“ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ, ಅಳಬೇಡಿ” ಡೆತ್ ನೋಟ್ ಬರೆದಿಟ್ಟು 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ.!

ಆತ್ಮಹತ್ಯೆಗೆ ಶರಣಾದ ಬಾಲಕ 7ನೇ ತರಗತಿ ವಿದ್ಯಾರ್ಥಿ ಗಾಂಧಾರ್(13). ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಂಧಾರ್ನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ತಾಯಿ ಸವಿತಾ ಖ್ಯಾತ ಜಾನಪದ ಗಾಯಕಿಯಾಗಿದ್ದಾರೆ. ಸವಿತಾ ಅವರು ಕಳೆದ ಶುಕ್ರವಾರ ಜಾನಪದ ಕಾರ್ಯಕ್ರಮದ ಹಿನ್ನಲೆ ಆಸ್ಟ್ರೇಲಿಯಾಗೆ ಹೋಗಿದ್ದರು. ಇದೀಗ ತಾಯಿ ವಾಪಸ್ ಆಗಬೇಕಿದೆ. ಇನ್ನೂ ತಾಯಿ ಬೆಂಗಳೂರಿಗೆ ಬರುವ ತನಕ ಮರಣೋತ್ತರ ಪರೀಕ್ಷೆ ನಡೆಸದೇ ಇರುವಂತೆ ತೀರ್ಮಾನ ಕೈಗೊಳ್ಳಲಾಗಿದೆ. […]
ಭಾರತದ ಮೇಲೆ ಟ್ರಂಪ್ ಶೇ.25 ಸುಂಕ; ವಿವಿಧ ದೇಶಗಳಿಗೆ ವಿಧಿಸಿದ ಸುಂಕಗಳ ಪಟ್ಟಿ ಹೀಗಿದೆ.!

ಸುಮಾರು 70ಕ್ಕೂ ಹೆಚ್ಚು ದೇಶಗಳ ಮೇಲೆ ಶೇ.10 ರಿಂದ ಶೇ.41 ರವರೆಗಿನ ಪಾರಸ್ಪರಿಕ ತೆರಿಗೆ (ರೆಸಿಪ್ರೋಕಲ್ ಟ್ಯಾಕ್ಸ್) ಗಳನ್ನು ವಿಧಿಸುವ ಹೊಸ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ (ಜುಲೈ 31) ಸಹಿ ಹಾಕಿದರು. ಇದರಲ್ಲಿ ಭಾರತೀಯ ಆಮದುಗಳು 25% ಸುಂಕವನ್ನು ಎದುರಿಸಬೇಕಾಗುತ್ತದೆ. ಅಕ್ರಮ ಮಾದಕವಸ್ತು ಬಿಕ್ಕಟ್ಟಿನ ಮೇಲೆ ಕ್ರಮ ಕೈಗೊಳ್ಳಲು ಕೆನಡಾ ಸಂಪೂರ್ಣ ವಿಫಲವಾಗಿದೆ ಮತ್ತು ಯುನೈಟೆಡ್ ಸ್ಟೇಟ್ಸ್ ವಿರುದ್ಧ ಪ್ರತೀಕಾರವಾಗಿ ಅಲ್ಲಿನ ಆಡಳಿತವು ನಡೆದುಕೊಳ್ಳುತ್ತಿರುವುದರಿಂದ ಅದಕ್ಕೆ ಪ್ರತಿಯಾಗಿ ಕೆನಡಾದ ಮೇಲಿನ ಸುಂಕವನ್ನು […]
ಧರ್ಮಸ್ಥಳ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಕಚೇರಿ ಕಾರ್ಯಾರಂಭ: ಮಾಹಿತಿ ನೀಡುವವರಿಗೆ ಸಹಾಯವಾಣಿ

