ನಿಗಮ ಮಂಡಳಿ ಹುದ್ದೆಗಳ ಪರೀಕ್ಷೆಗೆ ಕೆಇಎಯಿಂದ ವಸ್ತ್ರಸಂಹಿತೆ ಬಿಡುಗಡೆ

ಬೆಂಗಳೂರು: ಇತ್ತೀಚೆಗೆ ನಡೆದ ಕೆಪಿಎಸ್​ಸಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಾಗಿದ್ದ ಗೃಹಿಣಿಯರ ಮಂಗಳಸೂತ್ರ ಹಾಗೂ ಕಾಲುಂಗುರ ತೆಗೆಸಿದ ಘಟನೆ ವಿವಾದ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ಪರೀಕ್ಷೆಗಳಿಗೆ ವಸ್ತ್ರ ಸಂಹಿತೆ ರೂಪಿಸಿದೆ. ಅದರಂತೆ ವಿವಾಹಿತ ಮಹಿಳೆಯರು ಮಾಂಗಲ್ಯ ಹಾಗೂ ಕಾಲುಂಗುರ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯುವವರಿಗೆ ಈಗಾಗಲೇ ಮಾರ್ಗಸೂಚಿ ರೂಪಿಸಿದ್ದ ಹಿನ್ನೆಲೆಯಲ್ಲಿ ಈಗ ಮಂಗಳಸೂತ್ರ ಮತ್ತು ಕಾಲುಂಗುರ ಕುರಿತ ಸ್ಪಷ್ಟೀಕರಣದೊಂದಿಗೆ ಪರೀಕ್ಷಾ ವಿದ್ಯಾರ್ಥಿಗಳು […]

ಫೆ. 17ರ ವರೆಗೆ ಅವಕಾಶಕ್ಕೆ ಸಾರಿಗೆ ಇಲಾಖೆ ನಿರ್ಧಾರ: ಹೆಚ್​ಎಸ್​ಆರ್​ಪಿ ಅಳವಡಿಕೆ ಸಮಯ ವಿಸ್ತರಣೆ

ಬೆಂಗಳೂರು: 2019ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾಗಿರುವ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್.ಎಸ್.ಆರ್.ಪಿ) ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಿದ್ದು, ವಾಹನ ಸವಾರರು ತರಾತುರಿಯಿಲ್ಲದೆ ಹೆಚ್.ಎಸ್.ಆರ್.ಪಿ ಅಳವಡಿಸಿಕೊಳ್ಳಬಹುದಾಗಿದೆ.ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಸುವಂತೆ ಆದೇಶ ಹೊರಡಿಸಿದ್ದ ರಾಜ್ಯ ಸಾರಿಗೆ ಇಲಾಖೆ ನವೆಂಬರ್​ 17ಕ್ಕೆ ಅಂತಿಮ ಗಡುವು ನೀಡಿತ್ತು. ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿ ಹೆಚ್​ಎಸ್​ಆರ್​ಪಿ […]

ಸಿಎಂ ಘೋಷಣೆ : ಇನ್ಮುಂದೆ ರಾಜ್ಯದೆಲ್ಲೆಡೆ ಕೃಷಿ ಪಂಪ್​ಸೆಟ್​ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ

ಬೆಂಗಳೂರು : ಕೃಷಿ ಪಂಪ್​ಸೆಟ್​ಗೆ ಇನ್ನು ಮುಂದೆ ನಿರಂತರ 7 ತಾಸು ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದೆಲ್ಲೆಡೆ ಕೃಷಿ ಪಂಪ್​ಸೆಟ್​ಗಳಿಗೆ ಏಳು ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅದರಂತೆ ಯಾದಗಿರಿ, ಕೊಪ್ಪಳ, ರಾಯಚೂರಿನಲ್ಲಿ ಏಳು ಗಂಟೆ ವಿದ್ಯುತ್ ಕೊಡಲು ಸೂಚನೆ ನೀಡಿದ್ದೆ. ಈಗ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆಯಾಗಿದ್ದು, ರಾಜ್ಯದ ಉಳಿದ ಎಲ್ಲಾ ಕಡೆಯೂ ಏಳು ಗಂಟೆ ವಿದ್ಯುತ್ ಕೊಡಲು […]

ಈಗಲೇ ಮಾಲಿನ್ಯದಿಂದ ತತ್ತರಿಸಿರುವ ಜನತೆಯಲ್ಲಿ ಆತಂಕ :ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪನದ ಅನುಭವ

ನವದೆಹಲಿ: ಪಶ್ಚಿಮ ನೇಪಾಳದಲ್ಲಿ ಸೋಮವಾರ ಮತ್ತೆ 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಷ್ಟ್ರರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್ರಬಲ ಕಂಪನದ ಅನುಭವವಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.ಇಂದು ಸಂಜೆ 4:16ಕ್ಕೆ ದೆಹಲಿ ಮತ್ತು ಅದರ ನೆರೆಯ ಪ್ರದೇಶಗಳಾದ ನೋಯ್ಡಾ, ಗ್ರೇಟರ್ ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್, ಫರಿದಾಬಾದ್ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ. ದೆಹಲಿಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ನೇಪಾಳದಲ್ಲಿರುವ ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 5.6ರಷ್ಟಿತ್ತು ಎಂದು ತಿಳಿದು ಬಂದಿದೆ. ನೆರೆಯ […]

ಮಲಾಡ್ ಕನ್ನಡ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಮಲಾಡ್: ಮಲಾಡ್ ಕನ್ನಡ ಸಂಘ 4 ಬಿ 21 ಯುನಿಟಿ ಅಪಾರ್ಟ್ಮೆಂಟ್ ಮಾರ್ವೆ ರೋಡ್, ಮಲಾಡ್ ಪಶ್ಚಿಮ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ. 5ರಂದು ಸಂಘದ ಕಚೇರಿಯ ರಮನಾಥ ಪಯ್ಯಡೆ ಸ್ಮಾರಕ ಕಿರು ಸಭಾಗೃಹದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಿತು. ಸದಸ್ಯೆ ಸುಜಾತ ಅಮೀನ್ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನ್ಯಾಯವಾದಿ ಜಗದೀಶ್ ಎಸ್ ಹೆಗ್ಡೆ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.ಇಂಡಿಯನ್ ಆಯಿಲ್ ಕಂಪನಿ ನಿವೃತ್ತ ಅಧಿಕಾರಿ ದಾಮೋದರ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕರ್ನಾಟಕ […]