ಸರ್ಕಾರದ ಆದೇಶ: 10 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಸ್ಥಳ ನಿಯುಕ್ತಿಗಾಗಿ ಕಾಯುತ್ತಿದ್ದ ಹತ್ತು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗುಂಜಾನ್ ಆರ್ಯ ಹಾಗೂ ಕುಶಾಲ್ ಚೌಕ್ಸೆ ಅವರನ್ನು ಇಂಟೆಲಿಜೆನ್ಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ ಹತ್ತು ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ಲಾ & ಆರ್ಡರ್ ಡಿಸಿಪಿಯಾಗಿ ಸಿದ್ದಾರ್ಥ್ ಗೋಯಲ್, ಬೆಳಗಾವಿ ಲಾ & ಆರ್ಡರ್ ಡಿಸಿಪಿಯಾಗಿ ರೋಹನ್ ಜಗದೀಶ್, ಬೆಂಗಳೂರು ಸೆಂಟರ್ ಆಯಂಟಿ ಟೆರರಿಸ್ಟ್ ಎಸ್.ಪಿಯಾಗಿ ಶಿವಾಂಶು ರಜಪೂತ್, […]
ಕೊಟಕ್ ಮಹೀಂದ್ರಾ ಬ್ಯಾಂಕ್ನ ಸಿಇಒ ಉದಯ್ ಕೊಟಕ್ ಎಂಡಿ ಸ್ಥಾನಕ್ಕೆ ರಾಜೀನಾಮೆ

ನವದೆಹಲಿ: ಕೊಟಕ್ ಮಹೀಂದ್ರಾ ಬ್ಯಾಂಕ್ನ ಸಂಸ್ಥಾಪಕ ಉದಯ್ ಕೊಟಕ್ ಅವರು ತಮ್ಮ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ.ಸರಿಯಾದ ಸಮಯದಲ್ಲಿ ನಾನು ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಕೊಟಕ್ ಮಹೀಂದ್ರಾ ಬ್ಯಾಂಕ್ನ ಸಿಇಒ, ಎಂಡಿ ಸ್ಥಾನಕ್ಕೆ ಉದಯ್ ಕೊಟಕ್ ಅವರು ರಾಜೀನಾಮೆ ನೀಡಿದ್ದಾರೆ. .ಎಕ್ಸ್ನಲ್ಲಿ (ಹಿಂದಿನ ಟ್ವಿಟ್ಟರ್) ಈ ಬಗ್ಗೆ ಮಾಹಿತಿ ನೀಡಿರುವ ಉದಯ್ ಕೊಟಕ್ ಅವರು, ಕೋಟಕ್ ಮಹೀಂದ್ರಾ ಬ್ಯಾಂಕ್ನ ಉತ್ತರಾಧಿಕಾರದ ಕಾಲ ಇದಾಗಿದೆ. ಬ್ಯಾಂಕ್ನ ಅಧ್ಯಕ್ಷರು, ನಾನು […]
ಸೆಪ್ಟೆಂಬರ್ 4ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಬರಪೀಡಿತ ತಾಲೂಕಗಳ ಹೆಸರು ಘೋಷಣೆ

ಬಾಗಲಕೋಟೆ: ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಉಂಟಾಗಿದ್ದು, ಸೆಪ್ಟೆಂಬರ್ 4 ರಂದು ಸಭೆ ನಡೆಸಿ ಬರಗಾಲ ಪೀಡಿತ ತಾಲೂಕಗಳ ಹೆಸರು ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಯಾವ್ಯಾವ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಆಗಿದೆ ಅವುಗಳನ್ನು ಬರಪೀಡಿತ ತಾಲೂಕು ಎಂದು ಘೋಷಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಆಲಮಟ್ಟಿ ಆಣೆಕಟ್ಟೆಯಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಜಲಾಶಯಗಳಲ್ಲಿ ಆಲಮಟ್ಟಿ, ನಾರಾಯಣಪುರ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ ಈ ಭಾಗದಲ್ಲಿ ನೀರಿನ […]
ನಾಳೆಯಿಂದ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ : ಲೋಕಸಭೆ ಚುನಾವಣೆ ತಯಾರಿ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ರಾಜ್ಯ ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದ್ದು, ಇದರ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಭಾನುವಾರ ಕರೆಯಲಾಗಿದೆ.ಲೋಕಸಭೆ ಚುನಾವಣೆ ಹಿನ್ನೆಲೆ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಓಟಕ್ಕೆ ತಡೆ ಹಾಕಿರುವ ರಾಜ್ಯ ಕಾಂಗ್ರೆಸ್ನ ಉತ್ಸಾಹ ಇಮ್ಮಡಿಯಾಗಿದ್ದು, ರಾಷ್ಟ್ರ ಮಟ್ಟದಲ್ಲೂ ಇದೇ ರೀತಿಯ […]
ದಸರಾ ಆಚರಣೆಗೆ ₹30 ಕೋಟಿ ಅನುದಾನ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿಕೆ

ಮೈಸೂರು: “ಈ ಬಾರಿ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು 30 ಕೋಟಿ ರೂ ಅನುದಾನ ಕೇಳಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ” ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.”ಈ ಹಿಂದೆ ಸಾಂಪ್ರದಾಯಿಕವಾಗಿ 9 ಆನೆಗಳನ್ನು ವೀರನಹೊಸಳ್ಳಿಯಿಂದ ಸ್ವಾಗತಿಸಿ, ಕಾಲ್ನಡಿಗೆಯ ಗಜಪಡೆ ಅರಮನೆ ಪ್ರವೇಶ ಮಾಡುತ್ತಿತ್ತು. ಆದರೆ ಕಾಲ್ನಡಿಗೆಯಲ್ಲಿಯೇ ಕರೆದುಕೊಂಡು ಬಂದರೆ ದಣಿವಾಗುತ್ತದೆ ಎಂದು 2004ರಿಂದ ವಾಹನದ ಮೂಲಕ ಕರೆತರಲಾಗುತ್ತಿದೆ. ಇಂದು ಒಂಬತ್ತು ಆನೆಗಳು ಬರುತ್ತವೆ. ಇನ್ನೂ ಐದು ಆನೆಗಳು […]