ಶಾಲಾ ಆರಂಭಕ್ಕೆ ದಿನಗಣನೆ, ಸರಕಾರದಿಂದ ಬಂದ Update ಗಳೇನು?

ಬೆಂಗಳೂರು : ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲು ದಿನಗಣನೆ ಆರಂಭವಾಗಿರುವ ನಡುವೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈ ವರ್ಷದಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಡಿಜಿಟಲ್ ಹಾಜರಿ ಕಡ್ಡಾಯಗೊಳಿಸಲಾಗಿದೆ. ಜೊತೆಗೆ ಶಾಲಾ ಸುರಕ್ಷತೆ, ಸ್ವಚ್ಛತೆ ಮತ್ತು ದ್ವಿಭಾಷಾ ಬೋಧನಾ ಪದ್ಧತಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡಗಳ ಸುರಕ್ಷತೆಯನ್ನು ಪರಿಶೀಲಿಸಲು ಇಲಾಖೆ ಸೂಚಿಸಿದೆ. ಶಿಥಿಲಗೊಂಡಿರುವ ಕಟ್ಟಡಗಳು, ಶೌಚಾಲಯಗಳು ಹಾಗೂ ಅಡುಗೆ […]
ಕೊಲ್ಲಂ: ರಸ್ತೆ ಬದಿ ಲಾಟರಿ ಮಾರುತ್ತಿದ್ದವನಿಗೇ ಹೊಡೆಯಿತು 12 ಕೋಟಿಯ ಬಂಪರ್ ಜಾಕ್ಪಾಟ್..!

ವರ್ಷಗಳಿಂದ ರಸ್ತೆ ಬದಿಯಲ್ಲಿ ಲಾಟರಿ ಟಿಕೆಟ್ ಮಾರುತ್ತಾ ಜೀವನದ ಬಂಡಿ ಸಾಗಿಸುತ್ತಿದ್ದ ಕೇರಳದ ಕೊಲ್ಲಂ ನಿವಾಸಿ ಪೊನ್ನನ್ ಅವರಿಗೆ. ಈ ಬಾರಿಯ ಪ್ರತಿಷ್ಠಿತ ‘ವಿಷು ಬಂಪರ್ ಲಾಟರಿಯಲ್ಲಿ ಬರೋಬ್ಬರಿ 12 ಕೋಟಿ ರೂಪಾಯಿಗಳ ಬಂಪರ್ ಬಹುಮಾನ ಒಲಿದಿದೆ. ಕೇರಳ: ಕಾಲಚಕ್ರ ಉರುಳಿದರೆ ಬಡವನೂ ಬಲ್ಲಿದನಾಗಬಹುದು ಎಂಬ ಮಾತಿಗೆ ಕೇರಳದ ಕೊಲ್ಲಂ ನಿವಾಸಿ, ಲಾಟರಿ ವ್ಯಾಪಾರಿ ಪೊನ್ನನ್ ಅವರೇ ಸಾಕ್ಷಿ. ವರ್ಷಗಳಿಂದ ರಸ್ತೆ ಬದಿಯಲ್ಲಿ ಲಾಟರಿ ಟಿಕೆಟ್ ಮಾರುತ್ತಾ ಜೀವನದ ಬಂಡಿ ಸಾಗಿಸುತ್ತಿದ್ದ ಪೊನ್ನನ್ ಅವರಿಗೆ, ಈ ಬಾರಿಯ […]
“ಭಟ್ಕಳ ಮೂರಿನಕಟ್ಟೆ ವಿವಾದ: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ”

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೂರಿನಕಟ್ಟೆ ಮರುನಿರ್ಮಾಣ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ. ಮೇ 25ರಿಂದ 27ರವರೆಗೆ ಭಟ್ಕಳ ಪಟ್ಟಣ ಮತ್ತು ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಐದು ಮಂದಿ ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಿ ಭಟ್ಕಳ ಎಸಿ ಆದೇಶ ಹೊರಡಿಸಿದ್ದಾರೆ.ನಗರದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವುದರಿಂದ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಪ್ರಮುಖ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಘಟನಾ ಸ್ಥಳಕ್ಕೆ […]
ವೃದ್ದೆಯೊಬ್ಬರಿಗೆ ಡಿಜಿಟೆಲ್ ಅರೆಸ್ಟ್ ಮಾಡಿ 4 ಕೋಟಿ ದೋಚಿದ ಸೈಬರ್ ಕಳ್ಳರು, ರಾಜ್ಯದಲ್ಲೇ ಇದು ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ

ಬೆಂಗಳೂರು: ಮನಿ ಲಾಂಡರಿಂಗ್ ಹೆಸರಿನಲ್ಲಿ “ಡಿಜಿಟಲ್ ಅರೆಸ್ಟ್” ಮಾಡಿ ಸೈಬರ್ ಖದೀಮರು ವೃದ್ಧೆಯೊಬ್ಬರಿಂದ ಬರೋಬ್ಬರಿ 4 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇದು ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳಲ್ಲಿ ಒಂದಾಗಿದೆ. ಶಿವಾಜಿನಗರ ನಿವಾಸಿ ಲಕ್ಷ್ಮೀ ರಾಮಮೂರ್ತಿ ಎಂಬ ವೃದ್ಧೆಯೇ ವಂಚನೆಗೆ ಒಳಗಾದವರು. ಅವರು ಪ್ರಾಪರ್ಟಿ ಮಾರಾಟದಿಂದ ಪಡೆದಿದ್ದ ಕೋಟ್ಯಂತರ ರೂಪಾಯಿ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದರು. ಈ ಬ್ಯಾಂಕ್ ವ್ಯವಹಾರಗಳ ಮಾಹಿತಿ ತಿಳಿದುಕೊಂಡ ಸೈಬರ್ ವಂಚಕರು ಕಳೆದ ಜನವರಿಯಿಂದ ಮೇ […]
ಮುಂದಿನ ತಿಂಗಳು ಮಂಗಳೂರು–ಬೆಂಗಳೂರು ವಂದೇ ಭಾರತ್ ಲಾಂಚ್, ಮಂಗಳೂರಿಗೆ ಸಿಗಲಿದೆ ಇನ್ನೊಂದಷ್ಟು ರೈಲ್ವೇ ಯೋಜನೆಗಳು

ಮಂಗಳೂರು–ಬೆಂಗಳೂರು ನಡುವೆ ಬಹುನಿರೀಕ್ಷಿತ ವಂದೇ ಭಾರತ್ ರೈಲು Vande Bharat Express ರೈಲು ಸೇವೆ ಮುಂದಿನ ತಿಂಗಳಲ್ಲಿ ಆರಂಭವಾಗುವ ಸಾಧ್ಯತೆ ಇದೆ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಮಂಗಳೂರು–ಬೆಂಗಳೂರು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದೆ. ಪ್ರಧಾನಿ ಅವರು ದೇಶದ ವಿವಿಧ ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದು, ಆ ಪಟ್ಟಿಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗವೂ ಸೇರಿದೆ. ಈ ರೈಲು ಸೇವೆಯಿಂದ ಕರಾವಳಿ ಭಾಗದ ಜನರು, ಐಟಿ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಿಗಳಿಗೆ ವೇಗವಾದ ಮತ್ತು […]