ಕಂಬಳ ಅಭಿಮಾನಿಗಳಿಗೆ ಗುಡ್ ನ್ಯೂಸ್: 2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ.

ಮೂಡುಬಿದಿರೆ: 2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟವಾಗಿದ್ದು, ಕಂಬಳ ಸೀಸನ್ ಅಕ್ಟೋಬರ್ 26 ರಿಂದ 2025ರ ಏಪ್ರಿಲ್ 19ರವರೆಗೆ ನಡೆಯಲಿದೆ. ಹೋದ ಸಲ ಬೆಂಗಳೂರು ಅರಮನೆ ಮೈದಾನದಲ್ಲಿ ಕಂಬಳ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ಬಾರಿ ಮಲೆನಾಡು ಭಾಗದ ಶಿವಮೊಗ್ಗದಲ್ಲಿ ಕಂಬಳ ನಡೆಸಲು ತೀರ್ಮಾನಿಸಲಾಗಿದೆ. ಈ ಸೀಸನ್ ನ ಮೊದಲ ಕಂಬಳ ಬೆಂಗಳೂರಿನಲ್ಲಿ ನಡೆದರೆ, ಅಂತಿಮ ಕಂಬಳವು ಶಿವಮೊಗ್ಗದಲ್ಲಿ ನಡೆಯಲಿದೆ. ಮೂಡುಬಿದಿರೆಯಲ್ಲಿ ಶನಿವಾರ (ಆ.10) ನಡೆದ ಜಿಲ್ಲಾ ಕಂಬಳ ಸಮಿತಿಯ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. 2024-25ರ […]
ಶಿರಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಭಾರೀ ಭೂಕುಸಿತ: ವಾಹನ ಸಂಚಾರ ಸ್ಥಗಿತ, ಈ ಮಾರ್ಗದಲ್ಲಿ ಸಂಚರಿಸಿ..!

ಹಾಸನ: ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆ, ಶಿರಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ನಲ್ಲಿ ಘಟನೆ ನಡೆದಿದೆ. ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಗುಡ್ಡ ಕುಸಿತವಾಗಿದೆ.ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ. ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ. ಸಂಜೆ ವೇಳೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದ್ದು, ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.ಸಂಚರಿಸುವ ಮಾರ್ಗ:ಮಂಗಳೂರು – ಬೆಂಗಳೂರು […]
ಕೇರಳ ವಯನಾಡಿನಲ್ಲಿ ಭಾರೀ ಭೂಕುಸಿತ: 19ಕ್ಕೂ ಹೆಚ್ಚು ಸಾವು, 50 ಮಂದಿಗೆ ಗಾಯ, ರಕ್ಷಣಾ ಕಾರ್ಯ ಮುಂದುವರಿಕೆ.

ಕೇರಳ: ಕೇರಳದ ವಯನಾಡ್ ಭಾರೀ ಭೂಕುಸಿತಗಳು ಸಂಭವಿಸಿದ ಪರಿಣಾಮ 19 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಹಾಗೂ 50 ಮಂದಿಗೆ ಗಾಯಗಳಾಗಿವೆ. ಇನ್ನೂ ಹಲವಾರು ಮಂದಿ ಜನರು ಸಿಲುಕಿರುವ ಶಂಕೆಯಿದೆ. ಇನ್ನುಳಿದವರ ಪತ್ತೆಗಾಗಿ ರಕ್ಷಣಾ ಕಾರ್ಯ ಮುಂದುವರಿಯುತ್ತಿದ್ದು, ಇದೀಗ ಏರ್’ಫೋರ್ಸ್ ಕೂಡ ಸಹಾಯ ಮಾಡಲಿದೆ. ಮೆಪ್ಪಾಡಿ ಸಮೀಪದ ಗುಡ್ಡಗಾಡು ಪ್ರದೇಶಗಳಲ್ಲಿ ಎನ್ಡಿಆರ್ಎಫ್ ಸೇರಿದಂತೆ ಹಲವು ಏಜೆನ್ಸಿಗಳು ರಕ್ಷಣಾ ಕಾರ್ಯಾಚರಣೆಗೆ ಸೇರಿಕೊಂಡಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಎಲ್ಡಿಎಫ್ […]
ಅಂಕೋಲ ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆ ಸ್ಥಗಿತ: ಲಾರಿ ಚಾಲಕನನ್ನು ಪತ್ತೆ ಮಾಡಿಸುವಂತೆ ಕೇರಳ ಸಿಎಂ ಮನವಿ.

ಅಂಕೋಲ: ಅಂಕೋಲಾದ ಶಿರೂರು ಗುಡ್ಡ ಕುಸಿತದ ಅವಘಡದಲ್ಲಿ ನಾಪತ್ತೆಯಾಗಿರುವ ಕೇರಳ ಮೂಲದ ಲಾರಿ ಚಾಲಕನನ್ನು ಪತ್ತೆ ಮಾಡಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಶಿರೂರಿನಲ್ಲಿ ನಾಪತ್ತೆಯಾದವರ ಪತ್ತೆ ಮಾಡುವ ಮತ್ತು ರಕ್ಷಿಸುವ ಕಾರ್ಯ ಕೈಗೊಂಡಿದ್ದಕ್ಕೆ ಕರ್ನಾಟಕ ಸರ್ಕಾರವನ್ನು ಶ್ಲಾಘಿಸಿದ ವಿಜಯನ್, ‘ಸ್ಥಳದಲ್ಲಿ ಶೋಧ ಕಾರ್ಯವನ್ನು ನಿಲ್ಲಿಸಲಾಗಿದೆ ಎಂದು ಹಲವು ವರದಿಗಳು ಹೇಳುತ್ತಿವೆ. ಆದರೆ ಕೊನೆಯವರೆಗೂ ಅಗತ್ಯವಿರುವ ಎಲ್ಲಾ ಸಾಧನಗಳನ್ನು ಬಳಸಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲು ನಿರ್ದೇಶನ ನೀಡುವಂತೆ […]
ದರ್ಶನ್ ಬಂಧನ ಮುಕ್ತಿಗಾಗಿ ಪತ್ನಿಯಿಂದ ಕೊಲ್ಲೂರಿನಲ್ಲಿ ಪ್ರಾರ್ಥನೆ

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಚಿತ್ರನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ತಮ್ಮ ಆಪ್ತರ ಜೊತೆ ಗುರುವಾರ ಸಂಜೆ ಇಲ್ಲಿಗೆ ಆಗಮಿಸಿದ ವಿಜಯಲಕ್ಷ್ಮಿ ಅವರು ಇಂದು ಬೆಳಿಗ್ಗೆ ನವ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ. ದರ್ಶನ್ ಬಂಧಮುಕ್ತಿಗಾಗಿ ಪ್ರಾರ್ಥನೆ- ಸಂಕಲ್ಪ ಮಾಡಿರುವ ವಿಜಯಲಕ್ಷ್ಮಿರಾತ್ರಿ ಕೊಲ್ಲೂರಿನಲ್ಲಿಯೇ ವಾಸ್ತವ್ಯ ಹೂಡಿ ಮುಂಜಾನೆ ನವಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿನ ಅರ್ಚಕರಾದ ನರಸಿಂಹ ಅಡಿಗ ನೇತೃತ್ವದಲ್ಲಿ ಚಂಡಿಕಾಯಾಗ ನಡೆಯಿತು.ಅರ್ಚಕ ಸುಬ್ರಹ್ಮಣ್ಯ ಅಡಿಗ ಚಂಡಿಕಾಯಾಗಕ್ಕೆ ಸಂಕಲ್ಪ […]