ಮಕ್ಕಳು ಹೂ ಕಿತ್ತದ್ದಕ್ಕೆ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿದ ಭೂಪ: ಮಹಿಳೆ ಸ್ಥಿತಿ ಚಿಂತಾಜನಕ

ಬೆಳಗಾವಿ: ಅಂಗನವಾಡಿ ಮಕ್ಕಳು ಹೂ ಕಿತ್ತುಕೊಂಡರು ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ (50) ಹಲ್ಲೆಗೊಳಗಾದ ಅಂಗನವಾಡಿ ಸಹಾಯಕಿ. ಮನೆ ಮಾಲೀಕ ಕಲ್ಯಾಣಿ ಮೋರೆ ಮೂಗು ಕತ್ತರಿಸಿರುವ ಆರೋಪಿ. ಗಂಭೀರವಾಗಿ ಗಾಯಗೊಂಡಿರುವ ಸುಗಂಧಾ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಮುಂದೆ ಬೆಳೆದಿದ್ದ ಹೂ ಕಿತ್ತರು ಎಂಬ ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, […]

ಯುವನಿಧಿ ಯೋಜನೆ: 7 ದಿನಗಳಲ್ಲಿ ರಾಜ್ಯಾದ್ಯಂತ 19,392 ಮಂದಿ ಯುವಕರು ನೋಂದಣಿ

ಕಲಬುರಗಿ: ಯುವನಿಧಿ ಯೋಜನೆಗೆ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 19,392 ಮಂದಿ ಯುವಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಕಾಂಗ್ರೆಸ್‌ನ ಐದನೇ ಗ್ಯಾರಂಟಿ ಯುವ ನಿಧಿಯ ನೋಂದಣಿಯನ್ನು ಡಿಸೆಂಬರ್ 26 ರಂದು ಬೆಂಗಳೂರಿನಲ್ಲಿ ಪ್ರಾರಂಭಿಸಲಾಯಿತು. ಯುವ ನಿಧಿ ಅಡಿಯಲ್ಲಿ, 2023 ರಲ್ಲಿ ತಮ್ಮ ಪದವಿ ಮತ್ತು ಡಿಪ್ಲೊಮಾವನ್ನು ಪೂರ್ಣಗೊಳಿಸಿದ ನಂತರ ನಿರುದ್ಯೋಗಿಗಳಾಗಿ ಉಳಿದಿರುವ ಯುವಕರು ಎರಡು ವರ್ಷಗಳವರೆಗೆ ಅಥವಾ ಅವರು ಉದ್ಯೋಗ ಪಡೆಯುವವರೆಗೆ ಕ್ರಮವಾಗಿ […]

ನಾಳೆಯಿಂದ ‘ಎಣ್ಣೆ’ ದರ ಭಾರಿ ಹೆಚ್ಚಳ : ಹೊಸ ವರ್ಷಕ್ಕೆ ‘ಮದ್ಯ’ ಪ್ರಿಯರಿಗೆ ಬಿಗ್ ಶಾಕ್

ಬೆಂಗಳೂರು: ಜನವರಿ.1ರಿಂದ ಜಾರಿಗೆ ಬರುವಂತೆ ಮದ್ಯದ ದರ ಕೂಡ ಭಾರಿ ಹೆಚ್ಚಳವಾಗಲಿದೆ.ಒಂದೆಡೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾದ್ರೇ, ಇದೇ ಮಾದರಿಯಲ್ಲಿ ಕಳೆದ ಬಜೆಟ್ ನಲ್ಲಿ ಮದ್ಯದ ಬೆಲೆಯನ್ನು ಏರಿಕೆ ಮಾಡಲಾಗಿತ್ತುಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭದ ಬೆನ್ನಲ್ಲೇ, ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ, ನಾಳೆಯಿಂದ ಎಣ್ಣೆ ದರಗಳಲ್ಲಿಯೂ ಭಾರಿ ಹೆಚ್ಚಳವಾಗಲಿದೆ. ಈ ಮೂಲಕ ಹೊಸ ವರ್ಷಕ್ಕೆ ಮದ್ಯಪ್ರಿಯರಿಗೆ ಬಿಗ್ ಶಾಕ್ ಸಿಗೋದಂತೂ ಗ್ಯಾರಂಟಿಯಾಗಿದೆ. ಅಂದಹಾಗೇ ನಾಳೆಯಿಂದ 180 ಎಂ.ಎಲ್ ಓಟಿ ಬೆಲೆ ರೂ.100 ಇದ್ದದ್ದು ರೂ.123ರಷ್ಟು ಆಗಲಿದೆ. 180 […]

