ತಿಂಗಳಿಗೆ ಶೇ.40 ಲಾಭ ಬರುತ್ತೆ ಎಂದು ಆಸೆ ತೋರಿಸಿ ₹2 ಕೋಟಿ ಪಂಗನಾಮ ಹಾಕಿದ! ಎಚ್ಚರ, ಆನ್ ಲೈನ್ ಟ್ರೇಡಿಂಗ್ ಹೆಸರಲ್ಲಿ ನೀವೂ ಹೀಗೆ ಮೋಸ ಹೋಗದಿರಿ!

ಮೈಸೂರು: “ಕುಳಿತಲ್ಲೇ ಲಕ್ಷಾಂತರ ರೂಪಾಯಿ ಸಂಪಾದನೆ”, “ತಿಂಗಳಿಗೆ 40% ಲಾಭ” ಎಂಬ ಆಕರ್ಷಕ ಭರವಸೆಗಳಿಗೆ ಮರುಳಾಗಿ ಮೈಸೂರಿನ ಉದ್ಯಮಿಯೊಬ್ಬರು ಕೋಟ್ಯಂತರ ರೂಪಾಯಿ ಕಳೆದುಕೊಂಡಿರುವ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜಾರ್ಖಂಡ್ ಮೂಲದ ವ್ಯಕ್ತಿಯೊಬ್ಬನ ಮೋಸದ ಜಾಲಕ್ಕೆ ಸಿಲುಕಿದ ಉದ್ಯಮಿ ಹಾಗೂ ಅವರ ಸ್ನೇಹಿತರು ಒಟ್ಟು ₹2 ಕೋಟಿ ಕಳೆದುಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ಜೆ.ಪಿ. ನಗರದ ಉದ್ಯಮಿಗೆ 2025ರ ಜುಲೈನಲ್ಲಿ ಜಾರ್ಖಂಡ್ ಮೂಲದ ಗೌರವ್ ಸಿಂಗ್ ರಾಥೋಡ್ ಎಂಬಾತ ಪರಿಚಯವಾಗಿದ್ದ. ಹೂಡಿಕೆ ಮಾಡಿದ ಮೂಲಧನ ಸುರಕ್ಷಿತವಾಗಿದ್ದು, ಪ್ರತಿ ತಿಂಗಳು […]
ನಾಳೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ, ಮನೆಮನೆಗೆ ಬರ್ತಾರೆ ಬಿಎಲ್ಒ ಅಧಿಕಾರಿಗಳು,ಈ ದಾಖಲೆಗಳು ನಿಮ್ಮ ಬಳಿ ಇರಲೇಬೇಕು!

ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಈ ಅವಧಿಯಲ್ಲಿ ಬಿಎಲ್ಒಗಳು ಮತದಾರರಿಗೆ ಎಸ್ಐಆರ್ ಅರ್ಜಿಯನ್ನು ವಿತರಿಸಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಹಾಕಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಿದೆ. ಈ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ […]
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ, ಬಸ್ಪಾಸ್ ಶುಲ್ಕ ಮರುಪಾವತಿ; ಜೂನ್ 29ರಿಂದ ಅರ್ಜಿ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ಯೋಜನೆ ಜಾರಿಗೆ ತಂದಿರುವ ಬೆನ್ನಲ್ಲೇ, ಈಗಾಗಲೇ ಬಸ್ಪಾಸ್ಗಾಗಿ ಶುಲ್ಕ ಪಾವತಿಸಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಿದ್ಯಾರ್ಥಿಗಳಿಂದ ವಸೂಲಿಯಾಗಿರುವ ಬಸ್ಪಾಸ್ ಶುಲ್ಕವನ್ನು ಮರುಪಾವತಿ ಮಾಡಲು ನಾಲ್ಕು ರಾಜ್ಯ ಸಾರಿಗೆ ನಿಗಮಗಳಿಗೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ನಿರ್ದೇಶನದಂತೆ, ಈಗಾಗಲೇ ನಿಯಮಾನುಸಾರ ಶುಲ್ಕ ಪಾವತಿಸಿ ಬಸ್ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ಹಿಂದಿರುಗಿಸಲಾಗುತ್ತದೆ. ಈ ಮರುಪಾವತಿ ಪ್ರಕ್ರಿಯೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ಬೆಂಗಳೂರು ಮಹಾನಗರ […]
ಪೋಷಕರೇ ಮಕ್ಕಳಿಂದ ಎಲ್ ಇ ಡಿ ಬಲ್ಬ್ ದೂರವಿರಿಸಿ: ಆಟವಾಡುತ್ತಿದ್ದಾಗ ಎಲ್ಇಡಿ ಬಲ್ಬ್ ನುಂಗಿದ 8 ತಿಂಗಳ ಮಗು!

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಎಂಟು ತಿಂಗಳ ಮಗು ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಎಲ್ಇಡಿ ಬಲ್ಬ್ ನುಂಗಿದ ಘಟನೆ ನಡೆದಿದ್ದು, ಪೋಷಕರ ಸಮಯೋಚಿತ ನಿರ್ಧಾರ ಮತ್ತು ವೈದ್ಯರ ತ್ವರಿತ ಚಿಕಿತ್ಸೆಯಿಂದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಮಾಹಿತಿಯ ಪ್ರಕಾರ, ಮನೆಯಲ್ಲೇ ಆಟವಾಡುತ್ತಿದ್ದ ವೇಳೆ ಮಗು ಸಣ್ಣ ಗಾತ್ರದ ಎಲ್ಇಡಿ ಬಲ್ಬ್ ಅನ್ನು ಬಾಯಿಗೆ ಹಾಕಿಕೊಂಡು ನುಂಗಿದೆ. ಬಳಿಕ ಮಗು ನಿರಂತರವಾಗಿ ಅಳಲಾರಂಭಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಮಗುವಿನ ಆರೋಗ್ಯ ಪರೀಕ್ಷಿಸಿ ಎಕ್ಸ್-ರೇ […]
ಇನ್ನು ಶನಿವಾರ ಮಧ್ಯಾಹ್ನ 12.30ರವರೆಗೆ ಮಾತ್ರ ಕ್ಲಾಸ್, ಶಿಕ್ಷಣ ಇಲಾಖೆ ಘೋಷಿಸಿತು ಹೊಸ ವೇಳಾಪಟ್ಟಿ

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ನು ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶನಿವಾರದ ಶಾಲಾ ಅವಧಿಗೆ ಏಕರೂಪದ ವೇಳಾಪಟ್ಟಿಯನ್ನು ಜಾರಿಗೊಳಿಸಿದೆ. ಹೊಸ ಆದೇಶದಂತೆ, ಇನ್ನು ಮುಂದೆ ಪ್ರತಿ ಶನಿವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಾತ್ರ ತರಗತಿಗಳು ನಡೆಯಲಿವೆ. ಈವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಸಮಯದಲ್ಲಿ ವ್ಯತ್ಯಾಸವಿದ್ದು, ಕೆಲವು ಶಾಲೆಗಳಲ್ಲಿ ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ, ಇನ್ನೂ ಕೆಲವು ಶಾಲೆಗಳಲ್ಲಿ ಬೆಳಿಗ್ಗೆ 7.30ರಿಂದ 11.30ರವರೆಗೆ […]