ಕಾವೇರಿ ನಾವು ಕೊಡೆವು; ನಾವು ಬಿಡೆವು: ಕರ್ನಾಟಕ-ತಮಿಳುನಾಡಿನಲ್ಲಿ ‘ಕಾವೇರಿ’ದ ಜಲ ಕದನ; ಬೆಂಗಳೂರು ಬಂದ್ ಗೆ ಕರೆ ನೀಡಿದ ಸಂಘಟನೆಗಳು

ಚೆನ್ನೈ: ಭಾನುವಾರ ತಮಿಳುನಾಡಿನಲ್ಲಿ ಕಾವೇರಿ ಜಲವಿವಾದದ ಪ್ರತಿಭಟನೆ ತೀವ್ರಗೊಂಡಿದ್ದು, ತಿರುಚ್ಚಿಯ ರೈತರು ತಮ್ಮ ರಾಜ್ಯಕ್ಕೆ ನದಿ ನೀರು ಬಿಡುವಂತೆ ಒತ್ತಾಯಿಸಿದ್ದತೆ ಇತ್ತ ಕನ್ನಡ ಪರ ಸಂಘಟನೆಗಳು ಹಾಗೂ ಮಂಡ್ಯದಲ್ಲಿ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ನೆರೆಯ ರಾಜ್ಯಕ್ಕೆ ಕಳುಹಿಸುವಷ್ಟು ನೀರಿಲ್ಲ ಎಂಬುದು ಕರ್ನಾಟಕ ಸರ್ಕಾರದ ವಾದವಾದರೂ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜತಾಂತ್ರಿಕವಾಗಿ ಸಮಸ್ಯೆಯನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದಾರೆ ಎಂದು ಡಿಎಂಕೆ ಹೇಳಿದೆ. ತಮಿಳುನಾಡು ಮತ್ತು ಕರ್ನಾಟಕದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಎರಡೂ ರಾಜ್ಯಗಳ ರೈತರು ತಮ್ಮ ಪ್ರತಿಭಟನೆಯನ್ನು […]

ಗೃಹ ಸಚಿವರಿಂದ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಹೇಶ್ ಠಾಕೂರ್ ಅವರಿಗೆ ಅಭಿನಂದನೆ

ರಾಜ್ಯ ಆಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಹೇಶ್ ಠಾಕೂರ್ ಅವರನ್ನು ಗೃಹ ಸಚಿವರಿಂದ ಅಭಿನಂದಿಸಲಾಯಿತು. 2003 ರಲ್ಲಿ ಉಡುಪಿಯಲ್ಲಿ ನಡೆದ ಮೂರು ಜಿಲ್ಲೆಗಳ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿಯಾಗಿ, 2011 ರಲ್ಲಿ ನಡೆದ ಕರ್ನಾಟಕ ರಾಜ್ಯ ಹಿರಿಯರ ಕ್ರೀಡಾಕೂಟದ ಸಂಘಟನಾ ಸಮಿತಿಯ ಕಾರ್ಯದರ್ಶಿಯಾಗಿ ಮತ್ತು 2019 ಆಗಸ್ಟ್ ನಲ್ಲಿ ಕರ್ನಾಟಕ ರಾಜ್ಯ ಕಿರಿಯರ ಕೂಟ, 2019 ಸಪ್ಟೆಂಬರ್ ನಲ್ಲಿ ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟ ಮತ್ತು 2021 ಸೆಪ್ಟೆಂಬರ್ ನಲ್ಲಿ 23ರ ವಯೋಮಿತಿಯ ಮತ್ತು ಪುರುಷ ಮತ್ತು […]

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನದಿ ನೀರು ಬಿಟ್ಟಿರುವುದನ್ನು ವಿರೋಧಿಸಿ ವಿವಿಧೆಡೆ ಪ್ರತಿಭಟನೆ

