ಭಾರೀ ಮಳೆ ಹಿನ್ನಲೆ: ಉಡುಪಿ, ದ.ಕ ಮತ್ತು ಉತ್ತರ ಕನ್ನಡದ ಕರಾವಳಿಯಲ್ಲಿ ಎತ್ತರದ ಅಲೆಗಳ ಎಚ್ಚರಿಕೆ.

ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರವು ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡದ ಕರಾವಳಿ ಪ್ರದೇಶಗಳಿಗೆ ಹೆಚ್ಚಿನ ಅಲೆಗಳ ಎಚ್ಚರಿಕೆ ಮತ್ತು ಉಬ್ಬರದ ಅಲರ್ಟ್ ನೀಡಿದೆ. ಉಡುಪಿಯಲ್ಲಿ ಎತ್ತರದ ಅಲೆಗಳು ಏಳುವ ಸಾಧ್ಯತೆ:ಈ ಅಲೆಗಳ ಎಚ್ಚರಿಕೆ, ಅಲರ್ಟ್ ಜುಲೈ 19 ರಂದು ಸಂಜೆ 05 :30ರಿಂದ ಜುಲೈ 21 ರ ರಾತ್ರಿ 11.30 ರ ವರೆಗೆ ಜಾರಿಯಲ್ಲಿರುತ್ತದೆ ಹಾಗೂ ಉಡುಪಿ ಕರಾವಳಿಯ ಬೈಂದೂರಿನಿಂದ ಕಾಪುವರೆಗಿನ ಕರಾವಳಿಯಲ್ಲಿ 3.5 ರಿಂದ 3.7 ಮೀಟರ್ ಎತ್ತರದ ಅಲೆಗಳು […]
ಕೊಡಗಿನಲ್ಲಿ ರೆಡ್ ಅಲರ್ಟ್ ಮುಂದುವರಿಕೆ: ನಾಳೆಯು (ಜುಲೈ 20) ಕೊಡಗು ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ.

ಕೊಡಗು: ಕೊಡಗು ಜಿಲ್ಲಾದ್ಯಂತ ಬಾರಿ ಮಳೆ, ಗಾಳಿ ಮುಂದುವರದಿದ್ದು, ಹವಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು.20 ರಂದು ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ ಇಂದು (ಜು.15) ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ.

ಭಾರಿ ಮಳೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನಾದ್ಯಂತ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ, ಶಾಲೆ-ಕಾಲೇಜಿಗೆ ರಜೆ:ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಸೋಮವಾರ (ಜು.15ರಂದು) […]
ವಾಲ್ಮೀಕಿ ನಿಗಮ ಬಹುಕೋಟಿ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಇಡಿ ವಶಕ್ಕೆ.

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ರಾಜೀನಾಮೆ ನೀಡಿದ್ದ ಮಾಜಿ ಬಿ. ನಾಗೇಂದ್ರ ಅವರನ್ನು ಬೆಳಂಬೆಳಿಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಇಡಿ ಅಧಿಕಾರಿಗಳು ಕರೆದುಕೊಂಡುಹೋಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಕಳೆದ ಎರಡ್ಮೂರು ದಿನಗಳಿಂದ ವಿವಿಧೆಡೆ ದಾಳಿ ನಡೆಸಿದ್ದರು. ಮಾಜಿ ಸಚಿವ […]
ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ನಗರ ವಿಖ್ಯಾತಿ ಪಡೆದಿದೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ನಾಡಪ್ರಭು ಕೆಂಪೇಗೌಡರು ದೂರದೃಷ್ಠಿ ಇಟ್ಟುಕೊಂಡು ನಿರ್ಮಿಸಿದ ಬೆಂಗಳೂರು ನಗರ ಕೋಟ್ಯಾಂತರ ಜನರ ಬದುಕು ಕಟ್ಟಿಕೊಳ್ಳಲು ಆಶ್ರಯ ಆಗುವುದರ ಜೊತೆಗೆ ವಿಶ್ವವಿಖ್ಯಾತಿ ನಗರವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. 15-16 ನೇ ಶತಮಾನದ […]