ಅಪಾಯಕಾರಿಯಾಗಿದೆ ಬೆಂಗಳೂರಿನ ಏರ್ ಕ್ವಾಲಿಟಿ; ಇಲ್ಲಿದೆ ಉಡುಪಿ, ಮಂಗಳೂರು ವಾಯು ಗುಣಮಟ್ಟದ ಡೀಟೈಲ್ಸ್

ಬೆಂಗಳೂರು, ಏಪ್ರಿಲ್ 06: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ವಾಯು ಗುಣಮಟ್ಟದಲ್ಲಿ ಏರಿಳಿತ ಕಂಡು ಬರುತ್ತಿದೆ. ಇಂದಿನ ಸ್ಥಿತಿಯಲ್ಲಿ ಬೆಳಗಾವಿ ಬೆಂಗಳೂರು ಸೇರಿದಂತೆ ಕೆಲವು ಕಡೆಗಳಲ್ಲಿ ಏರ್ ಕ್ವಾಲಿಟಿಯಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದೆ. ಆದರೆ, ಬೆಂಗಳೂರಿನ ವಾಯು ಗುಣಮಟ್ಟ ಇನ್ನೂ ಅಪಾಯಕಾರಿ ಮಟ್ಟದಲ್ಲಿಯೇ ಉಳಿದಿದ್ದು, ಇದರಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಕೆಲ ದಿನಗಳ ಹಿಂದೆ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ AQI ಇಂದು […]

ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಕೇರಳ ಯುವತಿ ಶರಣ್ಯ ಪತ್ತೆ – 3 ದಿನಗಳನ್ನು ಹೀಗೆ ಕಳೆದಿದ್ದರು ಶರಣ್ಯಾ

ತಡಿಯಾಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ 36 ವರ್ಷದ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಇವರು ಕಾಡಿನಲ್ಲಿ ಮೂರು ದಿನಗಳು ಒಬ್ಬಂಟಿಯಾಗಿ ಕಳೆದಿದ್ದರು, ವೈದ್ಯರು ಅವರ ಆರೋಗ್ಯ ಪರಿಶೀಲನೆ ನಡೆಸಿದ್ದಾರೆ. ಶರಣ್ಯ, ಐಟಿ ಉದ್ಯೋಗಿಯಾಗಿದ್ದು, ಏಪ್ರಿಲ್ 2ರಂದು ಕೊಡಗು ಜಿಲ್ಲೆಯ ಕಕ್ಕಬ್ಬೆ ಗ್ರಾಮದಲ್ಲಿ ಖಾಸಗಿ ಹೋಂಸ್ಟೇಯಲ್ಲಿ ತಂಗಿ, ತಡಿಯಾಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೊರಟಿದ್ದರು. ಮಧ್ಯಾಹ್ನ ಎರಡು ಗಂಟೆಗೆ “ದಾರಿ ತಪ್ಪಿದ್ದೇನೆ” ಎಂದು ಕರೆ ಮಾಡಿ ಸಂಪರ್ಕ ಕಟ್ ಆಗಿತ್ತು.  ಅರಣ್ಯ ಇಲಾಖೆಯಿಂದ ಶೋಧಕಾರ್ಯ ಶರಣ್ಯ ಪತ್ತೆಗೆ ಅರಣ್ಯ […]