ಬೆಂಗಳೂರು: ರಾಜ್ಯ ಬರದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು. ”ರಾಜ್ಯ ಸಂಕಷ್ಟದಲ್ಲಿ ಇದ್ದಾಗ ನೀರು ಬಿಡಬೇಡಿ, ಯಾವುದೇ ಸಮಸ್ಯೆಗೂ ಸರ್ಕಾರದೊಂದಿಗೆ ನಾವು ಇದ್ದೇವೆ ಎಂದರೂ ರಾಜಕಾರಣಿಗಳು ತಮ್ಮ ಬೇಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ. ಸರ್ವಪಕ್ಷಗಳ ಸಭೆಯಲ್ಲಿ ರೈತರನ್ನು, ಕನ್ನಡಪರ ಸಂಘಟನೆಗಳನ್ನು ಹೊರಗಿಟ್ಟು ತೀರ್ಮಾನ ತೆಗೆದುಕೊಂಡಿದ್ದಾರೆ. ಯಾವುದೇ ಪಕ್ಷವೂ ಅಧಿಕಾರದಲ್ಲಿದ್ದಾಗ ರಾಜ್ಯದ ಪರ […]

ಕೇರಳ ಹೈಕೋರ್ಟ್​ ಆದೇಶ : ಪೋಕ್ಸೋ ಆರೋಪಿಗಳಿಗೂ ನಿರೀಕ್ಷಣಾ ಜಾಮೀನು

ಎರ್ನಾಕುಲಂ (ಕೇರಳ) : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್​ ಇಂದು ಆದೇಶ ನೀಡಿದೆ.ಪೋಕ್ಸೊ ಪ್ರಕರಣಗಳಲ್ಲಿ ಪ್ರಾಥಮಿಕ ಹಂತದ ಸಾಕ್ಷ್ಯಾಧಾರಗಳಿಲ್ಲದಿದ್ದಲ್ಲಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಕೊಡಬಹುದು ಎಂದು ಕೇರಳ ಹೈಕೋರ್ಟ್​ ಆದೇಶ ನೀಡಿದೆ. ಸುಳ್ಳು ಆರೋಪದ ಮೇಲೆ ಅಮಾಯಕರ ವಿರುದ್ಧ ಪ್ರಕರಣ ದಾಖಲಾದ ಹಲವು ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಇಂತಹ ಸಂದರ್ಭಗಳಲ್ಲಿ ವಾಸ್ತವಾಂಶಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಶಿಕ್ಷಿಸುವುದಷ್ಟೇ ಅಲ್ಲ. ಜೊತೆಗೆ ಅಮಾಯಕರನ್ನೂ ರಕ್ಷಿಸುವುದು ಮುಖ್ಯವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. […]

ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ : ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಸಂಸ್ಕಾರ

ಚೆನ್ನೈ (ತಮಿಳುನಾಡು): ತಮ್ಮ ಅಂಗಾಂಗಗಳನ್ನು ದಾನ ಮಾಡುವವರ ಅಂತ್ಯಕ್ರಿಯೆಯನ್ನು ಇನ್ಮುಂದೆ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪ್ರಕಟಿಸಿದ್ದಾರೆ.”ತಮ್ಮ ಅಂಗಾಂಗಗಳನ್ನು ದಾನ ಮಾಡುವ ಹಾಗೂ ಅನೇಕ ಪ್ರಾಣಗಳನ್ನು ಉಳಿಸುವವರ ತ್ಯಾಗವನ್ನು ಗೌರವಿಸುವ ಸಲುವಾಗಿ, ಸಾವಿಗೂ ಮುನ್ನ ತಮ್ಮ ಅಂಗಾಂಗಗಳನ್ನು ದಾನ ಮಾಡುವವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು” ಎಂದು ಮುಖ್ಯಮಂತ್ರಿ ಸ್ಟಾಲಿನ್​ ಪ್ರಕಟಿಸಿದ್ದಾರೆ. ಇದೇ ವೇಳೆ, ”ಅಂಗಾಂಗ ದಾನದ ಮೂಲಕ ನೂರಾರು ರೋಗಿಗಳಿಗೆ ಮರುಜೀವ ನೀಡುವಲ್ಲಿ ತಮಿಳುನಾಡು ದೇಶದಲ್ಲೇ ಅಗ್ರಸ್ಥಾನದಲ್ಲಿದೆ” ಎಂದು […]