ಹೈಕೋರ್ಟ್: ತೀರ್ಪು ಕಾಯ್ದಿರಿಸಿದ್ದು, ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣ

ಬೆಂಗಳೂರು: ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ.ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್​ ತೀರ್ಪು ಕಾಯ್ದಿರಿಸಿತು.ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಧಾರವಾಡ ಪೀಠ ತೀರ್ಪು ಕಾಯ್ದಿರಿಸಿತು. […]

ಇಬ್ಬರು ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ: ಒಬ್ಬರು ಸಾಹಿತಿ, ಇನ್ನೊಬ್ಬರು ವಿಜ್ಞಾನಿ : ಚಾಮರಾಜನಗರ

ಚಾಮರಾಜನಗರ: ನವೆಂಬರ್ 1ರಂದು 50ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು,ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿ ಜಿಲ್ಲೆಯ ಇಬ್ಬರು, ವಿಜಯನಗರ ಜಿಲ್ಲೆಯಲ್ಲಿ ಒಬ್ಬರಿಗೆ ಪ್ರಶಸ್ತಿ ಸಿಕ್ಕಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಗಣ್ಯರ ವಿವರ ಹೀಗಿದೆ.ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಇಂದು ಬೆಂಗಳೂರಿನಲ್ಲಿ ಘೋಷಿಸಿದರು.ಗಡಿಜಿಲ್ಲೆ ಚಾಮರಾಜನಗರದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದರೆ, ಕೊಪ್ಪಳ ಜಿಲ್ಲೆಯಲ್ಲಿ ಮೂವರು, ಬೆಳಗಾವಿಯ […]

ಮಹತ್ವದ ಸಭೆ : ಬೆಂಗಳೂರು ಬಿಜೆಪಿ ಶಾಸಕರೊಂದಿಗೆ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸಂಘಟನಾತ್ಮಕ ಹೋರಾಟ ಹಾಗೂ ಬರ ಅಧ್ಯಯನ ಪ್ರವಾಸದ ರೂಪುರೇಷೆ ಸಿದ್ಧಪಡಿಸುವ ಕುರಿತು ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು.ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಹಾಗೂ ಬರ ಅಧ್ಯಯನ ಪ್ರವಾಸದ ರೂಪುರೇಷೆ ಸಿದ್ಧಪಡಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು. ಶಾಸಕ ಉದಯ್ ಗರುಡಾಚಾರ್ ಬಿಎಸ್​ವೈ ಕಾಲು ಮುಟ್ಟಿ […]

14 ಜನರ ಬಂಧನ, 20 ಮಹಿಳೆಯರ ರಕ್ಷಣೆ : ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ನೊಂದ 20 ಮಹಿಳೆಯರನ್ನ ರಕ್ಷಿಸಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನಗರದಲ್ಲಿ ಮಾನವ ಕಳ್ಳಸಾಗಣಿಕೆ ಹಾಗೂ ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ 14 ಜನ ಆರೋಪಿಗಳನ್ನು ಬಂಧಿಸಲಾಗಿದೆ.ಬೆಂಗಳೂರಿನಲ್ಲಿ ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, 14 ಜನರ ಬಂಧಿಸಿದ್ದಾರೆ. ನೊಂದ 20 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಬಾಗಲಗುಂಟೆ, ವರ್ತೂರು, ಕೆ.ಆರ್. ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ […]

ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಬೆಂಗಳೂರಿನಲ್ಲಿ ಮುಂದುವರೆದ ಕಾರ್ಯಾಚರಣೆ

ಬೆಂಗಳೂರು: ಕಡೆಂಜಾ (Cadenza) ಅಪಾರ್ಟ್​ಮೆಂಟ್​ ಸಮೀಪ ಚಿರತೆ ಕಾಣಿಸಿಕೊಂಡಿದ್ದು ಸುತ್ತಮುತ್ತ ಹುಡುಕಾಟ ನಡೆಸಲಾಗಿತ್ತು. ಆದರೆ ಚಿರತೆ ತಪ್ಪಿಸಿಕೊಂಡು ಓಡಾಡುತ್ತಿದೆ.ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ನಿನ್ನೆ (ಸೋಮವಾರ) ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎರಡು ಬೋನುಗಳನ್ನಿಟ್ಟು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಬೆಂಗಳೂರಿನ ಹೊರವಲಯದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಹಿಡಿಯಲು ಮೈಸೂರಿನಿಂದ ವಿಶೇಷ ತಂಡ ಆಗಮಿಸಿದೆ. ಮೈಸೂರಿನಿಂದ ವಿಶೇಷ ತಂಡ ಆಗಮನ: ಚಿರತೆ ಕಾರ್ಯಾಚರಣೆಗಾಗಿ ಮೈಸೂರಿನಿಂದ ವಿಶೇಷ ತಂಡ ಬೆಂಗಳೂರಿಗೆ ಆಗಮಿಸಿದೆ. ಈಗಾಗಲೇ ಹಲವೆಡೆ […]