ಎಲ್ ಐ ಸಿಗಿಂತ ವಿದೇಶಿ ಸಂಸ್ಥೆಗಳಲ್ಲೇ ಅದಾನಿ ಭಾರೀ ಹೂಡಿಕೆ!

ನವದೆಹಲಿ: ಅದಾನಿ ಸಮೂಹದ ಕಂಪನಿಗಳಲ್ಲಿ ಎಲ್ಐಸಿ ಹಣ ಹೂಡಿರುವುದು ವಿದೇಶಿ ಮಾಧ್ಯಮ ವರದಿಗಳಿಂದ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಒಳಗಾಗಿದ್ದರೂ, ಅಸಲಿಗೆ ಅಮೆರಿಕ ಮತ್ತು ಜಾಗತಿಕ ವಿಮಾ ಕಂಪನಿಗಳೇ ಅದಾನಿ ಸಮೂಹದಲ್ಲಿ ಹೆಚ್ಚು ಹಣ ಹೂಡಿಕೆ ಮಾಡಿರುವುದು ಬಯಲಾಗಿದೆ. ಕಳೆದ ಜೂನ್ನಲ್ಲಿ ಅದಾನಿ ಪೋರ್ಟ್ಸ್ ಎಸ್ಇಝಡ್ನಲ್ಲಿ ಎಲ್ಐಸಿ 570 ದಶಲಕ್ಷ ಡಾಲರ್ (5,000 ಕೋಟಿ ರೂ.) ಹೂಡಿಕೆ ಮಾಡಿದ ಒಂದು ತಿಂಗಳಲ್ಲೇ ಅಮೆರಿಕದ ಅಥೆನೆ ಇನ್ಶೂರೆನ್ಸ್ ಕಂಪನಿಯು ಅದಾನಿ ಸಮೂಹದ ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ನಲ್ಲಿ 6,650 ಕೋಟಿ ರೂ. […]
ಗಂಡ-ಹೆಂಡತಿ ಜಗಳ: ಅವಳಿ ಮಕ್ಕಳ ಕತ್ತು ಸೀಳಿ ಕೊಂದ ತಂದೆ!

ಮಹಾರಾಷ್ಟ್ರ: ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳ ನಡೆದು ಪತ್ನಿ ತವರು ಮನೆ ಸೇರಿದ ನಂತರ ಪಾಪಿ ತಂದೆಯೊಬ್ಬ ತನ್ನ ಎರಡು ವರ್ಷದ ಅವಳಿ ಹೆಣ್ಣು ಮಕ್ಕಳನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ಡು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ನಡೆದಿದೆ. ಆರೋಪಿ ವಾಶಿಮ್ ಜಿಲ್ಲೆಯ ನಿವಾಸಿ ರಾಹುಲ್ ಚವಾಣ್. ಚವಾಣ್ ತನ್ನ ಪತ್ನಿ ಮತ್ತು ಇಬ್ಬರು ಪುತ್ರಿಯರೊಂದಿಗೆ ಪ್ರಯಾಣಿಸುತ್ತಿದ್ದಾಗ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿದೆ. ತದನಂತರ ಹೆಂಡತಿ ತನ್ನ ಹೆತ್ತವರ ಮನೆಗೆ […]
4 ವರ್ಷಗಳ ಬಳಿಕ ಭಾರತ ಚೀನಾ ನಡುವೆ ನೇರ ವಿಮಾನ ಹಾರಾಟ ಆರಂಭ.

