ಗ್ರಾಹಕರ ಕಣ್ಣು ಕತ್ತಲೆ ಬರಿಸುತ್ತಿದೆ ಗೃಹಜ್ಯೋತಿ: ವಿದ್ಯುತ್ ಬಳಕೆ ಹೆಚ್ಚಳದಿಂದ ಬಿಲ್ ನಲ್ಲಿ ಏರಿಕೆ ಕಂಡು ಜನ ಶಾಕ್

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ನಿರಂತರವಾಗಿ ಏರುತ್ತಿದ್ದು, ಕಳೆದ ವರ್ಷದ ಫೆಬ್ರುವರಿ–ಮಾರ್ಚ್‌ಗಿಂತ ಈ ಬಾರಿ ಗೃಹ ವಿದ್ಯುತ್ ಬಳಕೆ ಶೇ 30ರಷ್ಟು ಹೆಚ್ಚಳವಾಗಿದೆ. ಇದೀಗ ಗೃಹ ಜ್ಯೋತಿ ಫಲಾನುಭವಿಗಳಿಗೆ ಇದರ ಬಿಸಿ ತಟ್ಟಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ನಿಯಮಗಳ ಪ್ರಕಾರ ಸೌಲಭ್ಯ ಪಡೆದಿರುವ ಕುಟುಂಬಗಳು ಹಿಂದಿನ ಒಂದು ವರ್ಷ ಬಳಸಿದ್ದ ಸರಾಸರಿ ಯೂನಿಟ್‌ ಹಾಗೂ ಅದರ ಮೇಲೆ 10 ಹೆಚ್ಚುವರಿ ಯೂನಿಟ್‌ ಮಾತ್ರ ಉಚಿತವಾಗಿ ಪಡೆಯಬಹುದಾಗಿದೆ. ಅದಕ್ಕಿಂತ ಎಷ್ಟು ಹೆಚ್ಚು ಬಳಕೆ ಮಾಡಲಾಗುತ್ತದೆಯೋ ಅಷ್ಟು […]

ರಾಮನ ಅಸ್ತಿತ್ವ ಪ್ರಶ್ನಿಸಿದ ಡಿಎಂಕೆ ನಾಯಕ ಎಂ ಕರುಣಾನಿಧಿ ತವರೂರಿನಲ್ಲೇ ಶತಮಾನ ಹಳೆಯ ಕೋದಂಡ ರಾಮನ ವಿಗ್ರಹ ಪತ್ತೆ!!

ಚೆನ್ನೈ: ಡಿಎಂಕೆ ನಾಯಕ ಎಂ ಕರುಣಾನಿಧಿ ಅವರ ತವರೂರು ತಿರುವರೂರಿನಲ್ಲಿ ಮನೆ ನಿರ್ಮಾಣ ಕಾಮಗಾರಿಗಾಗಿ ಉತ್ಖನನದ ಸಂದರ್ಭದಲ್ಲಿ ಪತ್ತೆಯಾದ ಶತಮಾನಗಳಷ್ಟು ಹಳೆಯದಾದ ಕೋದಂಡ ರಾಮನ ವಿಗ್ರಹದ ದೃಶ್ಯಗಳು ಹೊರಹೊಮ್ಮಿವೆ. ಈ ಉತ್ಖನನವು ದ್ರಾವಿಡ, ಎಡಪಂಥೀಯ ಮತ್ತು ಇತರ ರಾಜಕೀಯ ಬಣಗಳ ರಾಮ ಕೇವಲ ಉತ್ತರ ಭಾರತಕ್ಕೆ ಸಂಬಂಧಿಸಿದ ಪೌರಾಣಿಕ ವ್ಯಕ್ತಿ ಎನ್ನುವ ನಿರಂತರ ಪ್ರತಿಪಾದನೆಗಳನ್ನು ಪ್ರಶ್ನಿಸುತ್ತಿದೆ. ಈ ಘಟನೆಯ ನಂತರ ತಿರುವರೂರು ಜಿಲ್ಲೆಯ ಪೆರುಮಾಲಕರಂ ಗ್ರಾಮವು ಇದ್ದಕ್ಕಿದ್ದಂತೆ ಜನರ ಗಮನ ಸೆಳೆದಿದೆ. ಸ್ಥಳೀಯ ಹೂವಿನ ಅಂಗಡಿ ಮಾಲೀಕ […]

