ಹೊಸ ಸಚಿವ ಸಂಪುಟ ಸೇರುವ ಸಂಭಾವ್ಯ ಸಚಿವರು ಯಾರು?

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲಿದೆ ಎನ್ನುವ ಮಾತುಗಳು ಜೋರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತ ಚರ್ಚೆಗಳು ತೀವ್ರಗೊಂಡಿವೆ. ಗುರುವಾರ ಸಂಜೆ ಅವರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತೊರೆದರೆ, ಪ್ರಸ್ತುತ ಸಚಿವ ಸಂಪುಟವೂ ವಿಸರ್ಜನೆಯಾಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ D. K. Shivakumar ಸೇರಿದಂತೆ ಎಲ್ಲ ಸಚಿವರು ತಮ್ಮ ಸ್ಥಾನ ಕಳೆದುಕೊಳ್ಳಲಿದ್ದು, ಹೊಸ ಮುಖ್ಯಮಂತ್ರಿ ಹೊಸ ಸಂಪುಟ ರಚನೆ ಮಾಡಬೇಕಾಗುತ್ತದೆ. ಈ ಬೆಳವಣಿಗೆಯ ನಡುವೆ ಮುಂದಿನ ಸಚಿವ […]

ಹೈಕಮಾಂಡ್ ಸೂಚನೆ ಕೊಟ್ರೂ ಇಂದು ಡಿಕೆಶಿ ಸಿಎಂ ಆಗೋದು ಕಷ್ಟ! ಇಲ್ಲಿದೆ ಪ್ರಮುಖ ಕಾರಣಗಳು

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿದೆ. ಡಿ.ಕೆ.ಶಿವಕುಮಾರ್ D. K. Shivakumar ಅವರು ಮುಂದಿನ ಮುಖ್ಯಮಂತ್ರಿ ಆಗುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದರೂ, ತಕ್ಷಣವೇ ಅಧಿಕಾರ ಹಸ್ತಾಂತರವಾಗುವುದು ಅಸಾಧ್ಯ ಎನ್ನಲಾಗುತ್ತಿದೆ. ರಾಜ್ಯಪಾಲರ ಮುಂಬೈ ಪ್ರವಾಸ ಪ್ರಮುಖ ಅಡ್ಡಿ ಮುಖ್ಯಮಂತ್ರಿ ರಾಜೀನಾಮೆ ಸ್ವೀಕರಿಸುವುದು, ಹೊಸ ಸಿಎಂಗೆ ಆಹ್ವಾನ ನೀಡುವುದು ಹಾಗೂ ಪ್ರಮಾಣವಚನ ದಿನಾಂಕ ನಿಗದಿ ಮಾಡುವ ಪ್ರಕ್ರಿಯೆ ರಾಜ್ಯಪಾಲರ ಮೂಲಕವೇ ನಡೆಯಬೇಕು. ಆದರೆ ರಾಜ್ಯಪಾಲರು ಮುಂಬೈ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ತಕ್ಷಣದ ರಾಜಕೀಯ […]

ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು- ತರಬೇತಿ ಕಾರ್ಯಾಗಾರ

ಮಂಗಳೂರು:  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು” (Advanced Intellectual Property Rights (IPR)) ವಿಷಯದ ಮೇಲೆ ಜೂನ್ 16 ರಿಂದ ಜೂನ್ 20 ರವರೆಗೆ 5 ದಿನಗಳ ತರಬೇತಿ ಕಾರ್ಯಾಗಾರವನ್ನು ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದು, ಆಸಕ್ತ ವಿಜ್ಞಾನ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, […]

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಆತಂಕ ಸೃಷ್ಟಿಸಿದ್ದ ಶಂಕಿತ ಎಬೋಲಾ ಪ್ರಕರಣಕ್ಕೆ ಇದೀಗ ತೆರೆ ಬಿದ್ದಿದೆ. ಉಗಾಂಡಾದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯ ಲ್ಯಾಬ್ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಸ್ಪಷ್ಟನೆ ನೀಡಿದ್ದಾರೆ. ಉಗಾಂಡಾದಿಂದ ಬಂದ ಮಹಿಳೆಯಲ್ಲಿ ಎಬೋಲಾ ವೈರಸ್‌ಗೆ ಹೋಲುವ ಕೆಲವು ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಬೆಂಗಳೂರಿನ Rajiv Gandhi Institute of Chest Diseases ಆಸ್ಪತ್ರೆಗೆ ದಾಖಲಿಸಿ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಮಹಿಳೆಯ ರಕ್ತ ಹಾಗೂ ಇತರ ಮಾದರಿಗಳನ್ನು […]

“ನಾಳೆ ಮಾತನಾಡೋಣ…!: ದೆಹಲಿ ಭೇಟಿ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ”

ಕುತೂಹಲ…ಗುಟ್ಟು ಬಿಟ್ಟು ಕೊಡದ ಸಿಎಂ… ರಾಮನಗರದಲ್ಲಿ ಡಿಕೆಶಿ ಬೆಂಬಲಿಗರ ಸಂಭ್ರಮಾಚರಣೆ! ಬೆಂಗಳೂರು: ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿ ವಾಪಾಸಾಗಿರುವ ಸಿಎಂ ಸಿದ್ದರಾಮಯ್ಯ ಬುಧವಾರ(ಮೇ27 ) ಬೆಳಗ್ಗೆ “ನಾಳೆ ಮಾತನಾಡೋಣ…!” ಎಂಬ ಹೇಳಿಕೆ ನೀಡಿ ಮುಂದೆ ಏನಾಗಲಿದೆ ಎನ್ನುವ ಕುರಿತು ಯಾವುದೇ ಗುಟ್ಟು ಬಿಟ್ಟುಕೊಡಲಿಲ್ಲ.ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ಅಂಗವಾಗಿ ನೆಹರು ಅವರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಭಾರೀ ಕುತೂಹಲದಿಂದ […]