ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಒಳ್ಳೆ ಸುದ್ದಿ:72,186 ಹುದ್ದೆಗಳ ಭರ್ತಿಗೆ ರಾಜ್ಯ ಸರಕಾರ ಅನುಮೋದನೆ

ಬೆಂಗಳೂರು: ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಲು ಮಹತ್ವದ ಕ್ರಮ ಕೈಗೊಂಡಿದ್ದು, ಒಟ್ಟು 72,186 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದೆ. 2023-24ನೇ ಸಾಲಿನಿಂದ ಇದುವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯು ಸಹಮತಿ ನೀಡಿದೆ. ಜೊತೆಗೆ, ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇ.80ರಷ್ಟು ಹುದ್ದೆಗಳ ಭರ್ತಿಗೂ ಅನುಮೋದನೆ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಆಯ್ಕೆ ಪ್ರಾಧಿಕಾರಗಳಿಂದ […]
ಗೃಹಲಕ್ಷ್ಮಿ ಯೋಜನೆ: ₹225 ಕೋಟಿ ಅಕ್ರಮ, ವಿವರಣೆ ಕೇಳಿದ ಸಿಎಜಿ.

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆ ಜಾರಿಯಾದ ಮೊದಲ ಎರಡು ವರ್ಷದಲ್ಲೇ ₹225 ಕೋಟಿಯಷ್ಟು ಅಕ್ರಮ ನಡೆದಿದೆ ಎಂದು ಮಹಾಲೇಖಪಾಲರು (ಸಿಎಜಿ) ಲೆಕ್ಕಪರಿಶೋಧನೆ ವೇಳೆ ಗುರುತಿಸಿದ್ದಾರೆ.
ನಾಯಿಗಳ ಮೇಲಿನ ಕ್ರೌರ್ಯ ಸಹಿಸುವುದಿಲ್ಲ: ಕರ್ನಾಟಕ ಹೈಕೋರ್ಟ್ ಸ್ಪಷ್ಟ ಸಂದೇಶ

ಬೆಂಗಳೂರು: ಪ್ರಾಣಿಗಳಿಗೂ ಹಿಂಸೆಯಿಲ್ಲದೆ ಬದುಕುವ ಹಕ್ಕಿದೆ ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್ Karnataka High Court, ಕ್ರೌರ್ಯ ಮತ್ತು ಲೈಂಗಿಕ ದುರ್ಬಳಕೆಯ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ 9 ನಾಯಿಗಳ ಕಸ್ಟಡಿಯನ್ನು ಮರಳಿ ನೀಡಬಾರದು ಎಂದು ಆದೇಶಿಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ M. Nagaprasanna ಅವರಿದ್ದ ಪೀಠ, ನಾಯಿಗಳನ್ನು ಮಾಲೀಕನಿಗೆ ಹಿಂತಿರುಗಿಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು “ಆಘಾತಕಾರಿ” ಎಂದು ಕಟುವಾಗಿ ಟೀಕಿಸಿದೆ. ಬೆಂಗಳೂರಿನ ನಾಗಸಂದ್ರ ನಿವಾಸಿ ಕೆ.ಇ. ರಮೇಶ್ ಅವರ ಬಳಿ ವಿವಿಧ ತಳಿಯ […]
ಒಂದು ವರ್ಷದ ಜಾಮೀನು ನಿರ್ಬಂಧ ಸಡಿಲಿಕೆಗೆ ದರ್ಶನ್ ಮೊರೆ; ಮತ್ತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಒಂದು ವರ್ಷದವರೆಗೆ ಜಾಮೀನು ಕೋರಿ ಅರ್ಜಿ ಸಲ್ಲಿಸದಂತೆ ನೀಡಲಾಗಿರುವ ಆದೇಶವನ್ನು ಪರಿಷ್ಕರಿಸುವಂತೆ ಅವರು ಮನವಿ ಸಲ್ಲಿಸಿದ್ದಾರೆ. ಬದಲಾದ ವಕೀಲರ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ, ವೈಯಕ್ತಿಕ ಸ್ವಾತಂತ್ರ್ಯ ಮತ್ತು ತ್ವರಿತ ವಿಚಾರಣೆಯ ಹಕ್ಕು ಭಾರತೀಯ ಸಂವಿಧಾನದ ಆರ್ಟಿಕಲ್ 21ರ ಅಡಿಯಲ್ಲಿ ರಕ್ಷಿಸಲ್ಪಟ್ಟ ಮೂಲಭೂತ ಹಕ್ಕುಗಳಾಗಿವೆ ಎಂದು ಉಲ್ಲೇಖಿಸಲಾಗಿದೆ. ತುರ್ತು ಪರಿಸ್ಥಿತಿಗಳಿಗೆ ಅನ್ವಯವಾಗುವಂತೆ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಬೇಕು ಎಂದು ಅವರು ಕೋರಿದ್ದಾರೆ. […]
AI ಅಬ್ಬರಕ್ಕೆ 21 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಒರಾಕಲ್!

ನವದೆಹಲಿ: ಕಳೆದ 12 ತಿಂಗಳಲ್ಲಿ ಅಮೆರಿಕದ ತಂತ್ರಜ್ಞಾನ ದಿಗ್ಗಜ ಒರಾಕಲ್ ಕಾರ್ಪ್ ತನ್ನ ಉದ್ಯೋಗಿಗಳ ಸಂಖ್ಯೆಯನ್ನು 21 ಸಾವಿರದಷ್ಟು ಕಡಿಮೆ ಮಾಡಿರುವುದಾಗಿ ಬಹಿರಂಗಪಡಿಸಿದೆ. ಈ ಹಿಂದೆ ಅಂದಾಜಿಸಲಾಗಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನಡೆದಿರುವ ಈ ಉದ್ಯೋಗ ಕಡಿತದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆಯಿಂದ ಉಂಟಾದ ಪರಿಣಾಮವೂ ಸೇರಿದೆ. ಅಮೆರಿಕದ ಹಣಕಾಸು ನಿಯಂತ್ರಕ ಸಂಸ್ಥೆಗೆ ಸಲ್ಲಿಸಿರುವ ವಾರ್ಷಿಕ ವರದಿಯಲ್ಲಿ, “ನಮ್ಮ ಕಾರ್ಯಾಚರಣೆಗಳಲ್ಲಿ AI ತಂತ್ರಜ್ಞಾನಗಳನ್ನು ಅಳವಡಿಸಿಕೊಂಡ ಪರಿಣಾಮ ಉದ್ಯೋಗಿಗಳ ಸಂಖ್ಯೆ ಕಡಿಮೆಯಾಗಿದೆ. ಈ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆಯೂ ಇದೆ” […]