ಮುರುಘಾ ಶ್ರೀ ಬಿಡುಗಡೆ: ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.ಮುರುಘಾ ಶ್ರೀ ವಿರುದ್ಧದ ಎರಡು ಪೋಕ್ಸೋ ಪ್ರಕರಣಗಳ ಪೈಕಿ ಒಂದರಲ್ಲಿ ಈಗಾಗಲೇ ಜಾಮೀನು ದೊರೆತಿದೆ. ಚಿತ್ರದುರ್ಗ ಜೈಲಿನಿಂದ ಶ್ರೀಗಳು ನಿನ್ನೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಿತ್ರದುರ್ಗದ ಕೋರ್ಟ್ಗೆ ಹಾಜರಾಗಿದ್ದರು. ಬುಧವಾರ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹೈಕೋರ್ಟ್ ವಿಧಿಸಿದ್ದ ಷರತ್ತುಗಳನ್ನು ಹಾಗೂ ದಾಖಲೆಗಳನ್ನು ಪರಿಶೀಲಿಸಿದ ನಂತರ ಜಿಲ್ಲಾ ಕಾರಾಗೃಹದ ಅಧಿಕಾರಿಗಳಿಗೆ ಶ್ರೀಗಳನ್ನು […]
ತಮಿಳುನಾಡಿನ ವಿದ್ಯಾರ್ಥಿಯಿಂದ ಕಡಿಮೆ ಬಜೆಟ್ನಲ್ಲಿ ವಾಯುಮಾಲಿನ್ಯ ಅಳೆಯುವ ಸಾಧನ ತಯಾರು

ಜಯಪ್ರಕಾಶ್ ತಮ್ಮ ಜಾಣ್ಮೆಯಿಂದ ಭೂಮಿಯ ಮೇಲ್ಮೈಯಿಂದ 10 ರಿಂದ 20 ಕಿಲೋಮೀಟರ್ ಒಳಗೆ ಟ್ರೋಪೋಸ್ಪಿಯರ್ನಲ್ಲಿ ವಾಯುಮಾಲಿನ್ಯದ ಮಟ್ಟವನ್ನು ಪತ್ತೆಹಚ್ಚಬಹುದಾದ ಸಣ್ಣ ಉಪಗ್ರಹ ಅಭಿವೃದ್ಧಿಪಡಿಸಿದ್ದಾನೆ. ಕೋಟಿ ವೆಚ್ಚದ ಸಾಂಪ್ರದಾಯಿಕ ಉಪಗ್ರಹಗಳಿಗಿಂತ ಭಿನ್ನವಾಗಿ ಇದು ಕೇವಲ ಒಂದು ಸಾವಿರ ರೂಪಾಯಿಗಳ ಅಲ್ಪ ಬಜೆಟ್ನಲ್ಲಿ ಉಪಗ್ರಹದ ಕಾರ್ಯಗಳನ್ನು ಮಾಡುತ್ತದೆ. ಚಹಾ ಮಾರುವವನ ಪುತ್ರ 16 ವರ್ಷದ ಜಯಪ್ರಕಾಶ್ ಎಂಬಾತ ಕಡಿಮೆ ಬಜೆಟ್ ಉಪಗ್ರಹವನ್ನು ಬಳಸಿಕೊಂಡು ವಾಯುಮಾಲಿನ್ಯ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ಆಧುನಿಕ ಸಾಧನ ತಯಾರಿಸಿದ್ದಾರೆ. ವಿಜ್ಞಾನ ಶಿಕ್ಷಕ ರಾಮಚಂದ್ರನ್ ಮತ್ತು ಪರಣಿ […]
ಸಚಿವ ಮಧು ಬಂಗಾರಪ್ಪ : ರಾಜ್ಯದಲ್ಲಿ 3 ಸಾವಿರ ಪಬ್ಲಿಕ್ ಶಾಲೆ ಆರಂಭಿಸಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಸುಮಾರು 3ಸಾವಿರ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ವಿಕಾಸಸೌಧದಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, 2024-25ರ ವೇಳೆಗೆ ಮಕ್ಕಳ ಸಂಖ್ಯೆ ಹೆಚ್ಚಾಗಬೇಕು. ಹಾಗಾಗಿ, ಗ್ರಾಮಾಂತರ ಭಾಗದಲ್ಲಿ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಮೂರು ವರ್ಷದಲ್ಲಿ ಕಾರ್ಯ ಪೂರ್ಣಗೊಳ್ಳಲಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು […]
ರಾಜ್ಯ ಬಿಜೆಪಿ ನೊಗ ಹೊತ್ತ ವಿಜಯೇಂದ್ರ : ಯುವ ನಾಯಕನಿಗೆ ಹಿರಿಯರ ಬೆಂಬಲ

ಬೆಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಹಾಗು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯ ಬಿಜೆಪಿಗೆ ಯುವ ನೇತಾರನ ಸಾರಥ್ಯ ಸಿಕ್ಕಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಹಿರಿಯರ ಆಶೀರ್ವಾದ ಪಡೆದು, ನಳೀನ್ ಕುಮಾರ್ ಕಟೀಲ್ ಅವರಿಂದ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು.ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಸ್ವೀಕರಿಸಿ […]
ಐಶ್ವರ್ಯಾ ರೈ, ಅನುಷ್ಕಾ ಶೆಟ್ಟಿ ಭಾಗಿ : ಬೆಂಗಳೂರು ಕಂಬಳಕ್ಕೆ ದಿನಗಣನೆ

ಬೆಂಗಳೂರು: ಕಂಬಳ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಕರಾವಳಿಯ ವಿವಿಧ ಭಾಷೆ – ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ತಯಾರಿ ನಡೆಸುತ್ತಿವೆ. ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್ಗೆ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್ನಲ್ಲಿ ಮೂಡಿ […]