ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಮುಂದೂಡಿಕೆ!

ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ಕರಾವಳಿಯ ಮಂಗಳೂರು ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ (ಟ್ರಯಲ್ ರನ್) ಜೂನ್ 3ರಂದು ನಡೆಯಲಿದೆ ಎನ್ನಲಾಗಿತ್ತು, ಆದರೆ ಈ ದಿನಾಂಕವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಇದೇ ತಿಂಗಳೊಳಗೆ ಹೊಸ ದಿನಾಂಕ ನಿಗದಿಪಡಿಸಿ ಪರೀಕ್ಷಾರ್ಥ ಸಂಚಾರ ನಡೆಸುವ ಸಾಧ್ಯತೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ನೈಋತ್ಯ ರೈಲ್ವೆ ಇಲಾಖೆಯು ಜೂನ್ ತಿಂಗಳಲ್ಲಿ ವಂದೇ ಭಾರತ್ ರೈಲಿನ ಟ್ರಯಲ್ ರನ್ ನಡೆಸಲು ತಾತ್ಕಾಲಿಕ ಯೋಜನೆ ರೂಪಿಸಿದೆ. ಆರಂಭದಲ್ಲಿ ನಾಲ್ಕು […]

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಸಂಕಲ್ಪದೊಂದಿಗೆ ಕಟೀಲಿನಲ್ಲಿ ರಂಗ ಪೂಜೆ

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಿನ್ನಿಗೋಳಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಮೇ 31ರಂದು ರಾತ್ರಿ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ರಂಗ ಪೂಜೆ ನೆರವೇರಿಸಲಾಯಿತು. ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ D. K. Shivakumar ಅವರು ಭವಿಷ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿ ಯಾವುದೇ ಅಡೆತಡೆಗಳಿಲ್ಲದೆ ಉತ್ತಮ ಆಡಳಿತ ನೀಡಲೆಂಬ ಸಂಕಲ್ಪದೊಂದಿಗೆ ಈ ಪೂಜೆ ಆಯೋಜಿಸಲಾಗಿತ್ತು. ಕಟೀಲು ಕ್ಷೇತ್ರದ ಅರ್ಚಕರ ನೇತೃತ್ವದಲ್ಲಿ ಶ್ರೀ ದುರ್ಗಾ ಪರಮೇಶ್ವರಿಗೆ ಪ್ರಿಯವಾದ ರಂಗ ಪೂಜೆ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದಲ್ಲಿ […]

ನಾಳೆಯಿಂದ ಶಾಲೆ ಶುರು, ಹಬ್ಬದ ವಾತಾವರಣದಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಬೇಸಿಗೆ ರಜೆ ಮುಗಿದ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನಾಳೆಯಿಂದ (ಜೂನ್ 1) 2026-27ನೇ ಶೈಕ್ಷಣಿಕ ವರ್ಷದ ತರಗತಿಗಳು ಪುನರಾರಂಭವಾಗಲಿವೆ. ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ವಿಶೇಷವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಶಾಲೆಗಳಿಗೆ ಸೂಚನೆ ನೀಡಿದೆ. ಅದರಂತೆ ಶಾಲಾ ಆವರಣವನ್ನು ತಳಿರು-ತೋರಣ, ಹೂವುಗಳು ಹಾಗೂ ಆಕರ್ಷಕ ಅಲಂಕಾರಗಳಿಂದ ಸಿಂಗಾರ ಮಾಡಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಬೇಕು ಎಂದು ತಿಳಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಶಾಲೆಯ ಬಗ್ಗೆ ಉತ್ಸಾಹ ಮತ್ತು ಸಂತಸ ಮೂಡಿಸುವ ಉದ್ದೇಶದಿಂದ ಹಬ್ಬದ ಸಡಗರದ ವಾತಾವರಣವನ್ನು ನಿರ್ಮಿಸಲು […]

ಜೂ. 3 ರಂದು ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಬಹುದಿನಗಳ ಕುತೂಹಲಕ್ಕೆ ತೆರೆ ಬೀಳುವ ಸಮಯ ನಿಗದಿಯಾಗಿದ್ದು ಡಿಕೆ ಶಿವಕುಮಾರ್ D. K. Shivakumar ಅವರು ಜೂನ್ 3ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸಮಾರಂಭವು ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಸರಳವಾಗಿ ನಡೆಯಲಿದ್ದು, ಯಾವುದೇ ಅದ್ಧೂರಿ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ತೊಂದರೆಯಾಗದಂತೆ ಕಾರ್ಯಕ್ರಮವನ್ನು ರಾಜಭವನ ಆವರಣದಲ್ಲೇ ನಡೆಸಲು ತೀರ್ಮಾನಿಸಲಾಗಿದೆ. ಮೊದಲಿಗೆ […]

ಮಹಿಳಾ ಸಮೃದ್ಧಿ ಯೋಜನೆ: ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ 1.40 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿ ಸಾಲ; ಅರ್ಜಿ ಸಲ್ಲಿಕೆ ಹೇಗೆ?

ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಿಳಾ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ. ಮಹಿಳಾ ಸಮೃದ್ಧಿ ಯೋಜನೆಯು ಗ್ರಾಮೀಣ ಮತ್ತು ಹಿಂದುಳಿದ ಸಮುದಾಯಗಳ ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯವನ್ನು ಸಾಧಿಸಲು ಮತ್ತು ಸಮಾಜದ ಮುಖ್ಯವಾಹಿನಿಗೆ ಬರಲು ಒಂದು ಉತ್ತಮ ಅವಕಾಶವನ್ನು ಒದಗಿಸುತ್ತದೆ. ಈ ಯೋಜನೆಯು ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲಗಳನ್ನು ಒದಗಿಸಿ, ಸ್ವಯಂ ಉದ್ಯೋಗ ಮತ್ತು ಆದಾಯ-ಉತ್ಪಾದಕ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರೋತ್ಸಾಹಿಸುತ್ತದೆ. ಈ ಹಿನ್ನೆಲೆಯಲ್ಲಿ ಏನಿದು ಮಹಿಳಾ ಸಮೃದ್ಧಿ ಯೋಜನೆ? ಈ ಯೋಜನೆಯಡಿ ದೊರೆಯುವ […]