ಇಂದು ಮಧ್ಯರಾತ್ರಿಯಿಂದ BMTC ಹೆಚ್ಚುವರಿ ಬಸ್ ಸೇವೆ.. ನಾಳೆ ಬೆಂಗಳೂರು ಬಂದ್..

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಯಾಗಿರುವ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್​ ಪ್ರಯಾಣದಶಕ್ತಿ ಯೋಜನೆಯನ್ನು ಖಾಸಗಿ ಬಸ್​ಗಳಿಗೂ ವಿಸ್ತರಣೆ ಮಾಡಬೇಕು ಹಾಗೂ ರಸ್ತೆ ತೆರಿಗೆ ರದ್ದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆಗಳ ಒಕ್ಕೂಟ ಸೋಮವಾರ ಬೆಂಗಳೂರು ಬಂದ್ ಕರೆ ನೀಡಿದೆ. ಸೋಮವಾರ ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲತೆಗಾಗಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ ಇರಲಿದೆ. . ನಾಳೆ ನಡೆಯುತ್ತಿರುವ ಬೆಂಗಳೂರು ಬಂದ್​​ಗೆ ಆಟೋ, ಖಾಸಗಿ ಬಸ್, ಕ್ಯಾಬ್ ಸೇರಿದಂತೆ ಪ್ರಯಾಣಿಕ ಆಧಾರಿತ ಸೇವೆಯಲ್ಲಿ […]

ಭ್ರಷ್ಟಾಚಾರ ಆರೋಪ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ

ಹೈದರಾಬಾದ್: ನಾಟಕೀಯ ಬೆಳವಣಿಗೆಯಲ್ಲಿ, ಆಂಧ್ರ ಪ್ರದೇಶದ ಸಿಐಡಿ ಪೊಲೀಸರು ಸೆಪ್ಟೆಂಬರ್ 9 ರಂದು ತೆಲುಗು ದೇಶಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರನ್ನು ಕರ್ನೂಲ್‌ನಿಂದ 65 ಕಿಮೀ ದೂರದಲ್ಲಿರುವ ನಂದ್ಯಾಲ್‌ನಲ್ಲಿ ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಪೊರೇಶನ್‌ನಲ್ಲಿನ ಭ್ರಷ್ಟಾಚಾರದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೊಲೀಸರು ಶುಕ್ರವಾರ ಮಧ್ಯರಾತ್ರಿಯಿಂದಲೇ ಕರ್ನೂಲ್, ನಂದ್ಯಾಲ್ ಮತ್ತು ಅನಂತಪುರ ಜಿಲ್ಲೆಗಳಿಂದ ಹಲವಾರು ಬಸ್‌ಗಳಲ್ಲಿ ಭಾರಿ ಪೊಲೀಸ್ ಪಡೆಗಳನ್ನು ನಿಯೋಜಿಸಲು ಪ್ರಾರಂಭಿಸಿದ್ದರು. ಸುಮಾರು 5.00 ಗಂಟೆಗೆ […]

ಜೈಲರ್ ಚಿತ್ರದ ನಟ, ನಿರ್ದೇಶಕ ಜಿ ಮಾರಿಮುತ್ತು ಹೃದಯಾಘಾತದಿಂದ ನಿಧನ

ಚೆನ್ನೈ: ಜನಪ್ರಿಯ ತಮಿಳು ನಟ ಮತ್ತು ನಿರ್ದೇಶಕ ಜಿ ಮಾರಿಮುತ್ತು ಅವರು ಶುಕ್ರವಾರ, ಸೆಪ್ಟೆಂಬರ್ 8 ರಂದು ತಮ್ಮ 58 ನೇ ವಯಸ್ಸಿನಲ್ಲಿ ನಿಧನರಾದರು. ರಜನಿಕಾಂತ್ ಅಭಿನಯದ ಜೈಲರ್ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ, ತಮ್ಮ ದೂರದರ್ಶನ ಕಾರ್ಯಕ್ರಮ ‘ಎಥಿರ್ನೀಚಲ್’ ನ ಡಬ್ಬಿಂಗ್ ಮಾಡುವಾಗ ಕುಸಿದು ಬಿದ್ದಿದ್ದಾರೆ. ನಟನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಮಾರಿಮುತ್ತು ಅವರು ಯೂಟ್ಯೂಬ್ ಸೆನ್ಸೇಷನ್ ಆಗಿದ್ದರು ಮತ್ತು ‘ಜೈಲರ್’ ಮತ್ತು ‘ರೆಡ್ ಸ್ಯಾಂಡಲ್ ವುಡ್’ ಚಿತ್ರದಲ್ಲಿನ […]

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ದ ಇಲಾಖಾ ತನಿಖೆಗೆ ಆದೇಶ ನೀಡಿದ ಸರ್ಕಾರ

ಬೆಂಗಳೂರು: 2018-19ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪಕ್ಕೆ ಸ್ಪಂದಿಸಿ ಸರ್ಕಾರ ನಿರ್ಣಾಯಕ ಕ್ರಮ ಕೈಗೊಂಡಿದೆ. ಮೈಸೂರು ಡಿಸಿ ನಿವಾಸದ ನವೀಕರಣ ಮತ್ತು ಬಟ್ಟೆ ಮತ್ತು ಬ್ಯಾಗ್‌ಗಳ ಖರೀದಿಯಲ್ಲಿ ನಡೆದಿರುವ ಅಕ್ರಮದ ಆರೋಪದ ಬಗ್ಗೆ ತನಿಖೆ ನಡೆಸಲು ಅಧಿಕೃತ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಈ ಆರೋಪಗಳ ತನಿಖೆಯು ನವೆಂಬರ್ 24, 2022 ರಲ್ಲಿ ಪ್ರಾರಂಭವಾಗಿದ್ದು, ಪ್ರಾಥಮಿಕ ವಿಚಾರಣೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಈ ಪೂರ್ವಭಾವಿ ತನಿಖೆಯ […]

ಅರಮನೆಗೆ ಅದ್ಧೂರಿ ಸ್ವಾಗತ.. ಮೈಸೂರು ದಸರಾ ಮಹೋತ್ಸವದ ಗಜಪಡೆಗೆ ಪೂಜೆ..

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಅರಣ್ಯಾಧಿಕಾರಿಗಳು ಮಂಗಳವಾರ ಗಜಪಡೆಗೆ ಪೂಜೆ ನೆರವೇರಿಸಿದರು. ಇಲ್ಲಿನ ಅರಣ್ಯ ಭವನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.‌ ಗಜಪೂಜೆ ನಂತರ ನೈವೇದ್ಯ ಅರ್ಪಣೆ ಮಾಡಲಾಯಿತು. ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು.ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಗಜಪಡೆಗೆ ಪೂಜೆ, ಅರಮನೆಗೆ ಅದ್ಧೂರಿ ಸ್ವಾಗತ…ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಗಜಪಡೆಗೆ ಪೂಜೆ ನೆವೇರಿಸಲಾಯಿತು. ನಂತರ ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಗೆ ಅರಮನೆಗೆ ಅದ್ಧೂರಿ ಸ್ವಾಗತ ಕೋರಲಾಯಿತು ಕಾಲ್ನಡಿಗೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ವೇಳೆ ಅಲಂಕಾರಗೊಂಡ […]