್ನು ಜಾರಿಗೆ ತಂದಿದೆ. ಹೊಸ ನಿಯಮಗಳ ಪ್ರಕಾರ, ಮೆಟ್ರೋ ಟ್ರ್ಯಾಕ್ಗೆ ಜಿಗಿಯುವುದು, ಟ್ರ್ಯಾಕ್ ಮೇಲೆ ಓಡಾಡುವುದು, ಟಿಕೆಟ್ ಅಥವಾ ಪಾಸ್ಗಳ ದುರ್ಬಳಕೆ ಮಾಡಿದರೆ ₹5,000ರಿಂದ ₹25,000ವರೆಗೆ ದಂಡ ವಿಧಿಸಲಾಗುತ್ತದೆ. ಅಲ್ಲದೆ, ಮೆಟ್ರೋ ರೈಲು ಅಥವಾ ನಿಲ್ದಾಣಗಳಲ್ಲಿ ಅನುಮತಿಯಿಲ್ಲದೆ ವ್ಯಾಪಾರ ನಡೆಸಿದರೂ ₹5,000 ದಂಡ ಪಾವತಿಸಬೇಕಾಗುತ್ತದೆ. ಇದುವರೆಗೆ ಮೆಟ್ರೋದಲ್ಲಿ ರೀಲ್ಸ್ […]
Karnataka Rains: ಕರ್ನಾಟಕದಲ್ಲಿ ಮಳೆ ಚುರುಕು, ಕರಾವಳಿಯಲ್ಲಿ ಅಧಿಕ

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಹೆಚ್ಚು ಸ್ಥಳಗಳಲ್ಲಿ ಭಾರೀ ಮಳೆ ದಾಖಲು ಬೆಂಗಳೂರು: ಕರ್ನಾಟಕದಲ್ಲಿ ಜುಲೈ 8ರ ನಂತರ ಮಳೆ ಪ್ರಮಾಣ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಭಾಗದ ಜಿಲ್ಲೆಗಳು ಸೇರಿದಂತೆ ಹಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಮಳೆ ಮಾಹಿತಿ ಪ್ರಕಾರ, ಉತ್ತರ ಕನ್ನಡ, ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಕಡೆ ಮಳೆಯಾಗಿದೆ.ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ 275 ಮಿ.ಮೀ […]
ಈ ಬಾರಿ ಮಳೆ ಕೈಕೊಟ್ಟಿದ್ಯಾಕೆ? ಎಲ್ ನಿನೋ ರಹಸ್ಯ ಮತ್ತು ಅದರ ಪರಿಣಾಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಈ ಬಾರಿ ಮುಂಗಾರು ಆರಂಭವಾದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯಾಗಿದ್ದರೆ, ಒಳನಾಡಿನ ಅನೇಕ ಪ್ರದೇಶಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ. ಹೀಗಾಗಿ ರೈತರು, ನೀರಾವರಿ ಹಾಗೂ ಕುಡಿಯುವ ನೀರಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಹಾಗಾದರೆ ಈ ವರ್ಷ ಮಳೆ ಕಡಿಮೆಯಾಗಲು ಕಾರಣಗಳೇನು? ಎಲ್ ನಿನೋ (El Niño) ಎಂದರೇನು? ಅದರ ಪರಿಣಾಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ. ಎಲ್ ನಿನೋ ಎಂದರೇನು? ಎಲ್ ನಿನೋ ಎಂಬುದು […]
ಫಿಫಾ ವಿಶ್ವಕಪ್ ಸೆಮಿಫೈನಲ್-ಫೈನಲ್ ಹಿನ್ನೆಲೆ: ಬೆಂಗಳೂರಿನಲ್ಲಿ ಹೋಟೆಲ್, ರೆಸ್ಟೋರೆಂಟ್ಗಳಿಗೆ ತಡರಾತ್ರಿ 3.30ರವರೆಗೆ ಆಹಾರ ಸೇವೆಗೆ ಅನುಮತಿ

ಬೆಂಗಳೂರು,: ಫಿಫಾ ವಿಶ್ವಕಪ್ 2026ರ ನಿರ್ಣಾಯಕ ಪಂದ್ಯಗಳ ಹಿನ್ನೆಲೆಯಲ್ಲಿ ಬೆಂಗಳೂರು ಫುಟ್ಬಾಲ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳ ದಿನಗಳಲ್ಲಿ ನಗರದಲ್ಲಿನ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಬೆಳಗಿನ 3.30 ಗಂಟೆಯವರೆಗೆ ಆಹಾರ ಸೇವೆ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್ ಸಂಘದ (NRAI) ಮನವಿಯನ್ನು ಪರಿಗಣಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಈ ಆದೇಶ […]