ಇಂದಿನಿಂದ ರಸ್ತೆಗಳಲ್ಲಿ ಓಡಾಡಲಿದೆ ಕ.ರಾ. ರ.ಸಾ.ಸಂಸ್ಥೆಯ ಅಶ್ವಮೇಧ ಕ್ಲಾಸಿಕ್ ಹೈ ಟೆಕ್ ಬಸ್ಸುಗಳು

ಬೆಂಗಳೂರು: ಇಂದಿನಿಂದ ರಾಜ್ಯದ ರಸ್ತೆಗಳಲ್ಲಿ ನೂತನ 100 ಅಶ್ವಮೇಧ ಕ್ಲಾಸಿಕ್ (Ashvamedha Classic) ಬಸ್ಗಳು ಕಾರ್ಯಾರಂಭ ಮಾಡಲಿದ್ದು, ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ಬಸ್ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಅಶ್ವಮೇಧ ಬಸ್ಗಳು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಒಟ್ಟು 800 ಬಸ್ಗಳ ಪೈಕಿ ಇಂದು 100 ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮುಂದಿನ ಹಂತದಲ್ಲಿ ಇನ್ನುಳಿದ ಬಸ್ಗಳು ಸೇರ್ಪಡೆಗೊಳ್ಳಲಿವೆ. […]
ಚುನಾವಣಾ ‘ಗ್ಯಾರಂಟಿ’, ‘ಭಾಗ್ಯ’ಗಳ ಆಮಿಷಕ್ಕೆ ವಿರಾಮ ಕೋರಿ ಅರ್ಜಿ ಸಲ್ಲಿಕೆ: ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಚುನಾವಣೆ ವೇಳೆ ಮತದಾರರಿಗೆ ‘ಗ್ಯಾರಂಟಿ’, ‘ಭಾಗ್ಯ’ಗಳ ಆಮಿಷವೊಡ್ಡಿ ಮತ ಪಡೆಯುವ ರಾಜಕೀಯ ಪಕ್ಷಗಳ ಮಾದರಿಗೆ ಕರ್ನಾಟಕ ರಾಜ್ಯ ಅವಕಾಶ ಮಾಡಿಕೊಟ್ಟಿದ್ದು, ಇಂತಹ ನಡೆ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂಬ ಮನವಿಗೆ ಹೈಕೋರ್ಟ್ ಸ್ಪಂದಿಸಿದೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ‘ಗ್ಯಾರಂಟಿ’ ರೂಪದಲ್ಲಿ ಆಮಿಷ ನೀಡಲಾಗಿದ್ದು, ಅಂತಹ ಅಕ್ರಮಗಳನ್ನು ತಡೆಯುವಂತೆ ಆಯಾ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ […]
ಫೆ. 14 ರಂದು ಶಬರಿಮಲೆಯಲ್ಲಿ ಕುಂಭಮಾಸ ಪೂಜೆ

ತಿರುವನಂತಪುರ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯ ಗರ್ಭಗುಡಿ ಕುಂಭಮಾಸ ಪೂಜೆಯ ಪ್ರಯುಕ್ತ ಫೆ. 13ರಂದು ತೆರೆದುಕೊಳ್ಳಲಿದೆ. ಸಂಜೆ 5 ಗಂಟೆಗೆ ತಂತ್ರಿವರ್ಯರಾದ ಕಂಠಾರರ್ ಮಹೇಶ್ ಮೋಹನ್ ಉಪಸ್ಥಿತಿಯಲ್ಲಿ ಮೇಲ್ಶಾಂತಿ ಪಿ.ಎನ್. ಮಹೇಶ್ ಗರ್ಭಗುಡಿಯ ಬಾಗಿಲು ತೆರೆದು ದೀಪ ಬೆಳಗಿಸಲಿದ್ದಾರೆ. ಫೆ.14ರ ಬೆಳಗ್ಗೆ 5:30ಕ್ಕೆ ಮಹಾಗಣಪತಿ ಹೋಮದೊಂದಿಗೆ ಪೂಜೆಗಳು ಆರಂಭವಾಗಲಿದ್ದು, ಫೆ. 18ರವರೆಗೆ ಪ್ರತಿದಿನ ಉದಯಾಸ್ತಮಯ ಪೂಜೆ, ಪಡಿಪೂಜೆ, ಕಲಶಾಭಿಷೇಕ, ಪುಷ್ಪಾಭಿಷೇಕ, ಅಪ್ಪಾಭಿಷೇಕ ನಡೆಯಲಿದೆ. ಈ ಅವಧಿಯಲ್ಲಿ ಭೇಟಿ ನೀಡುವ ಭಕ್ತರಿಗಾಗಿ […]
ಡಿ.ಕೆ.ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆ: ಕ್ರಮಕ್ಕೆ ಒತ್ತಾಯಿಸಿದ ಪ್ರಹ್ಲಾದ್ ಜೋಶಿ

ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶುಕ್ರವಾರ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ “ಪ್ರತ್ಯೇಕ ದೇಶದ ಬೇಡಿಕೆ” ಹೇಳಿಕೆಯನ್ನು ಪ್ರಸ್ತಾಪಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು, ಕೆಳಮನೆಯಲ್ಲಿ ಮಾತನಾಡಿದ ಜೋಶಿ, ಲೋಕಸಭಾ ಸಂಸದರಾಗಿ ಇದು ಅವರ ಪ್ರಮಾಣ ವಚನದ ಉಲ್ಲಂಘನೆಯಾಗಿದೆ ಎಂದಿದ್ದಾರೆ. “ನಾನು ಸೋನಿಯಾ ಗಾಂಧಿಯವರಿಂದ ಕ್ಷಮೆಯಾಚನೆ ಮತ್ತು ಕ್ರಮಕ್ಕೆ ಒತ್ತಾಯಿಸುತ್ತೇನೆ. ಇದು ಅವರ (ಸಂಸದರಾಗಿ) ಪ್ರಮಾಣ ವಚನದ ಉಲ್ಲಂಘನೆಯಾಗಿದೆ. ವಿಷಯವನ್ನು ನೈತಿಕ ಸಮಿತಿಗೆ ಕಳುಹಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಕಾಂಗ್ರೆಸ್ ಕ್ರಮ ತೆಗೆದುಕೊಳ್ಳಬೇಕು. ಅವರು ತೆಗೆದುಕೊಳದಿದ್ದರೆ ದೇಶದ […]
ಬೆಂಗಳೂರು: ಅಖಿಲ ಭಾರತೀಯ ಕಲಾಸಾಧಕ ಸಂಗಮ ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು: ಸಂಸ್ಕಾರ ಭಾರತಿ ವತಿಯಿಂದ ಆರ್ಟ್ ಆಫ್ ಲಿವಿಂಗ್ ಆವರಣದಲ್ಲಿ ಫೆಬ್ರವರಿ 1 ರಿಂದ 4 ವರೆಗೆ ಆಯೋಜಿಸಲಾಗಿರುವ ಅಖಿಲ ಭಾರತೀಯ ಕಲಾಸಾಧಕ ಸಂಗಮ ಕಾರ್ಯಕ್ರಮ ಗುರುವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ವಿಜಯನಗರ ರಾಜವಂಶಸ್ಥ ಕೃಷ್ಣದೇವರಾಯ, ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿ, ಕಲಾವಿದ ರವೀಂದ್ರ ಯಾವಗಲ್, ಸಂಸ್ಕಾರ ಭಾರತಿಯ ಅಖಿಲ ಭಾರತೀಯ ಅಧ್ಯಕ್ಷ ವಾಸುದೇವ ಕಾಮತ್, ಉಪಾಧ್ಯಕ್ಷ ಮೈಸೂರು ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಅಶ್ವಿನ್ ದಳ್ವಿ, ಕರ್ನಾಟಕ […]