ಬೆಂಗಳೂರಿಗೆ ಎಂಟ್ರಿ ಕೊಟ್ಟ ಎಬೋಲಾ? ಉಗಾಂಡಾದಿಂದ ಬಂದ ಮಹಿಳೆಗೆ ಸೋಂಕಿನ ಲಕ್ಷಣ,ಹೈ ಅಲರ್ಟ್

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಶಂಕಿತ ಲಕ್ಷಣಗಳು ಕಂಡುಬಂದ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಹೈಅಲರ್ಟ್ ಘೋಷಿಸಿದೆ. ಮಹಿಳೆಯನ್ನು ನಗರದ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಸ್ಥಳಾಂತರಿಸಿ ಪ್ರತ್ಯೇಕ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಇದುವರೆಗೆ ಭಾರತದಲ್ಲಿ ಎಬೋಲಾ ಸೋಂಕು ದೃಢಪಟ್ಟಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಉಗಾಂಡಾದ ಕ್ಯಾಂಪಾಲಾ ನಿವಾಸಿಯಾಗಿರುವ 28 ವರ್ಷದ ನಗಿರೆ ಲತೀಫಾ ಮೇ 23ರಂದು ಬೆಂಗಳೂರಿಗೆ ಬಂದಿದ್ದರು. ಬಳಿಕ ದೇಹ ನೋವು ಸೇರಿದಂತೆ ಎಬೋಲಾ ವೈರಸ್ಗೆ ಹೋಲುವ ಕೆಲವು […]
ರಾಜ್ಯದ ಅರ್ಧದಷ್ಟು ಬೇಕರಿ ತಿನಿಸುಗಳು ತಿನ್ನಲು ಯೋಗ್ಯವಲ್ಲ,ತಿಂಡಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು, ವರದಿ ಬಿಚ್ಚಿಟ್ಟ ಭಯಾನಕ ಸತ್ಯಗಳಿವು!

ಬೆಂಗಳೂರು: ಬಣ್ಣ ಬಣ್ಣದ ಸಿಹಿತಿಂಡಿಗಳು, ಬಿಸಿ ಬಿಸಿ ಪಫ್ಸ್, ಕುರುಕುಲು ಚಿಪ್ಸ್ಗಳನ್ನು ಇಷ್ಟಪಟ್ಟು ತಿನ್ನುವ ಗ್ರಾಹಕರಿಗೆ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನೀಡಿರುವ ಇತ್ತೀಚಿನ ವರದಿ ಆತಂಕ ಹುಟ್ಟಿಸಿದೆ. ರಾಜ್ಯದ ವಿವಿಧ ಬೇಕರಿಗಳಲ್ಲಿ ಮಾರಾಟವಾಗುತ್ತಿರುವ ಹಲವು ಆಹಾರ ಪದಾರ್ಥಗಳು ಮಾನವ ಸೇವನೆಗೆ ಸುರಕ್ಷಿತವಾಗಿಲ್ಲ ಎಂಬ ಅಂಶ ಲ್ಯಾಬ್ ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ್ಯಂತ ಸಂಗ್ರಹಿಸಿದ 35,639 ಆಹಾರದ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗೆ ಕಳುಹಿಸಿದ್ದರು. ಲ್ಯಾಬ್ ವರದಿಯ ಪ್ರಕಾರ, ಅನೇಕ ಬೇಕರಿ ಉತ್ಪನ್ನಗಳು […]
ನಾಳೆ (ಮೇ.28) ಸಿದ್ದರಾಮಯ್ಯ ರಾಜೀನಾಮೆ, ಡಿಕೆಶಿ ಮುಖ್ಯಮಂತ್ರಿಯಾಗಿ ಈ ವಾರವೇ ಪ್ರಮಾಣವಚನ?

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ರಾಜ್ಯದ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ. ಗುರುವಾರ (ಮೇ 28) ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಈ ಶುಕ್ರವಾರ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಿಸುವ ನಿರೀಕ್ಷೆ ಇದೆ ದೆಹಲಿ ಹೈಕಮಾಂಡ್ ಸಭೆಯ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, […]
ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಹಾಸನದ ಕೃಷಿಕನನ್ನು ರಕ್ಷಿಸಿದ ಮಂಗಳೂರು ಪೊಲೀಸರು

ಮಂಗಳೂರು: ನಗರದ ಹೊರವಲಯದ ಕೂಳೂರು ಸೇತುವೆ Kuloor Bridge ಸಮೀಪದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಹಾಸನ ಜಿಲ್ಲೆಯ Hassan District ಜಿಲ್ಲೆಯ ಕೃಷಿಕನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಸಮೀಪದ ಹಳ್ಳಿಯ ನಿವಾಸಿಯಾಗಿರುವ ಕೃಷಿಕ ಆರೋಗ್ಯ ಹಾಗೂ ಹಣಕಾಸಿನ ಸಮಸ್ಯೆಯಿಂದ ಮನನೊಂದು ಶುಕ್ರವಾರ ಬೆಳಗ್ಗೆ ಮನೆಯಿಂದ ಯಾರಿಗೂ ತಿಳಿಸದೆ ಹೊರಟಿದ್ದರು. ಮೊಬೈಲ್ಫೋನ್ ಆನ್ನಲ್ಲಿದ್ದ ಕಾರಣ ಮನೆಯವರು ನಿರಂತರ ಕರೆ ಮಾಡಿ ಮನೆಗೆ ಮರಳುವಂತೆ ಮನವಿ […]
ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ನಿಯಮ ಜಾರಿ : ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕರ್ನಾಟಕ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಇದೀಗ ಮಹತ್ವದ ಬದಲಾವಣೆ ತರಲು ನಿರ್ಧರಿಸಲಾಗಿದೆ. ಪ್ರತಿ ತಿಂಗಳು ಮನೆಯ ಯಜಮಾನಿಯ ಖಾತೆಗೆ 2,000 ರೂ. ಜಮೆ ಮಾಡುವ ಈ ಯೋಜನೆಯಲ್ಲಿ ಅನರ್ಹರು ಹಾಗೂ ಮೃತಪಟ್ಟವರ ಹೆಸರಿನಲ್ಲಿ ಹಣ ಹೋಗುತ್ತಿರುವ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇನ್ನು ಮುಂದೆ ಯೋಜನೆಯ ಎಲ್ಲಾ ಫಲಾನುಭವಿಗಳು ‘ಒನ್-ಟೈಮ್ ಬಯೋಮೆಟ್ರಿಕ್’ ಮರು-ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಲಿದೆ. ಜೊತೆಗೆ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಖಾತೆಗೆ ಜೋಡಣೆ ಮಾಡಬೇಕಾಗುತ್ತದೆ. ಸರ್ಕಾರ […]