ದಕ್ಷಿಣ ಕನ್ನಡ: ಪುತ್ತೂರು ಪ್ರವೇಶಿಸಿದ ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದ ಅಕ್ಷತೆ

ಪುತ್ತೂರು(ದಕ್ಷಿಣ ಕನ್ನಡ): ರಥ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿ ಮೂಲಕ ಆಗಮಿಸಿತುಶ್ರೀ ರಾಮನ ಪ್ರತಿಷ್ಠಾಪನೆ ಮಹೋತ್ಸವದ ಹಿನ್ನೆಲೆ ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಪುತ್ತೂರಿಗೆ ಆಗಮಿಸಿದೆ. ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾಪನೆ ಮಹೋತ್ಸವದ ಹಿನ್ನೆಲೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ಏಕಕಾಲದಲ್ಲಿ ನಡೆಯುತ್ತಿರುವ ಅಕ್ಷತೆ ವಿತರಣೆ ಕಾರ್ಯಕ್ರಮದ ಭಾಗವಾಗಿ ಅಯೋಧ್ಯೆಯಿಂದ ಅಕ್ಷತೆ ಹೊತ್ತ ರಥ ಇಂದು ಪುತ್ತೂರನ್ನು ಪ್ರವೇಶಿಸಿದೆ. ರಾಮದೇವರ ಪ್ರತಿಷ್ಠಾಪನೆಯ ದಿನ […]
ವಿಕ್ಟೋರಿಯಾ ಆಸ್ಪತ್ರೆಯ ಅವ್ಯವಸ್ಥೆ ಮುಂದಿಟ್ಟ ಮಹಿಳೆ; ಪುತ್ರನ ಹೆಸರಿನ ಟ್ರಸ್ಟ್ಗೆ ನಿವೇಶನ ಮಂಜೂರು ಮಾಡಿದ ಸಿಎಂ

ಬೆಂಗಳೂರು: ಜನಸ್ಪಂದನ ಕಾರ್ಯಕ್ರಮದಲ್ಲಿ ಈ ಕುರಿತು ಸಿಎಂಗೆ ದೂರು ನೀಡಿದ ಮಹಿಳೆ, ಆರೋಗ್ಯ ಹದಗೆಟ್ಟು ವಿಕ್ಟೋರಿಯಾ ಆಸ್ಪತ್ರೆಗೆ ಅ.20 ರಂದು ಹೋಗಿದ್ದೆ. ರಾತ್ರಿಯಿಡಿ ಬೇಧಿ ಆಗಿದ್ದರಿಂದ ನನ್ನ ಬಟ್ಟೆ ಗಲೀಜಾಗಿತ್ತು. ಇದಕ್ಕೆ ಆಸ್ಪತ್ರೆ ಸಿಬ್ಬಂದಿ ಮಧ್ಯರಾತ್ರಿಯಲ್ಲೇ ಆಸ್ಪತ್ರೆಯಿಂದ ತೆರಳುವಂತೆ ಬೆದರಿಸಿದರು. ಆಯಾಸಗೊಂಡಿದ್ದ ನನಗೆ ಗ್ಲೂಕೋಸ್ ಕೂಡ ಹಾಕದೆ ಕೆಟ್ಟದಾಗಿ ವರ್ತಿಸಿದರು ಎಂದು ದೂರಿದರು.ಸೀಗೇಹಳ್ಳಿ ಗೇಟ್ ನಿವಾಸಿ ಸುನಿತಾ ಎಂಬುವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಸಿಎಂ ಮುಂದೆ ಅಳಲು ತೋಡಿಕೊಂಡರು.ಗದಗ ಜಿಲ್ಲೆಯಲ್ಲಿನ ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೆ ಸಿಎಂ […]
ಜನಸ್ಪಂದನ ಕಾರ್ಯಕ್ರಮ ಮುಕ್ತಾಯ: ಸ್ವೀಕಾರಗೊಂಡ ಅರ್ಜಿಗಳ ಇತ್ಯರ್ಥಕ್ಕೆ 15 ದಿನಗಳ ಗಡುವು: ಸಿಎಂ

ಬೆಂಗಳೂರು : ಬೆಳಗ್ಗೆ 9.30 ಗಂಟೆಗೆ ಪ್ರಾರಂಭವಾದ ಜನಸ್ಪಂದನ ಸಂಜೆ 5 ಗಂಟೆವರೆಗೆ ನಡೆಯಿತು. ಸಿಎಂ ಸಿದ್ದರಾಮಯ್ಯ ಜನರ ಅಹವಾಲು ಆಲಿಸಿ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು.ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ಮುಕ್ತಾಯವಾಗಿದ್ದು, ಭಾರಿ ಪ್ರಮಾಣದಲ್ಲಿ ಜನಸಮೂಹವೇ ಹರಿದು ಬಂದಿತ್ತು.ಇಂದು ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನರ ಅಹವಾಲು ಆಲಿಸಿ ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಬಂದ ಅರ್ಜಿಗಳಲ್ಲಿ ಬಹುತೇಕ ಕಂದಾಯ, ಪೊಲೀಸ್ ಇಲಾಖೆ, ಗೃಹಲಕ್ಷ್ಮಿ ಯೋಜನೆ, ಬಿಬಿಎಂಪಿ, ಪಿಂಚಣಿ, ಗ್ರಾಚ್ಯುಟಿ ಇತ್ಯರ್ಥ, […]
ಬೆಂಗಳೂರು “ರಾಜ – ಮಹಾರಾಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ ಕನೆಹಲಗೆ: 07 ಜೊತೆಅಡ್ಡಹಲಗೆ: 06 ಜೊತೆಹಗ್ಗ ಹಿರಿಯ: 21 ಜೊತೆನೇಗಿಲು ಹಿರಿಯ: 32 ಜೊತೆಹಗ್ಗ ಕಿರಿಯ: 31 ಜೊತೆನೇಗಿಲು ಕಿರಿಯ: 62 ಜೊತೆಒಟ್ಟು ಕೋಣಗಳ ಸಂಖ್ಯೆ: 159 ಜೊತೆ ಕನೆಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ “ಬಿ” ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್ ಅಡ್ಡ ಹಲಗೆ: ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: […]
ಜನರ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ : ನಾಳೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ಈ ಜನತಾ ದರ್ಶನ ನಡೆಸಲಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯ ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.ನಾಳೆ (ಸೋಮವಾರ) ಸಿಎಂ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. ಬೆಳಗ್ಗೆ 9.30ಕ್ಕೆ ಜನಸ್ಪಂದನ ಕಾರ್ಯಕ್ರಮ ಆರಂಭವಾಗಲಿದೆ. […]