ಧರ್ಮಸ್ಥಳ: ಪ್ರಕರಣವನ್ನು ವಿಶೇಷ ತನಿಖಾ ತಂಡ(SIT)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಕುರಿತ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ. ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ಅವರ ನೇತೃತ್ವದ ತಂಡದಲ್ಲಿ ನೇಮಕಾತಿ ವಿಭಾಗದ ಉಪ ಪೊಲೀಸ್ ಮಹಾ ನಿರ್ದೇಶಕ ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ […]
ಧರ್ಮಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆಯಲ್ಲಿ ಪಿಎಐ ವಿರುದ್ದ ದುರ್ವರ್ತನೆ, ಗೌಪ್ಯತೆಯ ಉಲ್ಲಂಘನೆಯ ಆರೋಪ ಮಾಡಿದ ಅನನ್ಯಾ ಭಟ್ ತಾಯಿ

ಮಂಗಳೂರು: ಧರ್ಮಸ್ಥಳದಲ್ಲಿ ತನ್ನ ಮಗಳು ಅನನ್ಯಾ ಭಟ್ ನಿಗೂಢವಾಗಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್, ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣದ ತನಿಖೆ ಸಂದರ್ಭ ಧರ್ಮಸ್ಥಳ ಪಿಎಸೈ ವಿರುದ್ದ ದುರ್ವರ್ತನೆ, ಗೌಪ್ಯತೆಯ ಉಲ್ಲಂಘನೆಯ ಆರೋಪ ಮಾಡಿದ್ದಾರೆ. ಈ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಗೌಪ್ಯ ಸಾಕ್ಷಿ ನೀಡಿರುವ ಹೇಳಿಕೆಯನ್ನು ಪಿಎಸ್ಐ ಅವರು ಕಾನೂನುಬಾಹಿರವಾಗಿ ಬಹಿರಂಗಪಡಿಸಿದ್ದಾರೆ. ಎಂದವರು ದೂರಿದ್ದಾರೆ. ಈ ಕುರಿತು ದೂರನ್ನು ಭಾರತದ ಮುಖ್ಯ ನ್ಯಾಯಮೂರ್ತಿ, ಮುಖ್ಯಮಂತ್ರಿ, ಗೃಹಸಚಿವರು, ಹೈಕೋರ್ಟ್ […]
15 ಗಂಟೆಯಲ್ಲೇ ಪೋಕ್ಸೊ ವಿಶೇಷ ಪಿಪಿ ವಿರುದ್ಧದ ಪ್ರಕರಣಕ್ಕೆ ತಡೆಯಾಜ್ಞೆ..!

ಉಡುಪಿ: ಜಿಲ್ಲೆಯ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈಟಿ.ರಾಘವೇಂದ್ರ ಸೇರಿದಂತೆ ಮನೋಜ್ ಹಾಗು ಸಂಜಯ್ ವಿರುದ್ದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಜಾತಿನಿಂದನೆ ಪ್ರಕರಣಕ್ಕೆ 15 ಗಂಟೆಯ ಅವಧಿಯಲ್ಲೇ ಕರ್ನಾಟಕ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿ ಆದೇಶಿಸಿದೆ.ಉಡುಪಿ ಮಹಿಳಾ ಠಾಣೆಯಲ್ಲಿ ಜು.15 ರಂದು ದಾಖಲಾಗಿದ್ದ ಜಾತಿನಿಂದನೆ ಪ್ರಕರಣವನ್ನು ಪ್ರಶ್ನಿಸಿ ವೈ.ಟಿ ರಾಘವೇಂದ್ರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ತುರ್ತು ವಿಚಾರಣೆ ನಡೆಸಿದ್ದ ನ್ಯಾ. ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ಪೀಠವು, ತಾತ್ಕಾಲಿಕ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ವೈ.ಟಿ ರಾಘವೇಂದ್ರ ಅವರ […]
ಪರಶುರಾಮ ಮೂರ್ತಿ ಫೈಬರ್ ಎಂದ ಕಾಂಗ್ರೆಸ್’ನ ಆಧಾರರಹಿತ ಆರೋಪಕ್ಕೆ ಸೋಲು: ಶ್ರೀನಿಧಿ ಹೆಗ್ಡೆ

ಉಡುಪಿ: ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್ ನಲ್ಲಿ ನಿರ್ಮಿಸಲಾದ ಪರಶುರಾಮನ ಮೂರ್ತಿ ಫೈಬರ್ ಪ್ರತಿಮೆ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತದ ಬಗೆ ಮಾಧ್ಯಮದಲ್ಲಿ ಪ್ರಕಟವಾಗಿದೆ, ಈ ಮೂಲಕ ರಾಜ್ಯದಾದ್ಯಂತ ಫೈಬರ್ ಪ್ರತಿಮೆ ಎಂದು ಆಧಾರ ರಹಿತ ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ಸ್ ನಾಯಕರಿಗೆ ಸ್ಪಷ್ಟ ಸೋಲಾಗಿದೆ. ಕಾಂಗ್ರೆಸ್ಸ್ ದ್ವೇಷದ ರಾಜಕಾರಣಕ್ಕೆ ಅಭಿವೃದ್ಧಿಯನ್ನೇ ಸಹಿಸಿಕೊಳ್ಳದ ಕಾಂಗ್ರೆಸ್ ಪಕ್ಷ ಉಡುಪಿಯ ಪ್ರವಾಸೋದ್ಯಮಕ್ಕೆ ಮುನ್ನುಡಿ ಆಗುತ್ತಿದ್ದ ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ […]
ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಮುಂದೂಡಿಕೆ

ನವದೆಹಲಿ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್ ಜೈಲು ಅಧಿಕಾರಿಗಳು ನಿರ್ಧರಿಸಿದ್ದರು. ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿಮಿಷಾ ಅವರು ತನ್ನ ಕ್ಲಿನಿಕ್ ಪಾಲುದಾರನಾಗಿದ್ದ ಯೆಮೆನ್ ದೇಶದ ಪ್ರಜೆ ತಲಾಲ್ ಅಬ್ದು ಮಹ್ದಿ ಎಂಬವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. 2017ರಲ್ಲಿ ಕೊಲೆ ಪ್ರಕರಣ ನಡೆದಿತ್ತು. ಯೆಮೆನ್ನ ವಿಚಾರಣಾ ನ್ಯಾಯಾಲಯ 2020ರಲ್ಲಿ ನಿಮಿಷಾ ಅವರಿಗೆ […]