ಸಿಎಂ ಘೋಷಣೆ : ಇನ್ಮುಂದೆ ರಾಜ್ಯದೆಲ್ಲೆಡೆ ಕೃಷಿ ಪಂಪ್ಸೆಟ್ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ

ಬೆಂಗಳೂರು : ಕೃಷಿ ಪಂಪ್ಸೆಟ್ಗೆ ಇನ್ನು ಮುಂದೆ ನಿರಂತರ 7 ತಾಸು ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದೆಲ್ಲೆಡೆ ಕೃಷಿ ಪಂಪ್ಸೆಟ್ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅದರಂತೆ ಯಾದಗಿರಿ, ಕೊಪ್ಪಳ, ರಾಯಚೂರಿನಲ್ಲಿ ಏಳು ಗಂಟೆ ವಿದ್ಯುತ್ ಕೊಡಲು ಸೂಚನೆ ನೀಡಿದ್ದೆ. ಈಗ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆಯಾಗಿದ್ದು, ರಾಜ್ಯದ ಉಳಿದ ಎಲ್ಲಾ ಕಡೆಯೂ ಏಳು ಗಂಟೆ ವಿದ್ಯುತ್ ಕೊಡಲು […]
ಈಗಲೇ ಮಾಲಿನ್ಯದಿಂದ ತತ್ತರಿಸಿರುವ ಜನತೆಯಲ್ಲಿ ಆತಂಕ :ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪನದ ಅನುಭವ

ನವದೆಹಲಿ: ಪಶ್ಚಿಮ ನೇಪಾಳದಲ್ಲಿ ಸೋಮವಾರ ಮತ್ತೆ 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಷ್ಟ್ರರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್ರಬಲ ಕಂಪನದ ಅನುಭವವಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.ಇಂದು ಸಂಜೆ 4:16ಕ್ಕೆ ದೆಹಲಿ ಮತ್ತು ಅದರ ನೆರೆಯ ಪ್ರದೇಶಗಳಾದ ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್, ಫರಿದಾಬಾದ್ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ. ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ನೇಪಾಳದಲ್ಲಿರುವ ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 5.6ರಷ್ಟಿತ್ತು ಎಂದು ತಿಳಿದು ಬಂದಿದೆ. ನೆರೆಯ […]
ಮಲಾಡ್ ಕನ್ನಡ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಮಲಾಡ್: ಮಲಾಡ್ ಕನ್ನಡ ಸಂಘ 4 ಬಿ 21 ಯುನಿಟಿ ಅಪಾರ್ಟ್ಮೆಂಟ್ ಮಾರ್ವೆ ರೋಡ್, ಮಲಾಡ್ ಪಶ್ಚಿಮ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 5ರಂದು ಸಂಘದ ಕಚೇರಿಯ ರಮನಾಥ ಪಯ್ಯಡೆ ಸ್ಮಾರಕ ಕಿರು ಸಭಾಗೃಹದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಿತು. ಸದಸ್ಯೆ ಸುಜಾತ ಅಮೀನ್ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನ್ಯಾಯವಾದಿ ಜಗದೀಶ್ ಎಸ್ ಹೆಗ್ಡೆ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.ಇಂಡಿಯನ್ ಆಯಿಲ್ ಕಂಪನಿ ನಿವೃತ್ತ ಅಧಿಕಾರಿ ದಾಮೋದರ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕರ್ನಾಟಕ […]
ಬಂಡೀಪುರ ಕಾಡಲ್ಲಿ ಗುಂಡಿನ ಚಕಮಕಿ: ಓರ್ವ ಬೇಟೆಗಾರ ಸಾವು

ಚಾಮರಾಜನಗರ: ಮೃತರನ್ನು ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಯುವಕ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಓರ್ವ ಬೇಟೆಗಾರ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ಚೆಕ್ ಪೋಸ್ಟ್ ಸಮೀಪ ನಡೆದಿದೆ.ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಮೃತಪಟ್ಟಿದ್ದಾನೆ. ಈ ವೇಳೆ ಬೇಟೆಗೆ ಬಂದ ಓರ್ವ ಯುವಕ […]
ಬೆಂಗಳೂರಿನಿಂದ ವಿಜಯಪುರ, ಬೆಳಗಾವಿಗೆ ವಿಶೇಷ ಎಕ್ಸ್ಪ್ರೆಸ್ ರೈಲು : ದೀಪಾವಳಿ ಸ್ಪೆಷಲ್

ಬೆಂಗಳೂರು: ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ವಿಜಯಪುರ ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕೆಂದು ನೈಋತ್ಯ ರೈಲ್ವೆ ಮನವಿ ಮಾಡಿದೆ.ದೀಪಾವಳಿ ಹಬ್ಬದ ವೇಳೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ. ರೈಲು ಸಂಖ್ಯೆ 06231/06232 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್ಪ್ರೆಸ್ (ಒಂದು ಟ್ರಿಪ್): ರೈಲು ಸಂಖ್ಯೆ 06231 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್ಪ್ರೆಸ್ ನವೆಂಬರ್ 10ರಂದು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಸಂಜೆ […]