BSNL’ಗೆ 44.18 ಕೋಟಿ ರೂ. ಬಿಲ್ ಬಾಕಿ: ಕ್ರಮ ಕೈಗೊಳ್ಳುವಂತೆ ಸೂಚನೆ!

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೇಂದ್ರ ಸರ್ಕಾರ ಸ್ವಾಮ್ಯದ ಭಾರತ್‌ ಸಂಚಾರ್‌ ನಿಗಮಕ್ಕೆ (ಬಿಎಸ್‌ಎನ್‌ಎಲ್‌) ಒಟ್ಟು ₹44.18 ಕೋಟಿ ಮೊತ್ತದ ಬಿಲ್‌ ಪಾವತಿಸಲು ಉಳಿಸಿಕೊಂಡಿವೆ.ಈ ಪೈಕಿ, ಗೃಹ ಇಲಾಖೆಯು ಅತೀ ಹೆಚ್ಚು ಅಂದರೆ, ₹15.89 ಕೋಟಿ ಪಾವತಿಸಲು ಬಾಕಿ ಇದೆ. ಉಳಿದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಸೆಂಟರ್‌ ಫಾರ್‌ ಇ– ಗರ್ವರ್ನೆನ್ಸ್‌ ₹4.25 ಕೋಟಿ, ಗ್ರಾಮೀಣಾಭಿವೃದ್ಧಿ ಇಲಾಖೆ (ಗ್ರಾಮ ಪಂಚಾಯತ್‌) ₹3.50 ಕೋಟಿ, ಕಿಯೋನಿಕ್ಸ್‌ ₹2 ಕೋಟಿ ಪಾವತಿಸಬೇಕಿದೆ. ಬಿಲ್‌ ಬಾಕಿ […]

ರಾಜಸ್ಥಾನ: ನಿಂತಿದ್ದ ಟ್ರಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ; 15 ಮಂದಿ ಸ್ಥಳದಲ್ಲಿ ಮೃತ್ಯು, ಮೂವರಿಗೆ ಗಾಯ.

ಜೈಪುರ: ರಾಜಸ್ಥಾನದ ಫಲೋಡಿ ಜಿಲ್ಲೆಯ ಭಾರತ ಮಾಲಾ ಹೆದ್ದಾರಿಯಲ್ಲಿ ಭಾನುವಾರ(ನ. 02) ಸಂಜೆ ನಿಂತಿದ್ದ ಟ್ರಕ್​ಗೆ ಟೆಂಪೋ ಟ್ರಾವೆಲರ್​​ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು (Horrific accident), ಘಟನೆಯಲ್ಲಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರು ಜೋಧ್​​ಪುರದ ಸುರ್​ಸಾಗರ್ ಪ್ರದೇಶದ ನಿವಾಸಿಗಳು. ಕಪಿಲ್ ಮುನಿ ಆಶ್ರಮದಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಬಿಕಾನೇರ್‌ನ ಕೊಲಾಯತ್ ದೇವಸ್ಥಾನ ದರ್ಶನ ಮಾಡಿಕೊಂಡು ವಾಪಾಸ್ ಆಗುವಾಗುವಾಗ ಭಾರತ ಮಾಲಾ ಹೆದ್ದಾರಿಯಲ್ಲಿರುವ ಮಾಡೋಡಾ ಗ್ರಾಮದ ಬಳಿ ಘಟನೆ […]

ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ನೇಮಕ.