ಮತ್ತೊಂದು ಸಂಕಷ್ಟದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ: ಸಹೋದರನಿಂದ ಕೋಟ್ಯಂತರ ರೂ ಮೌಲ್ಯದ ಮರ ಅಕ್ರಮ ಕಡಿತದ ಆರೋಪ; ವಿಕ್ರಮ್ ಸಿಂಹ ಬಂಧನ

ಬೆಂಗಳೂರು: ಈ ತಿಂಗಳ ಆರಂಭದಲ್ಲಿ ಸಂಸತ್ತಿನ ಭದ್ರತೆಯಲ್ಲಿ ಭಾರೀ ಲೋಪ ಎಸಗಿರುವ ಪ್ರಕರಣದಲ್ಲಿ ಅಪರಾಧಿಗಳ ಪಾಸ್ ವಿಷಯದಲ್ಲಿ ಸುದ್ದಿಯಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರನನ್ನು ಕೋಟ್ಯಂತರ ಮೌಲ್ಯದ ಮರಗಳನ್ನು ಅಕ್ರಮವಾಗಿ ಕಡಿಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಕೇಂದ್ರ ಅಪರಾಧ ವಿಭಾಗದ ಸಂಘಟಿತ ಅಪರಾಧ ದಳದಿಂದ ಬಂಧಿಸಲ್ಪಟ್ಟಿರುವ ವಿಕ್ರಮ್ ಸಿಂಹ ಪ್ರಸ್ತುತ ಅರಣ್ಯ ಇಲಾಖೆಯ ವಶದಲ್ಲಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೋಟ್ಯಂತರ ರೂ ಮೌಲ್ಯದ 126 ಮರಗಳನ್ನು ಕಡಿದು ಬೇರೆಡೆ ಸಾಗಿಸಲಾಗಿದೆ. ಅಧಿಕೃತ ವರದಿಯು “ಲಭ್ಯವಿರುವ ದಾಖಲೆಯ […]

ಮೈಸೂರು ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅವರ 14 ನೇ ವರ್ಷದ ಪುಣ್ಯಸ್ಮರಣೆ

ಮೈಸೂರು: ಕನ್ನಡ ಸಿನಿಮಾರಂಗದ ಮೇರುನಟ, ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅವರು ನಮ್ಮನ್ನು ಅಗಲಿ 14 ವರ್ಷಗಳು ಕಳೆದಿವೆ. ಡಾ. ವಿಷ್ಣುವರ್ಧನ್‌ ಅವರ 14 ನೇ ವರ್ಷದ ಪುಣ್ಯಸ್ಮರಣೆ ಬೆಂಗಳೂರು ಹಾಗೂ ಮೈಸೂರಿನಲ್ಲಿ ನಡೆಯಿತು. ರಾಜ್ಯದ ವಿವಿಧ ಭಾಗಗಳಲ್ಲಿ ಅಭಿಮಾನಿಗಳು ವಿಷ್ಣುದಾದಾ ಹೆಸರಿನಲ್ಲಿ ಅನ್ನದಾನ, ರಕ್ತದಾನ ಶಿಬಿರಗಳನ್ನು ಆಯೋಜಿಸಿದರು. ವಿಷ್ಣು ಅವರ ಅಂತ್ಯಕ್ರಿಯೆ ನಡೆದ ಅಭಿಮಾನ್ ಸ್ಟುಡಿಯೋದಲ್ಲಿ ದಾದಾನ ಅಭಿಮಾನಿಗಳು ವಿಶೇಷ ಪೂಜೆ ನೆರವೇರಿಸಿದ್ದಾರೆ. ಪುಣ್ಯತಿಥಿ ಅಂಗವಾಗಿ ಹಲವು ಕಡೆಗಳಲ್ಲಿ ರಕ್ತದಾನ, ನೇತ್ರದಾನ, ಅನ್ನದಾನ ಮುಂತಾದ ಸಾಮಾಜಿಕ ಕೆಲಸಗಳನ್ನು […]