ಡಿ.10 ರಿಂದ 24ರ ವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಆದಿತ್ಯವಾರ 10-12-2023 ರಿಂದ ಲಾಗ್ಯಾತು ಮಾರ್ಗಶಿರ ಶುದ್ಧ ದ್ವಾದಶಿ ಆದಿತ್ಯವಾರ 24-12-2023ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಈ ವರ್ಷದ ಚಂಪಾಷಷ್ಠಿ ಮಹೋತ್ಸವವು ಅದ್ಧೂರಿಯಾಗಿ ನಡೆಯಲಿದೆ.ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿಯ ಚಂಪಾಷಷ್ಠಿ ಮಹೋತ್ಸವ ಡಿಸೆಂಬರ್​ 10 ರಿಂದ ಆರಂಭವಾಗಲಿದೆ. ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ […]

ಕೃಷಿ ವಿವಿಯಿಂದ ಹವಾಮಾನ ವೈಪರೀತ್ಯಗಳ ಕುರಿತು ರೈತರಿಗೆ ವಿಶೇಷ ತಿಳುವಳಿಕೆ ಮತ್ತು ಮಾಹಿತಿ

ಬೆಂಗಳೂರು: ಎಲ್​ ನಿನೋ ಪರಿಣಾಮದಿಂದ ಸಮುದ್ರದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗಿ ಮೋಡಗಳು ಅಲ್ಲಿಗೆ ಚಲಿಸುತ್ತದೆ. ಆದ್ದರಿಂದ ಈ ಬಾರಿಯ ಮೋಡಗಳು ಸುಮುದ್ರದೆಡೆಗೆ ಚಲಿಸಿರುವುದರಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಸೂಕ್ತ ಬೆಳೆ ಬೆಳೆಯಲು ಈಗಾಗಲೇ ಐ.ಎಂ.ಡಿ ಮತ್ತು ಐ.ಸಿ.ಆರ್ ಸಹಯೋಗದಲ್ಲಿ ಪರಿಚಯಿಸಿರುವ ಮೇಘದೂತ್ ಮೊಬೈಲ್​ ಅಪ್ಲಿಕೇಶನ್​ನ ಬಳಕೆಯ ಕುರಿತು ಪ್ರಾತ್ಯಕ್ಷಿಕೆಗಳ ಮೂಲಕ ತಿಳಿಸಲಾಗುತ್ತಿದೆ.ಅತಿವೃಷ್ಟಿ, ಅನಾವೃಷ್ಟಿ ಎರಡೂ ಪ್ರಕೃತಿಯ ನಿಯಮ. 4ರಿಂದ 5 ವರ್ಷಗಳಿಗೊಮ್ಮೆ ‘ಎಲ್​ ನಿನೋ’ ಎನ್ನುವ ಹವಾಮಾನ ಪರಿಣಾಮ ಇರುತ್ತದೆ. ಪೆಸಿಫಿಕ್ ಮಹಾಸಾಗರದಲ್ಲಿ ಉಷ್ಣಾಂಶ ಹೆಚ್ಚಾಗಿ […]

ಸಿಎಂ ಸಿದ್ದರಾಮಯ್ಯ: 99.52 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ಜಮಾವಣೆ

ಬೆಂಗಳೂರು: ತಮ್ಮ ಸರ್ಕಾರಕ್ಕೆ ಆರು ತಿಂಗಳು ಪೂರೈಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಗ್ಯಾರಂಟಿ ಸಾಧನೆ ಬಗ್ಗೆ ವಿವರಿಸುತ್ತ, ಗೃಹಲಕ್ಷ್ಮಿ ಯೋಜನೆಯಡಿ ರೂ. 17,500 ಕೋಟಿ ಅನುದಾನ ಮೀಸಲಿಟ್ಟಿದ್ದು, ಈವರೆಗೆ ರೂ. 11,200 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. 99.52 ಲಕ್ಷ ನೋಂದಾಯಿತ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.99.52 ಲಕ್ಷ ನೋಂದಾಯಿತ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಿದೆ ಎಂದು ಸಿಎಂ‌ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ […]

ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಅಗ್ನಿ ದುರಂತ: 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲು

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡು ಸುಮಾರು 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ. ಉಪ ಪೊಲೀಸ್ ಆಯುಕ್ತ ಆನಂದ್ ರೆಡ್ಡಿ ಮಾತನಾಡಿ, ಬೆಂಕಿಯು ಮೊದಲು ಒಂದು ದೋಣಿಯಲ್ಲಿ ಕಾಣಿಸಿಕೊಂಡಿತು ಮತ್ತು ನಂತರ ಮಧ್ಯರಾತ್ರಿ ಸುಮಾರಿಗೆ 35 ಫೈಬರ್-ಯಾಂತ್ರೀಕೃತ ದೋಣಿಗಳಿಗೆ ವ್ಯಾಪಿಸಿತು ಎಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ತಕ್ಷಣ ಕಾರ್ಯಪ್ರವೃತ್ತರಾದರು. ಬೆಂಕಿಯನ್ನು ಹತೋಟಿಗೆ ತರಲಾಯಿತು. […]

ರಾಜ್ಯದಲ್ಲೇ ಪ್ರಥಮ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಡಿಜಿಟಲ್ ಬಸ್

ಮಂಗಳೂರು: ಮಂಗಳೂರಿನ ಎಂ ಫ್ರೆಂಡ್ಸ್ ಎಂಬುದು ವಾಟ್ಸಪ್ ಗ್ರೂಪ್ ಮೂಲಕ 2013 ರಲ್ಲಿ ಆರಂಭವಾದ ಸಂಘಟನೆ. ಈ ಸಂಘಟನೆ ಆರೋಗ್ಯ ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಸೇವೆ ನೀಡುತ್ತಿದೆ. ಇದೀಗ ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಆಗಿರುವ ಈ ಸಂಸ್ಥೆ ತನ್ನ ದಶಮಾನೋತ್ಸವದ ಸ್ಮರಣಾರ್ಥ ಗ್ರಾಮೀಣ ಪ್ರದೇಶದ ಮಕ್ಕಳಿಗಾಗಿ ನೂತನ ತಂತ್ರಜ್ಞಾನದ ಡಿಜಿಟಲ್ ಬಸ್ ಲೋಕಾರ್ಪಣೆಗೊಳಿಸಿದೆ.ಗ್ರಾಮೀಣ ಭಾಗದ ಸರ್ಕಾರಿ ಶಾಲಾ ಮಕ್ಕಳು ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗಬಾರದೆನ್ನುವ ದೃಷ್ಟಿಯಿಂದ‌ ಮಂಗಳೂರಿನ ಎಂ ಫ್ರೆಂಡ್ಸ್ ಸಂಸ್ಥೆ ಹೊಸ […]