ಕರ್ನಾಟಕದಲ್ಲಿ ಫ್ಲಾಪ್ ಆಯ್ತು ಈ ಯೋಜನೆ. ರಾಜ್ಯದ ಜನರಿಗೆ ಸಿಕ್ತು ಬಿಗ್ ರಿಲೀಫ್

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ದೇಶನದಂತೆ ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಕಡ್ಡಾಯಗೊಳಿಸಲಾಗಿತ್ತು. ಆದರೆ ರಾಜ್ಯದಲ್ಲಿ ಈ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲ. ವಾಹನಗಳ ಭದ್ರತೆ ಮತ್ತು ವಂಚನೆ ತಡೆಗಟ್ಟಲು ಜಾರಿಗೆ ತಂದ ಈ ಯೋಜನೆಗೆ ಜನರಿಂದ ಸ್ಪಂದನೆ ಕಡಿಮೆ ಕಂಡುಬಂದಿದೆ. ಹಲವಾರು ಬಾರಿ ಡೆಡ್‌ ಲೈನ್ ನೀಡಿದರೂ ಬಹುತೇಕ ವಾಹನ ಸವಾರರು HSRP ಅಳವಡಿಸಿಕೊಳ್ಳಲಿಲ್ಲ. ಇದರಿಂದಾಗಿ ಸರ್ಕಾರ ಯೋಜನೆಯನ್ನು ಸಡಿಲಗೊಳಿಸಿದ್ದು, ವಾಹನ ಸವಾರರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಾಮಾಣಿಕತೆಗೆ […]

ಸಶಸ್ತ್ರ ಸೀಮಾ ಬಲ ಪಡೆಯಲ್ಲಿದೆ ಭರ್ಜರಿ ಉದ್ಯೋಗಾವಕಾಶಗಳು: ಯಾರು ಅರ್ಜಿ ಸಲ್ಲಿಸಬಹುದು?

ಬೆಂಗಳೂರು: 10 ನೇ ತರಗತಿ ಪಾಸಾಗಿ ವಿವಿಧ ಕೌಶಲ್ಯ ಹೊಂದಿರುವವರಿಗೆ ಕೇಂದ್ರ ಗೃಹ ಇಲಾಖೆ ಅಡಿ ಕಾರ್ಯನಿರ್ವಹಿಸುವ ‘ಸಶಸ್ತ್ರ ಸೀಮಾ ಬಲ’ (ಎಸ್‌ಎಸ್‌ಬಿ) ಪಡೆಯಲ್ಲಿ ಒಟ್ಟು 827 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಎಸ್‌ಎಸ್‌ಬಿಯಲ್ಲಿ ಈ ಹುದ್ದೆಗಳು ‘ಕಾನ್ಸ್‌ಟೆಬಲ್– ಟ್ರೇಡ್ಸ್‌ಮನ್’ ವಿಭಾಗದ ಹುದ್ದೆಗಳಾಗಿವೆ. ಅರ್ಹ ಪುರುಷ–ಮಹಿಳಾ ಅಭ್ಯರ್ಥಿಗಳು ತಮ್ಮ ಕೌಶಲ್ಯದ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು, ಗರಿಷ್ಠ 27 ವರ್ಷ. ಕೆಲ ಹುದ್ದೆಗಳಿಗೆ 23 ವರ್ಷ […]

RCB’ಗೆ ಅಧಿಕೃತ ಡೈರಿ ಪಾರ್ಟ್ನರ್ ಆದ ಕೆಎಂಎಫ್‌ ನಂದಿನಿ.

ಬೆಂಗಳೂರು: ಪ್ರತಿಷ್ಠಿತ ಐಪಿಎಲ್ ಟಿ-20 ಲೀಗ್ ಪಂದ್ಯಾವಳಿಯು ಇದೇ 28ರಿಂದ ಆರಂಭವಾಗುತ್ತಿದ್ದು, ರಾಜ್ಯದ ಹೆಮ್ಮಯ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ನಂದಿನಿ ಬ್ರ್ಯಾಂಡ್ ಅನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಧಿಕೃತ ಡೇರಿ ಪಾಲುದಾರರಾಗಿ ಕೈಜೋಡಿಸಿದೆ. ನಂದಿನಿ ಬ್ರ್ಯಾಂಡ್ ಸದಾ ಕ್ರೀಡೆ ಮತ್ತು ಯುವ ಜನತೆಯನ್ನು ಪ್ರೋತ್ಸಾಹಿಸುವ ಧ್ಯೇಯವನ್ನು ಹೊಂದಿದ್ದು, ರಾಜ್ಯದ ಹೆಮ್ಮೆಯ ಎರಡು ಪ್ರತಿಷ್ಠಿತ ಬ್ರ್ಯಾಂಡ್‌ಗಳಾದ ‘ನಂದಿನಿ ಮತ್ತು ಆರ್‌ಸಿಬಿ’ ಒಂದಾಗಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ. ಶಿವಸ್ವಾಮಿ ತಿಳಿಸಿದ್ದಾರೆ. […]