ಗೋವಾದಲ್ಲಿ ತನ್ನ 4 ವರ್ಷದ ಮಗನನ್ನು ಹತ್ಯೆಗೈದು ಶವದ ಜೊತೆ ಕರ್ನಾಟಕಕ್ಕೆ ಪ್ರಯಾಣಿಸಿದ ಬೆಂಗಳೂರಿನ ಸ್ಟಾರ್ಟ್‌ಅಪ್ ಸಂಸ್ಥಾಪಕಿ: ಚಿತ್ರದುರ್ಗದಲ್ಲಿ ಬಂಧನ

ಪಣಜಿ: ಬೆಂಗಳೂರಿನಲ್ಲಿ ಸ್ಟಾರ್ಟ್‌ಅಪ್ ಸಂಸ್ಥಾಪಕಿಯಾಗಿರುವ 39 ವರ್ಷದ ಮಹಿಳೆಯೊಬ್ಬಳು ಗೋವಾದಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆಗೈದಿದ್ದು ಮಗನ ಶವದೊಂದಿಗೆ ಕರ್ನಾಟಕಕ್ಕೆ ಪ್ರಯಾಣಿಸಿರುವ ಘಟನೆ ವರದಿಯಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್‌ಅಪ್ ಮೈಂಡ್‌ಫುಲ್ ಎಐ ಲ್ಯಾಬ್‌ನ ಸಹ ಸಂಸ್ಥಾಪಕಿ ಸುಚನಾ ಸೇಠ್ ಅವರನ್ನು ಸೋಮವಾರದಂದು ಕರ್ನಾಟಕದ ಚಿತ್ರದುರ್ಗದಲ್ಲಿ ಆಕೆಯ ಮಗನ ಶವದ ಚೀಲದ ಜೊತೆ ಬಂಧಿಸಲಾಗಿದೆ. ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಆಕೆ ತನ್ನ ಮಗನನ್ನು ಕೊಂದಿದ್ದಾಳೆ ಎಂದು ವರದಿ ಹೇಳಿದೆ. ಆದರೆ ಕೊಲೆಯ ಉದ್ದೇಶ ಇನ್ನೂ ತಿಳಿದಿಲ್ಲ. […]

ಅಸಂಘಟಿತ ವಲಯದ ಕಾರ್ಮಿಕರ ಗ್ರಾಚ್ಯುಟಿ ಪಾವತಿ ಕಾಯ್ದೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಅಸಂಘಟಿತ ವಲಯದ ಕಾರ್ಮಿಕರು ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಗ್ರಾಚ್ಯುಟಿ ಪಾವತಿ ಕಾಯ್ದೆ 2024ನ್ನು ಜಾರಿಗೆ ತರುವ ಕಾರ್ಮಿಕ ಇಲಾಖೆಯ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕಾಯ್ದೆಯ ಅನುಷ್ಠಾನದಿಂದ ಕಾರ್ಖಾನೆಗಳು, ಅಂಗಡಿಗಳು ಮತ್ತು ಇತರ ವಾಣಿಜ್ಯ ಮತ್ತು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುವವರಿಗೆ ಸಹಾಯವಾಗುತ್ತದೆ. ಸಂಘಟಿತ ವಲಯದಲ್ಲಿನ ಪ್ರಾವಿಡೆಂಟ್ ಫಂಡ್ ಸೌಲಭ್ಯದ ರೀತಿಯಲ್ಲಿ ಅವರು ವಲಯದ ಯಾವುದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ ವರ್ಷಗಳ ಗ್ರಾಚ್ಯುಟಿಯನ್ನು […]

ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆಯನ್ನು’ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸರ್ಕಾರ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ. ಇತ್ತೀಚೆಗೆ ತಮ್ಮ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಗ್ರೀವಾಜ್ಞೆ ಮೂಲಕ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಜಾರಿ ಮಾಡುವುದಾಗಿ ತಿಳಿಸಿದ್ದರು. […]

ಕರಾವಳಿ-ಮಲೆನಾಡಿನಲ್ಲಿ ಅಕಾಲಿಕ ಮಳೆ: ಕಾಫಿ, ಅಡಿಕೆ ಬೆಳೆಗಾರರಲ್ಲಿ ಆತಂಕ

ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ರಾಜ್ಯದ ಕೆಲವು ಭಾಗಗಳಲ್ಲಿ ಅಕಾಲಿಕ ಮಳೆ ಸುರಿಯುತ್ತಿದೆ. ಮಳೆ ನಿರೀಕ್ಷಿಸದ ರೈತರು ಅಕಾಲಿಕ ಮಳೆಯಿಂದ ಕಂಗಾಲಾಗಿದ್ದಾರೆ. ಅದರಲ್ಲೂ ಇದು ಕಾಫಿ ಬೆಳೆಯ ಸಮಯವಾಗಿದ್ದು, ಕಟಾವು ಮಾಡಿರುವ ಕಾಫಿ ಬೆಳೆ ಕೂಡ ಮಳೆಗೆ ಹಾನಿಯಾಗುವ ಭೀತಿ ಎದುರಾಗಿದೆ. ಕೊಡಗಿನ ನಾಪೋಕ್ಲು ಹಾಗೂ ಮಡಿಕೇರಿ ಭಾಗದಲ್ಲಿ ನಿರಂತರ ಮಳೆ ಬೀಳುತ್ತಿದ್ದು, ಕಾಫಿ ಹಣ್ಣುಗಳು ಹಾಳಾಗುವ ಸಾಧ್ಯತೆ ಇದೆ ಎಂದು ಬೆಳೆಗಾರರು ಗಾಬರಿಯಾಗಿದ್ದಾರೆ. ಚಿಕ್ಕಮಗಳೂರು,ಕೊಡಗು ಹಾಗೂ ಮಡಿಕೇರಿಯ ಕೆಲವು ಭಾಗಗಳಲ್ಲಿ ಕಾಫಿ ಕೊಯ್ಲು ಮಾಡಿ ಒಣಗಲು […]

ಮುಖ್ಯಮಂತ್ರಿ ಪುತ್ರ ಯತೀಂದ್ರ ಹೇಳಿಕೆಗೆ ಪೇಜಾವರ ಸ್ವಾಮೀಜಿ ತಿರುಗೇಟು

ವಿಜಯಪುರ: ಬಿಜೆಪಿ ಮತ್ತು ಆರ್​ಎಸ್​ಎಸ್ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತಿವೆ ಎಂಬ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ವಿಜಯಪುರ ನಗರದ ಜ್ಞಾನ ಯೋಗಾಶ್ರಮಕ್ಕೆ ಗುರುವಾರ ಭೇಟಿ ನೀಡಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗದ್ದುಗೆ ದರ್ಶನ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಯತೀಂದ್ರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಭಾರತವನ್ನು ಹಿಂದೂರಾಷ್ಟ್ರ ಮಾಡಿದರೆ ಪಾಕಿಸ್ತಾನ ಮಾಡಲು ಯಾರೋ ಸಿದ್ಧತೆ ನಡೆಸುತ್ತಿದ್ದಾರೋ ಏನೋ. […]