ನವದೆಹಲಿ: ನಾಲ್ಕು ವರ್ಷಗಳ ಬಳಿಕ ಭಾರತ ಮತ್ತು ಚೀನಾ ನಡುವೆ ನೇರ ವಿಮಾನ ಹಾರಾಟ ಆರಂಭವಾಗಿದೆ. ಈ ಕುರಿತು ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿ ವಕ್ತಾರೆ ಯು ಜಿಂಗ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಚೀನಾ ಮತ್ತು ಭಾರತದ ನಡುವೆ ನೇರ ವಿಮಾನ ಹಾರಾಟ ಈಗ ಸಾಧ್ಯವಾಗಿದೆ. ಕೋಲ್ಕತ್ತ–ಗುವಾಂಗ್ಝೌ ವಿಮಾನ ಭಾನುವಾರ (ಅ.26) ಹಾರಾಟ ನಡೆಸಿದೆ.ಶಾಂಘೈ– ದೆಹಲಿ ನಡುವೆ ನ.9ರಿಂದ ವಿಮಾನ ಹಾರಾಟ ಆರಂಭವಾಗಲಿದೆ. ದೆಹಲಿ ಮತ್ತು ಶಾಂಘೈ ನಡುವೆ ವಾರದಲ್ಲಿ ಮೂರು ವಿಮಾನ ಸಂಚರಿಸಲಿವೆ’ […]
ಅಣ್ವಸ್ತ್ರ ‘ಬ್ಯೂರ್ ವೆಸ್ಟ್ನಿಕ್’ ಕ್ಷಿಪಣಿ ಪರೀಕ್ಷೆ ಯಶಸ್ವಿ: ರಷ್ಯಾ ಅಧ್ಯಕ್ಷ ಪುಟಿನ್ ಘೋಷಣೆ

ಮಾಸ್ಕೊ: ಅಣ್ವಸ್ತ್ರ ಸಜ್ಜಿತ ಶಕ್ತಿಶಾಲಿ ‘ಬ್ಯೂರ್ವೆಸ್ಟ್ನಿಕ್’ ಕ್ರೂಸ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾನುವಾರ ಹೇಳಿದ್ದಾರೆ.ಈ ಕ್ಷಿಪಣಿ ನಿಯೋಜನೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವಂತೆ ಸಶಸ್ತ್ರ ಪಡೆಗಳಿಗೆ ಅವರು ಆದೇಶಿಸಿದ್ದಾರೆ. ಈ ಕ್ಷಿಪಣಿ ಕಾರ್ಯಾಚರಣೆ ವ್ಯಾಪ್ತಿಗೆ ಮಿತಿ ಇಲ್ಲ. ಇದು ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯುವುದು ಮಾತ್ರವಲ್ಲದೇ, ಆಣುಶಕ್ತಿಯಿಂದಲೇ ಕಾರ್ಯ ನಿರ್ವಹಿಸುವುದು ವಿಶೇಷ. ಕ್ಷಿಪಣಿ ಪರೀಕ್ಷೆ ಬಳಿಕ ಸೇನಾ ಸಿಬ್ಬಂದಿ ಮುಖ್ಯಸ್ಥ ಹಾಗೂ ಸೇನೆಯ ಇತರ ಅಧಿಕಾರಿಗಳ ಜೊತೆ ವರ್ಚುವಲ್ ಆಗಿ ಪುಟಿನ್ […]
ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಮೇಲೆ ಕ್ರಮಕ್ಕೆ ರಾಜ್ಯ ಮಹಿಳಾ ಆಯೋಗ ಒತ್ತಾಯ!

ಬೆಂಗಳೂರು: ‘ಪಶ್ಚಿಮ ಬಂಗಾಳದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ. ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದಿದ್ದು, ‘ಬೆಂಗಳೂರು ಉತ್ತರ ತಾಲ್ಲೂಕಿನ ಗಂಗೊಂಡನಹಳ್ಳಿಯಲ್ಲಿ ನೆಲಸಿದ್ದ ಗೃಹಿಣಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದಪ್ರಕರಣವನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಕೃತ್ಯ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮ ಕೈಗೊಂಡಿರುವ ಬಗ್ಗೆ ಆಯೋಗಕ್ಕೆ ವರದಿ ನೀಡಬೇಕು’ ಎಂದು ಸೂಚಿಸಿದೆ.