ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ.

ಬೆಂಗಳೂರು: ಬೆಳಗಾವಿ–ಬೆಂಗಳೂರು, ಶ್ರೀ ಮಾತಾ ವೈಷ್ಣೋದೇವಿ ಕತ್ರಾ–ಅಮೃತಸರ ಹಾಗೂ ಅಜ್ನಿ (ನಾಗ್ಪುರ)–ಪುಣೆ ಮಾರ್ಗಗಳಲ್ಲಿ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ನ ಹೊಸ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು.ಮೋದಿ ಅವರು ನಿಲ್ದಾಣಕ್ಕೆ ಆಗಮಿಸಿದಾಗ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ವಿ. ಸೋಮಣ್ಣ ಬರಮಾಡಿಕೊಂಡರು. ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ್ದಲ್ಲದೇ ಲೋಕೋ ಪೈಲಟ್ಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ಪಿ.ಸಿ. ಮೋಹನ್, ರೈಲ್ವೆ […]
ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ವ್ಯಕ್ತಿಗಳಿಂದ ಹಲ್ಲೆ: ಗಂಭೀರ ಗಾಯಗೊಂಡ ಯೂಟ್ಯೂಬರ್ ಗಳು ಆಸ್ಪತ್ರೆಗೆ ದಾಖಲು!

ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಎನ್ನುವ ಪ್ರದೇಶದಲ್ಲಿ ಯೂಟ್ಯೂಬರ್ ಗಳ ಮೇಲೆ ಸ್ಥಳೀಯ ವ್ಯಕ್ತಿಗಳು ಹಲ್ಲೆ ನಡೆಸಿದ್ದು ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.ಒಂದಷ್ಟು ವ್ಯಕ್ತಿಗಳು ಯುಟ್ಯೂಬರ್ ಗಳಿಗೆ ಧಮ್ಕಿ ಹಾಕಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುಟ್ಯೂಬರ್ ಗಳು ವಿಡಿಯೋ ತೆಗೆಯುವ ಕರ್ತವ್ಯ ನಿರ್ವಹಿಸುತ್ತಿದ್ದಾಗ,ಸ್ಥಳಕ್ಕೆ ಆಗಮಿಸಿದ ಒಂದಷ್ಟು ವ್ಯಕ್ತಿಗಳು ಯುಟ್ಯೂಬರ್ ಗಳನ್ನು ನಿಂದಿಸಿದ್ದಾರೆ.ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಒಂದಷ್ಟು ವ್ಯಕ್ತಿಗಳು ಯುಟ್ಯೂಬರ್ ಗಳ ವಿಡಿಯೋ ಕ್ಯಾಮರಾಗಳನ್ನು […]
ಕಾಸರಗೋಡು: ನಾಳೆ (ಆ.6) ಶಾಲಾ-ಕಾಲೇಜುಗಳಿಗೆ ರಜೆ; ರೆಡ್ ಅಲರ್ಟ್ ಘೋಷಣೆ

ಕಾಸರಗೋಡು: ಕೇಂದ್ರ ಹವಾಮಾನ ಇಲಾಖೆ ಆ.6 ರಂದು ಬುಧವಾರ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಮುಂಜಾಗ್ರತೆ ಅಂಗವಾಗಿ ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಇಂಬುಶೇಖರ್ ರಜೆ ಪ್ರಕಟಿಸಿದ್ದಾರೆ.
‘ಕರಿಯ-2’ ಚಿತ್ರದ ನಟ ಸಂತೋಷ್ ಬಾಲರಾಜ್ ನಿಧನ.

ಬೆಂಗಳೂರು: ಚಂದನವನದ ಯುವ ನಟ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಮಂಗಳವಾರ (ಆ.5) ಖಾಸಗಿ ಆಸ್ಪತ್ರೆಯಲ್ಲಿ ಸಂತೋಷ್ 5 (Santhosh Balaraj) ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ 9.45ರ ಸುಮಾರಿಗೆ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ. ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರನಾಗಿದ್ದ ಅವರು ಕಳೆದ ಕೆಲ ಸಮಯದಿಂದ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದರು. ಜಾಂಡೀಸ್ ಮೈಗೆಲ್ಲ ಹರಡಿದ ಕಾರಣ ಅವರ ಪರಿಸ್ಥಿತಿ ಗಂಭೀರ ಆಗಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ […]
“ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ, ಅಳಬೇಡಿ” ಡೆತ್ ನೋಟ್ ಬರೆದಿಟ್ಟು 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ.!

ಆತ್ಮಹತ್ಯೆಗೆ ಶರಣಾದ ಬಾಲಕ 7ನೇ ತರಗತಿ ವಿದ್ಯಾರ್ಥಿ ಗಾಂಧಾರ್(13). ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಧಾರ್ನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಸವಿತಾ ಖ್ಯಾತ ಜಾನಪದ ಗಾಯಕಿಯಾಗಿದ್ದಾರೆ. ಸವಿತಾ ಅವರು ಕಳೆದ ಶುಕ್ರವಾರ ಜಾನಪದ ಕಾರ್ಯಕ್ರಮದ ಹಿನ್ನಲೆ ಆಸ್ಟ್ರೇಲಿಯಾಗೆ ಹೋಗಿದ್ದರು. ಇದೀಗ ತಾಯಿ ವಾಪಸ್ ಆಗಬೇಕಿದೆ. ಇನ್ನೂ ತಾಯಿ ಬೆಂಗಳೂರಿಗೆ ಬರುವ ತನಕ ಮರಣೋತ್ತರ ಪರೀಕ್ಷೆ ನಡೆಸದೇ ಇರುವಂತೆ ತೀರ್ಮಾನ ಕೈಗೊಳ್ಳಲಾಗಿದೆ. […]