ಲೋಕಸಭಾ ಚುನಾವಣೆ ಹಿನ್ನೆಲೆ: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೊದಲ ಕಾರ್ಯಕಾರಿಣಿ ಸಭೆ

ಬೆಂಗಳೂರು: ಬಿ.ವೈ.ವಿಜಯೇಂದ್ರ ಭಾಜಪಾದ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕಗೊಂಡು ರಾಜ್ಯ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಶನಿವಾರ ನಡೆಯಲಿದೆ. ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ. ಶುಕ್ರವಾರ ಕಾರ್ಯಾಕಾರಿಣಿ ನಡೆಯುವ ಸ್ಥಳದಲ್ಲಿನ ಸಿದ್ಧತೆಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ಮುಂದಿನ ಕಾರ್ಯ […]
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಎನ್ಪಿಎಸ್ ನಿಂದ ಹೊರಬಂದು ಒಪಿಎಸ್ಗೆ ಒಳಪಡಲು ಅವಕಾಶ; ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, 2006ರ ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ನೌಕರರು, ರಾಷ್ಟ್ರೀಯ ಪಿಂಚಣಿ ಯೋಜನೆ (NPS) ವ್ಯಾಪ್ತಿಯಿಂದ ಹೊರಬಂದು ಹಳೆಯ ಪಿಂಚಣಿ ಯೋಜನೆಗೆ (OPS) ಬದಲಾಗಲು ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು ರಾಜ್ಯ ಸರ್ಕಾರ ವಿಧಿಸಿದೆ. ಹಳೆಯ ಪಿಂಚಣಿ ಸೇವೆಗೆ ಒಳಪಡಲು ಸರ್ಕಾರಿ ನೌಕರರು ತಾವೇ ಒಪ್ಪಿಗೆ ಸೂಚಿಸಬೇಕು. […]
ವಿಶ್ವ ವಿಸ್ಮಿತ ಮಂದಸ್ಮಿತ ಸಜೀವ ಕಣ್ಣುಗಳ ರಾಮಲಲ್ಲಾನ ನಿರ್ಮಾತೃವಿಗೆ ಬೆಂಗಳೂರಿನಲ್ಲಿ ಭರ್ಜರಿ ಸ್ವಾಗತ: ರಾಮನ ಆದೇಶದಂತೆ ಕೆಲಸ ಮಾಡಿದ್ದೇನೆ ಎಂದ ಅರುಣ್ ಯೋಗಿರಾಜ್

ಬೆಂಗಳೂರು: ವಿಶ್ವವೇ ವಿಸ್ಮಿತವಾಗಿ ನೋಡುತ್ತಿರುವ ಮಂದಸ್ಮಿತ ಸಜೀವ ನೇತ್ರಗಳ ರಾಮಲಲ್ಲಾ ವಿಗ್ರಹದ ಸೃಷ್ಟಿಕರ್ತ ಮೈಸೂರಿನ ಅರುಣ್ ಯೋಗಿರಾಜ್ ಜ.24 ರಂದು ರಾಜ್ಯಕ್ಕೆ ಮರಳಿದ್ದಾರೆ. ಅರುಣ್ ಯೋಗಿರಾಜ್ ಅವರಿಗೆ ದೇಶ ವಿದೇಶಗಳಿಂದ ಮೆಚ್ಚುಗೆಯ ಸುರಿಮಳೆಯಾಗುತ್ತಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅರುಣ್ ಅವರಿಗೆ ಭರ್ಜರಿ ಸ್ವಾಗತ ಕೋರಲಾಗಿದೆ. ಜನರು ಅರುಣ್ ಯೋಗಿರಾಜ್ ಅವರನ್ನು ಮುತ್ತಿಕೊಂಡಿದ್ದು, ಪೇಟ ತೊಡಿಸಿ ಶಾಲು ಹೊದೆಸಿ ಗೌರವಿಸುತ್ತಿರುವ ದೃಶ್ಯಗಳು ಕಂಡುಬಂದಿವೆ. ದೇಶಾದ್ಯಂತ ಜನರಿಂದ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆದಿರುವ ಬಗ್ಗೆ ಹರ್ಷಿತರಾಗಿರುವ ಅರುಣ್ […]
ಲೋಕಸಭೆ ಚುನಾವಣೆ ಬಳಿಕ ಬಿಬಿಎಂಪಿ ಚುನಾವಣೆ: ಡಿಕೆಶಿ

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅಡ್ಡಿಪಡಿಸಿದ್ದರ ವಿರುದ್ಧ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿಕೆ.ಶಿವಕುಮಾರ್, ಮೊದಲು ಲೋಕಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆ ಬಳಿಕ ಒಂದು ಅಥವಾ ಎರಡು ತಿಂಗಳುಗಳಲ್ಲಿ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳು ನಡೆಯಲಿದ್ದು ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದರು. ನಾವು 225 […]
ಮೈಸೂರಿನ ಕೃಷ್ಣಶಿಲೆ, ಶಿಲ್ಪಿ ಅರುಣ್ ಯೋಗಿರಾಜ್: ಅಯೋಧ್ಯೆಯಲ್ಲಿ ಮುದ್ದು ‘ಬಾಲರಾಮ’ನಾದ ಅವಿಸ್ಮರಣೀಯ ಕ್ಷಣಕ್ಕೆ ವಿಶ್ವವೇ ಸಾಕ್ಷಿ!!

ಮೈಸೂರು: ಕರ್ನಾಟಕದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿದ ರಾಮಲಲ್ಲಾ ಮೂರ್ತಿಯನ್ನು ಅಯೋಧ್ಯೆಯ ರಾಮಮಂದಿರದಲ್ಲಿ ಸೋಮವಾರದಂದು ಶಂಕುಸ್ಥಾಪನೆ ಮಾಡಲಾಯಿತು. ನೋಡಿದರೆ ಮತ್ತೆ ಮತ್ತೆ ನೋಡಬೇಕಿನಿಸುವಷ್ಟು ಮುದ್ದಾಗಿರುವ ಈನೂತನ ವಿಗ್ರಹವು 150-200 ಕೆಜಿ ತೂಕದ ಕಲ್ಲಿನಿಂದ ಮಾಡಲ್ಪಟ್ಟಿದೆ. ವಿಗ್ರಹವು ಐದು ವರ್ಷದ ಬಾಲಕ ರಾಮ ನಿಂತಿರುವ ಭಂಗಿಯಲ್ಲಿದೆ. ದೇಶದ ಇತರ ಇಬ್ಬರು ನುರಿತ ಕುಶಲಕರ್ಮಿಗಳಾದ ಬೆಂಗಳೂರಿನ ಗಣೇಶ್ ಭಟ್ ಮತ್ತು ರಾಜಸ್ಥಾನದ ಸತ್ಯ ನಾರಾಯಣ ಪಾಂಡೆ ಅವರೊಂದಿಗೆ ಅರುಣ್ ಯೋಗಿರಾಜ್ ಅವರಿಗೆ ಶ್ರೀರಾಮನ ಮಗುವಿನ ರೂಪವನ್ನು ಬಿಂಬಿಸುವ […]