ಕೆಯುಡಿ : ವಿವಿ ಘಟಿಕೋತ್ಸವ ಡಿ.ಕೆ.ಶಿವಕುಮಾರ್ ಹೆಸರಲ್ಲಿ ಚಿನ್ನದ ಪದಕ ಪ್ರದಾನ

ಧಾರವಾಡ: ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೆಸರಲ್ಲಿ ಇದೇ ಮೊದಲ ಬಾರಿಗೆ ಚಿನ್ನದ ಪದಕ ನೀಡಲಾಯಿತು.ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವ ಸೋಮವಾರ ಇಲ್ಲಿನ ಗಾಂಧಿ ಭವನದಲ್ಲಿ ನಡೆಯಿತು. ಘಟಿಕೋತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೆಸರಿನಲ್ಲಿ ಒಂದು ಚಿನ್ನದ ಪದಕ ಪ್ರದಾನ ಮಾಡಲಾಯಿತು. ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಈ ವರ್ಷದಿಂದ ಚಿನ್ನದ ಪದಕ ದತ್ತಿ ಇಡಲಾಗಿದೆ.ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ 73ನೇ ಘಟಿಕೋತ್ಸವ ಇಂದು ನಡೆಯಿತು. ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ […]

CWRC : ಮತ್ತೆ 15 ದಿನ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡುವಂತೆ ಶಿಫಾರಸ್ಸು

ನವದೆಹಲಿ/ಬೆಂಗಳೂರು: ಈ ಹಿಂದೆ ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ತಿಳಿಸಿತ್ತು. ಅಕ್ಟೋಬರ್ 16ರಿಂದ ಅಕ್ಟೋಬರ್ 31ರ ವರೆಗೆ​​ ನೀರು ಹರಿಸುವಂತೆ ತಿಳಿಸಲಾಗಿತ್ತು.ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಆಘಾತ ಎದುರಾಗಿದೆ. ನವೆಂಬರ್​ 1 ರಿಂದ 15 ರವರೆಗೆ ಪ್ರತಿದಿನ 2,600 ಕ್ಯೂಸೆಕ್​ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.ನವೆಂಬರ್ 1ರಿಂದ ನವೆಂಬರ್ 15ರ ವರೆಗೆ ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು […]

ಸಚಿವ ಮಧು ಬಂಗಾರಪ್ಪ : ಆಪರೇಷನ್ ಕಮಲ ರಾಜ್ಯದಲ್ಲಿ ಸಂಪೂರ್ಣ ವಿಫಲವಾಗಲಿದೆ

ಶಿವಮೊಗ್ಗ: ಈಗಾಗಲೇ ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಕುರಿತು ಬಹಿರಂಗವಾಗಿದೆ.ರಾಜ್ಯದಲ್ಲಿ ಬಿಜೆಪಿಯವರು ನಡೆಸಲು ಹೊರಟಿರುವ ಆರಪೇಷನ್ ಕಮಲ ಯಶಸ್ವಿಯಾಗುವುದಿಲ್ಲ, ಸಂಪೂರ್ಣ ವಿಫಲವಾಗಲಿದೆ ಎಂದು ಶಿವಮೊಗ್ಗ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿಗರು ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಯತ್ನ ಮಾಡಬೇಡಿ. ಈಗಾಗಲೇ ಬಿಜೆಪಿಯವರು ಆಪರೇಷನ್ ಕಮಲ ನಡೆಸುತ್ತಿರುವ ಕುರಿತು ಬಹಿರಂಗವಾಗಿದೆ. ಹಾಗಿರುವಾಗ ಖಂಡಿತವಾಗಿಯೂ ಅವರ ಆಪರೇಷನ್ ಕಮಲ ವಿಫಲವಾಗಲಿದೆ. ಈ ರೀತಿ […]

ನೈಸರ್ಗಿಕವಾಗಿ ಉದುರಿದ ನವಿಲುಗರಿ ಸಂಗ್ರಹಣೆ ಕಾನೂನು ಬಾಹಿರವಲ್ಲ: ಈಶ್ವರ್ ಖಂಡ್ರೆ

ಬೆಂಗಳೂರು: ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ನವಿಲು ಗರಿಗೆ ವಿನಾಯಿತಿ ಇದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ನವಿಲು ಗರಿಯಿಂದ ತಯಾರಿಸಿದ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಲು ನಿಷೇಧವಿದೆ. ಆದರೆ ನವಿಲುಗಳಿಗೆ ಹಿಂಸೆ ನೀಡದೇ ಉದುರಿಬಿದ್ದ ಗರಿಗಳನ್ನು ಸಂಗ್ರಹಿಸಿ ದೇಶದೊಳಗೆ ಮಾರಾಟ ಮಾಡುವುದು ಕಾನೂನು ಬಾಹಿರವಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕೇವಲ ಹಿಂದೂ ಸಮಾಜದ ನಂಬಿಕೆಗಳನ್ನು ಗುರಿಯಾಗಿಸಿಕೊಂಡು ಕಾನೂನು ಕ್ರಮ ಜರುಗಿಸುವುದು ಸರಿಯಾದ ಕ್ರಮವಲ್ಲ, ದರ್ಗಾಗಳಲ್ಲಿ ನವಿಲುಗರಿ ಇಡುವ ಬಗ್ಗೆಯೂ ತನಿಖೆ […]

ಸಹಕಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ : ಕೇಂದ್ರ ಸರ್ಕಾರದ ವಿರುದ್ಧ ‘ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ’ ಅಭಿಯಾನ

ಬೆಂಗಳೂರು: ಇಂದಿನಿಂದ ಸಾಮಾಜಿಕ ಜಾಲತಾಣದಲ್ಲಿ ನಡೆಸಲಾಗುವ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂಬ ಅಭಿಯಾನದ ಯಶಸ್ಸಿಗೆ ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ನಮ್ಮ ನಾಡು ಕರ್ನಾಟಕ ಎಂದು ಮರುನಾಮಕರಣಗೊಂಡು 50 ವಸಂತಗಳು ತುಂಬುತ್ತಿರುವ ಹೊತ್ತಿನಲ್ಲಿ ಕರ್ನಾಟಕವು ಸಾಗಿಬಂದ ಹಾದಿಯನ್ನು ಸ್ಮರಿಸಿಕೊಳ್ಳಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾಗಿರುವ ಅನುದಾನ, ತೆರಿಗೆಯಲ್ಲಿ ಪಾಲು, ಬರ ಮತ್ತು ಜಿಎಸ್‌ಟಿ ಪರಿಹಾರ ಪೂರ್ಣಪ್ರಮಾಣದಲ್ಲಿ ಬಂದಿಲ್ಲ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳು ಮತ್ತು ಐಬಿಪಿಎಸ್‌ ನೇಮಕಾತಿಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಎದುರಿಸಲು ಅವಕಾಶ ನೀಡದೆ […]