ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ.

ಉಡುಪಿ: ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ. ರಸಗೊಬ್ಬರ ಕೊರತೆಗೆ ಮೂಲ ಕಾರಣ: ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ […]
ಅಗರಬತ್ತಿ ಹೊಗೆಯಲ್ಲಿದೆ, ಸಿಗರೇಟ್ ಹೊಗೆಗಿಂತಲೂ ಮಾರಕವಾದ ಅಂಶ: ಅಗರಬತ್ತಿ ಹೊಗೆ ಭಾರೀ ಅಪಾಯಕಾರಿ! ಅಧ್ಯಯನ ಬಿಚ್ಚಿಟ್ಟ ಭಯಾನಕ ಸತ್ಯ!

ಧಾರ್ಮಿಕ ಕಾರ್ಯಕ್ರಮಗಳಿಗೆ ಅಗರಬತ್ತಿಗಳನ್ನು ಬಳಸೋದು ಎಲ್ಲೆಡೆ ಮಾಮೂಲು. ಕೆಲವರು ಮನೆ ಮನಸ್ಸು ಪರಿಮಳವಾಗಿರಲಿ ಎನ್ನುವ ಕಾರಣಕ್ಕೂ ಊದುಬತ್ತಿಗಳನ್ನು ಹಚ್ಚಿಡುತ್ತಾರೆ. ಆದರೆ ಊದುಬತ್ತಿಯ ಹೊಗೆಯ ಬಗ್ಗೆ ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದ್ದು ಇದರಲ್ಲಿ ಊದುಬತ್ತಿ ಆರೋಗ್ಯದ ಮೇಲೆ ಗಂಭೀರಾದ ಪರಿಣಾಮ ಬೀರುತ್ತೆ ಎನ್ನುವ ಬಗ್ಗೆ ವೈಜ್ಞಾನಿಕ ಅಂಶ ಸಾಬೀತಾಗಿದೆ. ಹೌದು. ದಕ್ಷಿಣ ಚೀನಾದ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಈ ಅಧ್ಯಯನವು, ಅಗರಬತ್ತಿಯ ಹೊಗೆಯು ಸಿಗರೇಟ್ ಧೂಮಕ್ಕಿಂತಲೂ ಹೆಚ್ಚು ವಿಷಕಾರಿ ಎನ್ನುವ ಆತಂಕಕಾರಿ ಮಾಹಿತಿ ದೊರೆತಿದೆ. ಅಂತದ್ದೇನಿದೆ ಅಗರಬತ್ತಿಯಲ್ಲಿ? ಅಗರಬತ್ತಿ ಹೊಗೆಯಲ್ಲಿ […]
ಅಮೆರಿಕದ ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ.

ಮಂಗಳೂರು: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ ಆಶ್ರಯದಲ್ಲಿ ಅಮೆರಿಕದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ನೇತೃತ್ವದಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಶಾಸಕರುಗಳ ಸಮ್ಮೇಳನದಲ್ಲಿ ಭಾಗಿಯಾಗಲು ಹಿರಿಯ ರಾಜಕಾರಣಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು, ಅದರಲ್ಲಿ ಭಂಡಾರಿ ಓರ್ವರಾಗಿರುತ್ತಾರೆ. ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ ಸಭೆಗಳಿಗೆ […]
“ದೃಶ್ಯಂ” ಸಿನಿಮಾ ಮಾದರಿಯಲ್ಲಿ ಪತಿಯನ್ನು ಕೊಂದು ಮನೆಯಲ್ಲೇ ಹೂತು ಹಾಕಿದ ಪತ್ನಿ.!

ಮುಂಬೈ: ಪ್ರಿಯಕರನ ಸಹಾಯದಿಂದ ಮಹಿಳೆಯೊಬ್ಬಳು ತನ್ನ ಗಂಡನನ್ನು ಕೊಂದು ಮನೆಯೊಳಗೆ ಗುಂಡಿ ತೋಡಿ ಹೂತು ಹಾಕಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಲಸೋಪರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ವಿಜಯ್ ಚವಾಣ್(40) . ಆತನ ಪತ್ನಿ ಚಮನ್ ಚವಾಣ್ ಮತ್ತು ಪ್ರಿಯಕರ ಮೋನು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರ ಹೇಳಿಕೆ ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ. ಟೈಲ್ಸ್ ಒಳಗೆ ಮೃತ ದೇಹ ಪತ್ತೆ:ಕಳೆದ 15 ದಿನಗಳಿಂದ ವಿಜಯ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ ಅವರ ಸಹೋದರ, ಸೋಮವಾರ ಬೆಳಿಗ್ಗೆ ನೇರವಾಗಿ […]
ಧರ್ಮಸ್ಥಳ ಪ್ರಕರಣ ಎಸ್ಐಟಿಗೆ ಹಸ್ತಾಂತರ: ರಾಜ್ಯ ಸರಕಾರದ ನಿಲುವು ಉತ್ತಮವಾಗಿದೆ; ಕ್ಷೇತ್ರದ ವಕ್ತಾರ ಪಾರ್ಶ್ವನಾಥ್ ಜೈನ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣದ ತನಿಖೆಯನ್ನು ಎಸ್ಐಟಿಗೆ ಹಸ್ತಾಂತರಿಸಿರುವ ರಾಜ್ಯ ಸರಕಾರದ ನಿಲುವು ಉತ್ತಮವಾಗಿದೆ ಎಂದು ಕ್ಷೇತ್ರ ಧರ್ಮಸ್ಥಳದ ವಕ್ತಾರರಾದ ಕೆ. ಪಾರ್ಶ್ವನಾಥ್ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ವಿಚಾರ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕ ವಾರ್ತೆಗಳು, ಊಹಾ ಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿವೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು […]