ಗೃಹಜ್ಯೋತಿ ಮರುಪರಿಶೀಲನೆ: ನೀವು ದಾಖಲೆ ನೀಡದೇ ಇದ್ದರೆ ಉಚಿತ ವಿದ್ಯುತ್ ಸೇವೆ ನಿಮಗೆ ಸಿಗಲ್ಲ!

ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಯೋಜನೆಯ ಮರುಪರಿಶೀಲನೆಗೆ ನಿಗದಿಪಡಿಸಿದ್ದ ಆಗಸ್ಟ್‌ 31ರ ಗಡುವನ್ನು ಸೆಪ್ಟೆಂಬರ್‌ 30, 2026ರವರೆಗೆ ವಿಸ್ತರಿಸಿದೆ. ರಾಜ್ಯಾದ್ಯಂತ ಇದುವರೆಗೆ ಶೇ.70ರಷ್ಟು ಫಲಾನುಭವಿಗಳು ಮಾತ್ರ ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಉಳಿದ ಶೇ.30ರಷ್ಟು ಫಲಾನುಭವಿಗಳು ತಮ್ಮ ಮಾಹಿತಿಯನ್ನು ದೃಢೀಕರಿಸಿಕೊಳ್ಳಲು ಇನ್ನೊಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಮರುಪರಿಶೀಲನೆ ಪೂರ್ಣಗೊಳಿಸಿದ ಅರ್ಹ ಫಲಾನುಭವಿಗಳಿಗೆ ಮಾತ್ರ 200 ಯುನಿಟ್‌ವರೆಗೆ ಉಚಿತ ವಿದ್ಯುತ್‌ ಸೌಲಭ್ಯ ಮುಂದುವರಿಯಲಿದೆ. ಮನೆ ಬಾಗಿಲಿಗೇ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ ಗೃಹಜ್ಯೋತಿ ಮರುಪರಿಶೀಲನೆಗಾಗಿ […]

ಕರಾವಳಿಗರಿಗೆ ಗುಡ್‌ ನ್ಯೂಸ್: ಮಂಗಳೂರಿನಲ್ಲಿ ಸೆ.18ಕ್ಕೆ ಸಚಿವ ಸಂಪುಟ ಸಭೆ; ತುಳು ಭಾಷೆಗೆ ಸಿಗುತ್ತಾ ಮಾನ್ಯತೆ?

ಮಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆ ಇದ್ದು, ಕರಾವಳಿ ಭಾಗದ ಜನರ ಹಲವು ಪ್ರಮುಖ ಬೇಡಿಕೆಗಳ ಕುರಿತು ಚರ್ಚೆ ನಡೆಯಲಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವಿವಿಧ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚನೆ […]

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ಇದೇ ತಿಂಗಳು 33ನೇ ಕಂತಿನ ಹಣ ಜಮೆ!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಮಹಿಳೆಯರಿಗೆ ಸಿಹಿಸುದ್ದಿ ನೀಡಿದೆ. ಬಾಕಿ ಉಳಿದಿರುವ 33ನೇ ಕಂತಿನ ಹಣವನ್ನು ಇದೇ ತಿಂಗಳು ಅರ್ಹ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಲು ಸರ್ಕಾರ ಇಂದಿನಿಂದ ಮನೆ-ಮನೆ ಸರ್ವೆ ಕಾರ್ಯ ಆರಂಭಿಸುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಣೆ ಪೂರ್ಣಗೊಳ್ಳುವವರೆಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡದಿರಲು ಈ ಹಿಂದೆ ಇಲಾಖೆ ನಿರ್ಧರಿಸಿತ್ತು. ಆದರೆ, ನಿನ್ನೆ ಗ್ಯಾರಂಟಿ ಪ್ರಾಧಿಕಾರದ ಸದಸ್ಯರೊಂದಿಗೆ ನಡೆದ […]

Gruhalakshmi: ಗೃಹಲಕ್ಷ್ಮಿ ಮರುಪರಿಶೀಲನೆಗೂ ಡೆಡ್​ಲೈನ್ ಘೋಷಣೆ​; ಈ ಒಂದು ದಾಖಲೆ ಇಲ್ಲವಾದ್ರೆ ಮನೆ ಯಜಮಾನಿಗೆ 2000 ಕಟ್

ಮನೆ ಮನೆಗೆ ಹೋಗಿ ಗೃಹಲಕ್ಷ್ಮಿ ಫಲಾನುಭವಿಗಳ ಪರಿಶೀಲನೆ ಕಾರ್ಯ ಶುರುವಾಗ್ತಿದ್ದು, ಯೋಜನೆಗೆ ಫಲಾನುಭವಿಗಳಾಗಲು ಮಹಿಳೆಯರು ಸೂಕ್ತ ದಾಖಲೆಗಳನ್ನ ನೀಡಬೇಕಿದೆ. ಬೆಂಗಳೂರು (ಆ.31): ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯು (Gruhalakshmi Yojana) ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2,000 ಆರ್ಥಿಕ ಸಹಾಯ ನೀಡೋ ಯೋಜನೆ ಆಗಿದೆ. ಆಗಸ್ಟ್ 2026ಕ್ಕೆ ಈ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ್ದು, ಇದೀಗ ಸರ್ಕಾರ ಗೃಹಲಕ್ಷ್ಮಿ (Gruhalakshmi ) ಯೋಜನೆ ಮರುಪರಿಶೀಲನೆಗೆ ಮುಂದಾಗಿದೆ. ಮನೆ-ಮನೆಗೆ ಭೇಟಿ ನೀಡುವ ಸಿಬ್ಬಂದಿ ಗೃಹಲಕ್ಷ್ಮಿ ಯೋಜನೆಗೆ ಅರ್ಹರಿಗೆ […]

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್! ಮನೆ ಬಾಗಿಲಿಗೆ ಬರಲಿದ್ದಾರೆ ಅಧಿಕಾರಿಗಳು

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂರು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆ ಆರಂಭವಾಗಿದೆ. ಒಂದು ತಿಂಗಳ ಕಾಲ ನಡೆಯಲಿರುವ ಈ ಪ್ರಕ್ರಿಯೆಯಲ್ಲಿ ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಸಂದೇಶದ ಮೂಲಕ ಈ ಕುರಿತು ಮಾಹಿತಿ ನೀಡಿದ್ದು, ಫಲಾನುಭವಿಗಳು ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ನೀಡಿ […]