ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆ ಮನೆಯಲ್ಲಿ 2.50 ಲಕ್ಷ ರೂ ನಾಪತ್ತೆ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಅತ್ತೆ ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 31ರಂದು ಮಧ್ಯಾಹ್ನ ಚಂದ್ರ ಲೇಔಟ್ನಲ್ಲಿರುವ ತಮ್ಮ ಮನೆಯ ಕೋಣೆಯ ಕಪಾಟಿನಲ್ಲಿ 2.50 ಲಕ್ಷ ರೂ.ಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಜ.5 ರಂದು ಹಣಕ್ಕಾಗಿ ಹುಡುಕಿದಾಗ ಹಣ ಅಲ್ಲಿರಲಿಲ್ಲ. ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸ್ […]
ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಏಪ್ರಿಲ್ 18 ಮತ್ತು 19ರಂದು ಪರೀಕ್ಷೆ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮೊದಲು ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಿಗದಿಯಾಗಿತ್ತು. ‘ಏಪ್ರಿಲ್ 21ರಂದು ಎನ್ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ವೃತ್ತಿಪರ ಕೋರ್ಸುಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ […]
ಥಾಣೆ ಘೋಡ್ ಬಂದರ್ ರೋಡ್ ಕನ್ನಡ ಅಸೋಸಿಯೇಷನ್ ನ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ವೈಭವ ಕಾರ್ಯಕ್ರಮ

ಥಾಣೆ: ಥಾಣೆ ಪರಿಸರದ ಅಲ್ಲಿರುವ ಕನ್ನಡ ಮನಸುಗಳನ್ನು ಒಗ್ಗೂಡಿಸಿ ಘೋಡ್ ಬಂದರ್ ಕನ್ನಡ ಅಸೋಸಿಯೇಷನ್ ಸ್ಥಾಪಿಸುವ ಮೂಲಕ ಕನ್ನಡ ಪರ ಸೇವೆಯು ಈ ಸಂಘದ ಮುಖೇನ ನಡೆದಿದೆ. ಜನ್ಮ ಭೂಮಿಯ ಭಾಷೆ ಸಂಸ್ಕೃತಿ ಸಂಸ್ಕಾರವನ್ನು ಕರ್ಮ ಭೂಮಿ ಮೇಲೆ ಸಾದರಪಡಿಸುವ ಮಹೋನ್ನತ ಕಾರ್ಯ ಈ ಸಂಘದ ವತಿಯಿಂದ ನಡೆದಿದೆ. 10 ವರ್ಷಗಳ ಹಿಂದೆ ಸ್ಥಾಪಕರು ಪಟ್ಟ ಶ್ರಮ ಶ್ರದ್ಧೆ ಸಂಘಟನೆಯು ಇಂದು ದೊಡ್ಡ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ ಎಂದು ಸಂಘದ ಅಧ್ಯಕ್ಷ ಹರೀಶ್ ಡಿ. ಸಾಲ್ಯಾನ್ ಹೇಳಿದರು. […]
ಸ್ಟಾರ್ಟ್ ಅಪ್ ಕಂಪನಿ ಸಂಸ್ಥಾಪಕಿಯ ಮಗು ಹತ್ಯೆ ಪ್ರಕರಣ: ಮರಣೋತ್ತರ ಪರೀಕ್ಷೆ ಸಂಪೂರ್ಣ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ?

ಬೆಂಗಳೂರು: ಇಲ್ಲಿನ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್ ಅಪ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸುಚನಾ ಸೇಠ್ ಅವರ ನಾಲ್ಕು ವರ್ಷದ ಮಗ ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ಡಾ.ಕುಮಾರ್ ನಾಯ್ಕ್ ತಿಳಿಸಿದ್ದಾರೆ. ಮಗುವನ್ನು ಕತ್ತು ಹಿಸುಕಿ ಸಾಯಿಸಲಾಗಿದೆ. ಒಂದೋ ಬಟ್ಟೆ ಅಥವಾ ದಿಂಬು ಬಳಸಲಾಗಿದೆ. ಕತ್ತು ಹಿಸುಕಿದ ಕಾರಣ ಮಗು ಸಾವನ್ನಪ್ಪಿದೆ. ಕೈಗಳನ್ನು ಬಳಸಿ ಕತ್ತು ಹಿಸುಕಿದಂತೆ ಕಾಣುತ್ತಿಲ್ಲ. ದಿಂಬು ಅಥವಾ ಇನ್ನಾವುದೋ ವಸ್ತುಗಳನ್ನು ಬಳಸಿದಂತೆ ತೋರುತ್ತಿದೆ. ಮಗುವಿನಲ್ಲಿನ ರಿಗರ್ ಮೋರ್ಟಿಸ್ ಪರಿಹಾರವಾಗಿದೆ […]
ಜ. 23 ರಂದು ಪಿಎಸ್ಐ ಮರು ಪರೀಕ್ಷೆ ನಿಗದಿ: ಅಭ್ಯರ್ಥಿಗಳಿಗಾಗಿ ಸೂಚನೆ ಪ್ರಕಟಿಸಿದ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ನೇಮಕಾತಿ ಹಗರಣದಿಂದಾಗಿ ರದ್ದಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆಯ ಸಿವಿಲ್ ಸಬ್ ಇನ್ಸ್ಪೆಕ್ಟರ್ (PSI) ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜನವರಿ 23ರಂದು ಪರೀಕ್ಷೆ ನಿಗದಿ ಪಡಿಸಿದೆ. ಈ ಹಿಂದೆ ಪರೀಕ್ಷೆ ನಡೆಸಿದ್ದು ನೇಮಕಾತಿಯಲ್ಲಿ ಹಗರಣ ನಡೆದ ಕಾರಣ ರದ್ದುಪಡಿಸಲಾಗಿತ್ತು. ಈಗ ಹೊಸ ದಿನಾಂಕವನ್ನು ನಿಗದಿಪಡಿಸಿ ಪಿಎಸ್ಐ ಮರು ಪರೀಕ್ಷೆಗೆ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಸಂದರ್ಭ ಹಲವಾರು ಸೂಚನೆಗಳನ್ನು ನೀಡಲಾಗಿದ್ದು ಇದನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ರಮ್ಯಾ ತಿಳಿಸಿದ್ಧಾರೆ. […]