ಮಂಗಳೂರು: ರಾಷ್ಟ್ರಾದ್ಯಂತ ಸುದ್ದಿಯಲ್ಲಿರುವ ಧರ್ಮಸ್ಥಳದಲ್ಲಿ ಹೆಣ ಹೂಳಲಾಗಿದೆ ಎನ್ನಲಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಎಸ್ ಐಟಿ ತಂಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 39/2025ಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರದಲ್ಲಿ ಕಚೇರಿ ಆರಂಭಿಸಿದೆ. ಈ ಪ್ರಕರಣದ ಬಗ್ಗೆ ಎಸ್ಐಟಿಯನ್ನು ಸಂಪರ್ಕಿಸಲು ಅಥವಾ ಮಾಹಿತಿ ನೀಡಲು ಸಹಾಯವಾಣಿಯನ್ನೂ ಆರಂಭಿಸಲಾಗಿದೆ. ಎಸ್ಐಟಿ ಕಚೇರಿ ವಿಳಾಸ: ನಿರೀಕ್ಷಣಾ ಮಂದಿರ, ಮಲ್ಲಿಕಟ್ಟೆ, ಕದ್ರಿ, ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ (ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ). ದೂರವಾಣಿ ಸಂಖ್ಯೆ: 0824–2005301 […]
ಧರ್ಮಸ್ಥಳದ ಬುರುಡೆ ಕೇಸ್ ಗೆ ಸಿಕ್ಕಿತು ಮಹತ್ವದ ತಿರುವು: ಸ್ಥಳದಲ್ಲಿ ಸಿಕ್ತು ಕೆಂಪು ರವಿಕೆ, ಪ್ಯಾನ್ ಕಾರ್ಡ್

ಧರ್ಮಸ್ಥಳ: ಇಲ್ಲಿ ಎಸ್ ಐ ಟಿ ನಡೆಸುತ್ತಿರುವ ಉತ್ಖನನದ ವೇಳೆ ಅಗೆಯಲಾಗಿದ್ದ ಗುಂಡಿಯಲ್ಲಿ ಮಹತ್ವದ ವಸ್ತು ಸಿಕ್ಕಿದೆ. ಎಸ್ಐಟಿ ಅಧಿಕಾರಿಗಳಿಗೆ ಮಣ್ಣು ಅಗೆಯುವಾಗ ಕೆಂಪು ರವಿಕೆ, ಒಂದು ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್ ಸಿಕ್ಕಿದೆ. ಈ ವಸ್ತುಗಳು ತನಿಖೆಯ ಕುತೂಹಲಕ್ಕೆ ಕಾರಣವಾಗಿದ್ದು ಇದೀಗ ಎಸ್ ಐಟಿ ತಂಡ ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆದುಕೊಂಡಿದೆ. ಧರ್ಮಸ್ಥಳದ ನೇತ್ರಾವತಿ ತಟದಲ್ಲಿ 1, 2,3 ನೇ ಪಾಯಿಂಟ್ನಲ್ಲಿ ಮಣ್ಣು ಅಗೆಯಲಾಗಿತ್ತು. 1, 2,3ನೇ ಪಾಯಿಂಟ್ನಲ್ಲಿ ಏನೂ ಸಿಕ್ಕಿರಲಿಲ್ಲ. ಆದ್ರೆ, ಇದೀಗ ಮಣ್ಣು […]
ಧರ್ಮಸ್ಥಳ ಪ್ರಕರಣ: ಗುರುತಿಸಿದ ಸ್ಥಳ ಅಗೆಯುವ ಪ್ರಕ್ರಿಯೆ ಆರಂಭ; ಬಿಗಿ ಪೊಲೀಸ್ ಭದ್ರತೆ.

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳನ್ನು ಹೊರ ತೆಗೆಯವ ಕಾರ್ಯ ಮಂಗಳವಾರ ಬಿಗು ಪೊಲೀಸ್ ಭದ್ರತೆಯೊಂದಿಗೆ ಆರಂಭವಾಯಿತು. ಧರ್ಮಸ್ಥಳದ ಸ್ನಾನ ಘಟ್ಟದ ಸಮೀಪದ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಜಾಗವನ್ನು ಏಳೆಂಟು ಕಾರ್ಮಿಕರು ಜೋರು ಮಳೆಯ ನಡುವೆಯೇ ಅಗೆಯುತ್ತಿದ್ದಾರೆ. ಈ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ ವ್ಯಕ್ತಿಯೂ ಮುಸುಕು ಧರಿಸಿ ಸ್ಥಳದಲ್ಲಿ ಹಾಜರಿದ್ದರು. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ […]