ಹೈದರಾಬಾದ್​-ಬೆಂಗಳೂರು ಮಧ್ಯೆ ಸಂಚಾರ ಕರ್ನಾಟಕದ 3ನ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು

ಹೈದರಾಬಾದ್​-ಯಶವಂತಪುರ ಮಧ್ಯೆ ಸೆಪ್ಟೆಂಬರ್​ 25 ರಂದು ವಂದೇ ಭಾರತ್​ ರೈಲು ಸಂಚಾರ ಆರಂಭವಾಗಲಿದ್ದು, ಇದು ರಾಜ್ಯದ ಮೂರನೇ ರೈಲಾಗಲಿದೆ. ಹೈದರಾಬಾದ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ವಂದೇ ಭಾರತ್​ ರೈಲು ಸಂಪರ್ಕ ಶುರುವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಇದು ಎರಡು ಮಹಾನಗರಗಳಾದ ಹೈದರಾಬಾದ್ ಮತ್ತು ಬೆಂಗಳೂರನ್ನು ಸಂಪರ್ಕಿಸಲಿದ್ದು, ಸೆಪ್ಟೆಂಬರ್​ 25 ರಿಂದ ಅಧಿಕೃತ ಸಂಚಾರ ಆರಂಭಿಸಲಿದೆ. 20703 ಸಂಖ್ಯೆಯ ರೈಲು ಕಾಚಿಗುಡದಿಂದ ಬೆಳಗ್ಗೆ 5:30ಕ್ಕೆ […]

ಬೆಳಗಾವಿಯಲ್ಲಿ ತಿಲಕರು ಆರಂಭಿಸಿದ ಗಣೇಶೋತ್ಸವಕ್ಕೆ 119 ವರ್ಷಗಳ ಸಂಭ್ರಮ

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ.ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಬೆಳಗಾವಿಯಲ್ಲಿ ಬಾಲಗಂಗಾಧರ ತಿಲಕರು ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವಕ್ಕೆ ಇದೀಗ 119ನೇ ವರ್ಷದ ಸಂಭ್ರಮ ಇದರ ಪ್ರಭಾವ ಪಕ್ಕದ ಕರ್ನಾಟಕ ರಾಜ್ಯದ ಬೆಳಗಾವಿ ಮೇಲೂ ಬೀರುತ್ತದೆ. 1905ರಲ್ಲಿ ಸ್ವತಃ ತಿಲಕರೇ ಬೆಳಗಾವಿಗೆ ಆಗಮಿಸಿ ಇಲ್ಲಿನ ಝೇಂಡಾ ಚೌಕ್​ನ ಶಾಂತಾರಾಮ್ ವಿಷ್ಣು ಪಾಟನೇಕರ್ […]

ಕಾವೇರಿ ಜಲ ವಿವಾದ: ನಮ್ಮ ಕಾವೇರಿ ನಮ್ಮ ಹಕ್ಕು ಎಂದ ದರ್ಶನ್ ತೂಗುದೀಪ, ಕಿಚ್ಚ ಸುದೀಪ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ನಡುವೆ ಕನ್ನಡದ ಸೂಪರ್‌ಸ್ಟಾರ್‌ಗಳಾದ ದರ್ಶನ್ ತೂಗುದೀಪ ಮತ್ತು ಕಿಚ್ಚ ಸುದೀಪ್ ಅವರು ತಮ್ಮ ಕಾಳಜಿಯನ್ನು ವ್ಯಕ್ತಪಡಿಸಲು ಮತ್ತು ನಿರ್ಣಯಕ್ಕಾಗಿ ವಕಾಲತ್ತು ವಹಿಸಲು ಮುಂದಾಗಿದ್ದಾರೆ. ಸಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀಪ್ ಬುಧವಾರದಂದು “ಕಾವೇರಿ ನಮ್ಮ ಹಕ್ಕು” ಎಂದು ಬರೆದು ಜನರ ಪ್ರತಿ ಸರ್ಕಾರದ ಬದ್ಧತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಂತ್ರಗಾರಿಕೆಯನ್ನು ರೂಪಿಸಲು ತಜ್ಞರು ತಕ್ಷಣ ಮಧ್ಯಪ್ರವೇಶಿಸಬೇಕೆಂದು ಅವರು ಕರೆ ನೀಡಿದ್ದಾರೆ. “ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು . […]

ಬೆಂಗಳೂರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ನಡೆಯುವ ಹಿನ್ನೆಲೆ ನಗರದ ಈ ದಿನಗಳಲ್ಲಿ ಮದ್ಯ ಮಾರಾಟ ಬಂದ್​

ಬೆಂಗಳೂರು : ಗಣೇಶ ನಿಮಜ್ಜನ ವೇಳೆ ಮೆರವಣಿಗೆ ನಡೆಯುವ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಗರದಲ್ಲಿ ಮದ್ಯದಂಗಡಿಗಳನ್ನು ಮುಚ್ಚುವಂತೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಗಣೇಶ ನಿಮಜ್ಜನ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಧ್ಯದಂಗಡಿ ಮುಚ್ಚುವಂತೆ ನಗರ ಪೊಲೀಸ್​ ಆಯುಕ್ತ ಬಿ ದಯಾನಂದ ಅವರು ಆದೇಶಿಸಿದ್ದಾರೆ. ನಗರದ ವಿವಿಧ ಭಾಗಗಳಲ್ಲಿ‌ ನಿಗದಿತ ದಿನಗಳಲ್ಲಿ ಮದ್ಯದಂಗಡಿ ತೆರೆಯುವುದಿಲ್ಲ. ಅಲ್ಲದೆ‌ ಕೆಲ ಪ್ರದೇಶಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಬೆಂಗಳೂರಿನ ಕೇಂದ್ರ, ಉತ್ತರ, […]

ವಿಜಯನಗರದಲ್ಲಿ ಶಂಕಿತ ಡೆಂಗ್ಯೂಗೆ ಶಾಲಾ ಬಾಲಕಿ ಬಲಿ

ವಿಜಯನಗರ : ವಿಜಯನಗರದಲ್ಲಿ 7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.ಶಾಲಾ ಬಾಲಕಿಯೋರ್ವಳು ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.ಮೃತ ಜಾಹ್ನವಿಯ ತಂದೆ ತಿರುಮಲೇಶ್​ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್​ ಆಗಿ ಕೆಲಸ ಮಾಡುತ್ತಿದ್ದಾರೆ. ನಗರದ ಟಿ.ಬಿ. ಡ್ಯಾಂನ ವಂಕಾಯಿ ಕ್ಯಾಂಪ್‌ನಲ್ಲಿ ಇವರು ವಾಸವಾಗಿದ್ದರು. ಕಳೆದ ಒಂದು ವಾರದಿಂದ ಬಾಲಕಿಗೆ ಜ್ವರ ಕಾಣಿಸಿಕೊಂಡಿದೆ. ವೈರಲ್ ಫೀವರ್ ಎಂದು ಹೊಸಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಿದ್ದಾರೆ. ಬಳಿಕ ಜ್ವರ ಕಡಿಮೆಯಾಗದ ಹಿನ್ನೆಲೆ […]