ನವದೆಹಲಿ: ಇಂದು ಜಸ್ಟೀಸ್​ ಸೂರ್ಯಕಾಂತ್ (Surya kant) ಅವರನ್ನು ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಯಿತು. ಕೇಂದ್ರ ಕಾನೂನು ಸಚಿವಾಲಯ ನೇಮಕಾತಿ ಆದೇಶಗಳನ್ನು ಹೊರಡಿಸಿದ್ದು, ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಇದೇ ನವೆಂಬರ್ 24 ರಂದು ಸಿಜೆಐ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ. ಫೆಬ್ರವರಿ 9, 2027 ರವರೆಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್​ ಮುಂದುವರಿಯಲಿದ್ದಾರೆ. ಈ ಮಧ್ಯೆ, ಪ್ರಸ್ತುತ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ನವೆಂಬರ್ 23ರಂದು ನಿವೃತ್ತಿ […]

ಡಾ.ರಾಜ್ ಕುಮಾರ್,ಪುಟ್ಟಣ್ಣ ಕಣಗಲ್ ಪ್ರಶಸ್ತಿ ಘೋಷಣೆ: ಉಮಾಶ್ರೀ ಸೇರಿ ಹಲವು ಕಲಾವಿದರಿಗೆ ಪ್ರಶಸ್ತಿ.

ಬೆಂಗಳೂರು: 2019ನೇ ಸಾಲಿನ ಡಾ.ರಾಜ್​ಕುಮಾರ್​, ಪುಟ್ಟಣ್ಣ ಕಣಗಲ್​ ಮತ್ತು ಡಾ.ವಿಷ್ಣುವರ್ಧನ್​ ಪ್ರಶಸ್ತಿ ಸೇರಿದಂತೆ ಚಲನಚಿತ್ರ ಸಾಹಿತ್ಯ ವಾರ್ಷಿಕ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗಳನ್ನು ರಾಜ್ಯ ಸರ್ಕಾರ ಗುರುವಾರ (ಅ.30) ರಂದು ಘೋಷಿಸಿದೆ.ಈ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿಯನ್ನು ಹಿರಿಯ ನಟಿ ಉಮಾಶ್ರೀ ಅವರಿಗೆ ನೀಡಲಾಗಿದೆ. ಅಲ್ಲದೆ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಹಿರಿಯ ನಿರ್ದೇಶಕ ಎನ್. ಆರ್. ನಂಜುಂಡೇಗೌಡ ಅವರಿಗೆ ನೀಡಿದ್ದಾರೆ. ಡಾ. ವಿಷ್ಣುವರ್ಧನ್ ಪ್ರಶಸ್ತಿಗೆ ನಿರ್ಮಾಪಕರು ಹಾಗೂ ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೊ ಅವರು ಭಾಜನರಾಗಿದ್ದಾರೆ.ಈ ಮೂರು […]

ಮೊಬೈಲ್ Wi-Fi ಸರ್ಚಿಂಗ್​ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಯೂಸರ್ ನೇಮ್​: ಕ್ರಮಕ್ಕೆ ಸ್ಥಳೀಯರ ಆಗ್ರಹ

ಬೆಂಗಳೂರು: ಕೆಲವರು ಮೊಬೈಲ್ ವೈಫೈ ಕನೆಕ್ಷನ್​ ಸರ್ಚಿಂಗ್​ ವೇಳೆ ಪಾಕಿಸ್ತಾನ ಜಿಂದಾಬಾದ್ ಯೂಸರ್ ಐಡಿ ನೇಮ್ ತೋರಿಸಿದ್ದು, ಇದನ್ನು ಕಂಡ ಗ್ರಾಮಸ್ಥರು ಶಾಕ್ ಆಗಿದ್ದಾರೆ. ಈ ಘಟನೆಯು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳು ಗ್ರಾಮದಲ್ಲಿ ನಡೆದಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಿ ಗೋವರ್ಧನ್ ಸಿಂಗ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಇಂಟರ್ನೆಟ್ ಸೌಲಭ್ಯ ಪಡೆಯಲು ವೈ-ಫೈ ನೆಟ್‌ವರ್ಕ್‌ಗಳನ್ನು ಪರಿಶೀಲಿಸುವಾಗ, ‘ಪಾಕಿಸ್ತಾನ ಜಿಂದಾಬಾದ್’ ಎಂಬ ವೈ-ಫೈ ಸಂಪರ್ಕ ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರುದಾರರು ವೈ-ಫೈ […]