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರಿನ ಇಬ್ಬರನ್ನು ವಶಕ್ಕೆ ಪಡೆದ ಎನ್‌ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಬ್ಬರು ಶಂಕಿತರನ್ನು ಬಂಧಿಸಿದೆ ಎಂದು ಮೂಲಗಳು ಮಂಗಳವಾರ ಖಚಿತಪಡಿಸಿವೆ. ಈ ಇಬ್ಬರು ಶಂಕಿತರು ಶಂಕಿತ ಬಾಂಬರ್‌ನೊಂದಿಗೆ ನೇರ ಸಂಪರ್ಕದಲ್ಲಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಎನ್‌ಐಎ ಅಧಿಕಾರಿಗಳು ಶಂಕಿತರನ್ನು ರಾಜ್ಯ ರಾಜಧಾನಿ ಬೆಂಗಳೂರಿನಿಂದ ಕರೆದೊಯ್ದಿದ್ದಾರೆ. ಆದರೆ, ಈ ಬಗ್ಗೆ ಎನ್‌ಐಎ ಇನ್ನಷ್ಟೇ ಹೇಳಿಕೆ ನೀಡಬೇಕಿದೆ. ತನಿಖಾ ಸಂಸ್ಥೆಗಳು, ಎನ್‌ಐಎ ಮತ್ತು ರಾಜ್ಯ ವಿಶೇಷ ವಿಭಾಗದ ಸಿಸಿಬಿ ತಂಡಗಳು ವಿವಿಧ ರಾಜ್ಯಗಳಲ್ಲಿ ವ್ಯಾಪಕ ಶೋಧ […]

ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ 5 ನೇ ಅಂತರರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ವ್ಯಾಪಾರ ಗತಿಶೀಲತೆ ಮತ್ತು ಸುಸ್ಥಿರ ಅಭಿವೃದ್ಧಿಯ (ICBD 5.0) ಕುರಿತಾದ 5 ನೇ ಅಂತರರಾಷ್ಟ್ರೀಯ ಸಮ್ಮೇಳನವು ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಸ್ಕೂಲ್ ಆಫ್ ಬ್ಯುಸಿನೆಸ್‌ನ ಪ್ರಮುಖ ಕಾರ್ಯಕ್ರಮವಾಗಿದ್ದು, ಮಾರ್ಚ್ 14 ರಂದು ಆಯೋಜಿಸಲಾಗಿತ್ತು. ಈ ಸಮ್ಮೇಳನವನ್ನು ಮೈಲ್ಸ್ ಎಜುಕೇಶನ್, ಟೈಟಾನ್, ಎಲ್.ಟಿ.ಐ.ಮೈಂಡ್ ಟ್ರೀ ಮತ್ತು ವರ್ಟೆಕ್ಸ್ ವೆಂಚರ್ಸ್ ಪ್ರಾಯೋಜಿಸಿದೆ. ವಿವಿಧ ಸಂಸ್ಥೆಗಳ ಒಟ್ಟು 60 ಸಂಶೋಧನಾ ಪ್ರಬಂಧ ನಿರೂಪಕರು, ಶಿಕ್ಷಣತಜ್ಞರು, ಸಂಶೋಧನಾ ವಿದ್ವಾಂಸರು, ಉದ್ಯಮ ವೃತ್ತಿಪರರು, ವಿಶ್ವದಾದ್ಯಂತ ಉನ್ನತ ಶಿಕ್ಷಣದ ವಿದ್ಯಾರ್ಥಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. […]

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕ್ಯಾಪ್ ನಿಂದ ದೊರೆಯಿತೇ ಆರೋಪಿಯ ಸುಳಿವು?

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಗೆ (NIA) ಸ್ಫೋಟಕ ಮಾಹಿತಿ ದೊರೆತಿದ್ದು, ಆರೋಪಿಗೂ ಚೆನ್ನೈಗೂ ಸಂಬಂಧ ಇದೆ ಎನ್ನಲಾಗಿದೆ. ಸ್ಫೋಟದಿಂದ ಕೆಲ ದೂರದಲ್ಲಿ ಶಂಕಿತ ಆರೋಪಿ ತನ್ನ ಕ್ಯಾಪ್ ಬಿಟ್ಟು ಹೋಗಿದ್ದು, ಪೊಲೀಸರು ಈ ಕ್ಯಾಪ್‌ ಮೂಲವನ್ನು ಬೇಧಿಸಿದ್ದಾರೆ. ಇದನ್ನು ಆತ ಚೆನ್ನೈನ ಮಾಲ್‌ ಒಂದರಲ್ಲಿ ಖರೀದಿ ಮಾಡಿದ್ದ ಎನ್ನುವ ಮಾಹಿತಿ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಚೆನ್ನೈನ ಮಾಲ್‌ನಲ್ಲಿ ಶಂಕಿತ ಟೋಪಿ ಖರೀದಿಸುತ್ತಿದ್ದ ವೇಳೆ ಆತನ ಜೊತೆ ಮತ್ತೊಬ್ಬ […]