ಭಾರಿ ಅಗ್ನಿ ಅವಘಡ : ಬೆಂಗಳೂರಿನಲ್ಲಿ ಆಟಿಕೆ ವಸ್ತುಗಳ ಗೋದಾಮಿ ಘಟನೆ

ಬೆಂಗಳೂರು : ಆಟಿಕೆ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಕೆ. ಆರ್ ಮಾರ್ಕೆಟ್ ಠಾಣಾ ವ್ಯಾಪ್ತಿಯ ಕುಂಬಾರಪೇಟೆಯಲ್ಲಿ ಭಾನುವಾರ ನಡೆದಿದೆ. ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಗೋದಾಮಿನಲ್ಲಿ ಅವಘಡ ಉಂಟಾಗಿದ್ದು, ನಂತರ ನಾಲ್ಕನೇ ಮಹಡಿಗೂ ಬೆಂಕಿ ವ್ಯಾಪಿಸಿದೆ. ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಐದು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ರಾಜ್ಯದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಈ ಹಿಂದೆ ಆನೇಕಲ್​ ತಾಲೂಕಿನ ಅತ್ತಿಬೆಲೆಯಲ್ಲಿ ಸಂಭವಿಸಿದ್ದ ಪಟಾಕಿ […]

ಉತ್ತರ ಪ್ರದೇಶ ಸರ್ಕಾರದಿಂದ ಹಲಾಲ್ ಉತ್ಪನ್ನಗಳ ತಯಾರಿ, ಮಾರಾಟ ನಿಷೇಧ

ಲಕ್ನೋ(ಉತ್ತರ ಪ್ರದೇಶ): ಹಲಾಲ್ ಪ್ರಮಾಣೀಕೃತವಲ್ಲದ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡುವ ದುರುದ್ದೇಶಪೂರಿತ ಪ್ರಯತ್ನಗಳು ಮತ್ತು ಅನ್ಯಾಯದ ಮಾರ್ಗದಲ್ಲಿ ಆರ್ಥಿಕ ಪ್ರಯೋಜನಗಳನ್ನು ಪಡೆಯುವುದಲ್ಲದೆ, ಕೋಮು ದ್ವೇಷವನ್ನು ಬಿತ್ತಲು, ಸಮಾಜದಲ್ಲಿ ವಿಭಜನೆಗಳನ್ನು ಸೃಷ್ಟಿಸಲು ಹಾಗೂ ಹಲಾಲ್‌ ಪ್ರಮಾಣೀಕೃತವು ರಾಷ್ಟ್ರ ವಿರೋಧಿ ಶಕ್ತಿಗಳಿಂದ ದೇಶವನ್ನು ದುರ್ಬಲಗೊಳಿಸಲು ಪೂರ್ವ ಯೋಜಿತ ಕಾರ್ಯತಂತ್ರದ ಭಾಗವಾಗಿದೆ ಎಂದು ಸರ್ಕಾರ ಆರೋಪಿಸಿದೆ. ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ತಯಾರಿ, ಸಂಗ್ರಹಣೆ ಮತ್ತು ಮಾರಾಟದ ಮೇಲೆ ಉತ್ತರ ಪ್ರದೇಶ ಸರ್ಕಾರ ನಿಷೇಧ ಹೇರಿದೆ.ಉತ್ತರಪ್ರದೇಶ ಸರ್ಕಾರ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ತಯಾರಿ, […]

ಡಿ.10 ರಿಂದ 24ರ ವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಚಂಪಾಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಆದಿತ್ಯವಾರ 10-12-2023 ರಿಂದ ಲಾಗ್ಯಾತು ಮಾರ್ಗಶಿರ ಶುದ್ಧ ದ್ವಾದಶಿ ಆದಿತ್ಯವಾರ 24-12-2023ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಈ ವರ್ಷದ ಚಂಪಾಷಷ್ಠಿ ಮಹೋತ್ಸವವು ಅದ್ಧೂರಿಯಾಗಿ ನಡೆಯಲಿದೆ.ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿಯ ಚಂಪಾಷಷ್ಠಿ ಮಹೋತ್ಸವ ಡಿಸೆಂಬರ್​ 10 ರಿಂದ ಆರಂಭವಾಗಲಿದೆ. ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ […]

ಕೃಷಿ ವಿವಿಯಿಂದ ಹವಾಮಾನ ವೈಪರೀತ್ಯಗಳ ಕುರಿತು ರೈತರಿಗೆ ವಿಶೇಷ ತಿಳುವಳಿಕೆ ಮತ್ತು ಮಾಹಿತಿ

ಬೆಂಗಳೂರು: ಎಲ್​ ನಿನೋ ಪರಿಣಾಮದಿಂದ ಸಮುದ್ರದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗಿ ಮೋಡಗಳು ಅಲ್ಲಿಗೆ ಚಲಿಸುತ್ತದೆ. ಆದ್ದರಿಂದ ಈ ಬಾರಿಯ ಮೋಡಗಳು ಸುಮುದ್ರದೆಡೆಗೆ ಚಲಿಸಿರುವುದರಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಸೂಕ್ತ ಬೆಳೆ ಬೆಳೆಯಲು ಈಗಾಗಲೇ ಐ.ಎಂ.ಡಿ ಮತ್ತು ಐ.ಸಿ.ಆರ್ ಸಹಯೋಗದಲ್ಲಿ ಪರಿಚಯಿಸಿರುವ ಮೇಘದೂತ್ ಮೊಬೈಲ್​ ಅಪ್ಲಿಕೇಶನ್​ನ ಬಳಕೆಯ ಕುರಿತು ಪ್ರಾತ್ಯಕ್ಷಿಕೆಗಳ ಮೂಲಕ ತಿಳಿಸಲಾಗುತ್ತಿದೆ.ಅತಿವೃಷ್ಟಿ, ಅನಾವೃಷ್ಟಿ ಎರಡೂ ಪ್ರಕೃತಿಯ ನಿಯಮ. 4ರಿಂದ 5 ವರ್ಷಗಳಿಗೊಮ್ಮೆ ‘ಎಲ್​ ನಿನೋ’ ಎನ್ನುವ ಹವಾಮಾನ ಪರಿಣಾಮ ಇರುತ್ತದೆ. ಪೆಸಿಫಿಕ್ ಮಹಾಸಾಗರದಲ್ಲಿ ಉಷ್ಣಾಂಶ ಹೆಚ್ಚಾಗಿ […]

ಸಿಎಂ ಸಿದ್ದರಾಮಯ್ಯ: 99.52 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ಜಮಾವಣೆ

ಬೆಂಗಳೂರು: ತಮ್ಮ ಸರ್ಕಾರಕ್ಕೆ ಆರು ತಿಂಗಳು ಪೂರೈಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಗ್ಯಾರಂಟಿ ಸಾಧನೆ ಬಗ್ಗೆ ವಿವರಿಸುತ್ತ, ಗೃಹಲಕ್ಷ್ಮಿ ಯೋಜನೆಯಡಿ ರೂ. 17,500 ಕೋಟಿ ಅನುದಾನ ಮೀಸಲಿಟ್ಟಿದ್ದು, ಈವರೆಗೆ ರೂ. 11,200 ಕೋಟಿ ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. 99.52 ಲಕ್ಷ ನೋಂದಾಯಿತ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.99.52 ಲಕ್ಷ ನೋಂದಾಯಿತ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗಿದೆ ಎಂದು ಸಿಎಂ‌ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿ ಈವರೆಗೆ […]