ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ, ಸರಕಾರದ ಮಹತ್ವದ ಆದೇಶ,ಅರ್ಜಿ ಸಲ್ಲಿಸಲು 15 ದಿನ ಅವಕಾಶ

ಬೆಂಗಳೂರು: ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕಟ್ಟಡ ಮಾಲೀಕರಿಗೆ ಇಂಧನ ಇಲಾಖೆ ಮಹತ್ವದ ಸಡಿಲಿಕೆ ನೀಡಿದೆ. ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವವರು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವವರು ಹಾಗೂ ಯಾವುದೇ ವಿದ್ಯುತ್ ಸಂಪರ್ಕವಿಲ್ಲದೆ ಕಟ್ಟಡ ಪೂರ್ಣಗೊಳಿಸಿರುವವರಿಗೆ ಸ್ವಾಧೀನಾನುಭವ ಪ್ರಮಾಣಪತ್ರ (Possession Certificate) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಈ ಸೌಲಭ್ಯವು 2026ರ ಮೇ 31ರೊಳಗೆ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಮಾತ್ರ ಅನ್ವಯವಾಗಲಿದೆ. ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗೆ ಅರ್ಜಿ […]

ಅನ್ನಭಾಗ್ಯ ಯೋಜನೆಯಿಂದ 13-14 ಲಕ್ಷ ಅನರ್ಹರನ್ನು ಕೈಬಿಡಲು ಸರ್ಕಾರ ನಿರ್ಧಾರ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭಾರದಿಂದ ಆರ್ಥಿಕ ಒತ್ತಡ ಎದುರಿಸುತ್ತಿರುವ ರಾಜ್ಯ ಸರ್ಕಾರ, ಪ್ರಮುಖ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಗೃಹಜ್ಯೋತಿ, ಗೃಹಲಕ್ಷ್ಮಿ ಜೊತೆಗೆ ಅನ್ನಭಾಗ್ಯ ಯೋಜನೆಯಲ್ಲೂ ಫಲಾನುಭವಿಗಳ ಮರುಪರಿಶೀಲನೆ ನಡೆಸುವ ಚರ್ಚೆ ನಡೆಯುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ K. H. Muniyappa ಈ ಕುರಿತು ಸುಳಿವು ನೀಡಿದ್ದು, ಸುಮಾರು 13-14 ಲಕ್ಷ ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಹೊರಗಿಡುವ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸರ್ಕಾರಿ ನೌಕರರ ಕುಟುಂಬಗಳಿಗೆ ಗ್ಯಾರಂಟಿ ಸೌಲಭ್ಯಗಳನ್ನು ಕಡಿತಗೊಳಿಸುವ […]

ಕಾಂಗ್ರೆಸ್‌‍ ಕಾರ್ಯಕ್ರಮದಿಂದ ನೀಟ್‌ ವಿದ್ಯಾರ್ಥಿಗಳಿಗೆ ತೊಂದರೆ : ಆರ್‌.ಅಶೋಕ್‌ ಆರೋಪ

ಬೆಂಗಳೂರು,ಜೂ.22- ವೈದ್ಯಕೀಯ ಪ್ರವೇಶಾತಿ ಕೋರ್ಸ್‌ಗಳಿಗೆ ನಡೆದ ನೀಟ್‌-ಯುಜಿ 2026 ಪರೀಕ್ಷೆಗೆ ಕೆಲವು ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಕೇಂದ್ರಗಳಿಗೆ ಬಾರದಿರಲು ಕಾರಣವಾಗಿದ್ದೇ ಕಾಂಗ್ರೆಸ್‌‍ ಸಮಾವೇಶ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಅವರು, ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಹೆಚ್ಚಿನ ವಾಹನಗಳು ವಿವಿಧ ಭಾಗಗಳಿಂದ ಆಗಮಿಸಿ ನಗರದಲ್ಲಿ ಸಂಚಾರಿ ದಟ್ಟಣೆ ಶುರುವಾಯಿತು. ಪರಿಣಾಮ ವಿದ್ಯಾರ್ಥಿಗಳು ರಸ್ತೆ ಮಧ್ಯೆ ಭಾಗದಲ್ಲಿ ಸಿಲುಕಿ ಹಾಕಿಕೊಂಡಿದ್ದರಿಂದ ಸಕಾಲಕ್ಕೆ ಸರಿಯಾಗಿ ಬರಲು ಸಾಧ್ಯವಾಗಲಿಲ್ಲ. ಇದಕ್ಕೆ ಕಾಂಗ್ರೆಸ್‌‍ […]

ನಂದಿನಿ ಹಾಲಿನ ವಿರುದ್ಧ ರೀಲ್ಸ್ ಮಾಡಿದ ವೈದ್ಯೆಗೆ ಹೈಕೋರ್ಟ್ ತರಾಟೆ; ‘ಇಷ್ಟವಿಲ್ಲದಿದ್ದರೆ ನಂದಿನಿ ಹಾಲು ಕುಡಿಯಬೇಡಿ’ ಎಂದ ನ್ಯಾಯಪೀಠ

ಬೆಂಗಳೂರು: ನಂದಿನಿ ಹಾಲಿನ ಉತ್ಪನ್ನಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡಿ ವಿವಾದಕ್ಕೀಡಾಗಿದ್ದ ಚರ್ಮರೋಗ ತಜ್ಞೆ ಡಾ. ಶರಣ್ಯ ಪದ್ಮ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ವಿಚಾರಣೆ ವೇಳೆ ನ್ಯಾಯಪೀಠ ವೈದ್ಯೆಯ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಏನಿದು ಪ್ರಕರಣ? ಕಳೆದ ಫೆಬ್ರವರಿಯಲ್ಲಿ ಡಾ. ಶರಣ್ಯ ಪದ್ಮ ಅವರು ನಂದಿನಿಯ ಸ್ಟ್ರಾಬೆರಿ ರುಚಿಯ ಹಾಲು ಸೇರಿದಂತೆ ಕೆಲವು ಉತ್ಪನ್ನಗಳು ನೈಸರ್ಗಿಕ ಹಣ್ಣುಗಳನ್ನು ಹೊಂದಿಲ್ಲ ಹಾಗೂ ಕೃತಕ ಬಣ್ಣ ಮತ್ತು ಸಂರಕ್ಷಕಗಳನ್ನು ಬಳಸಲಾಗುತ್ತದೆ ಎಂದು ಹೇಳುತ್ತಾ ಇನ್‌ಸ್ಟಾಗ್ರಾಮ್ ಸೇರಿದಂತೆ […]

ಒಂದು ವಾಹನದ ಮೇಲೆ ಬರೋಬ್ಬರಿ 100 ಸಂಚಾರ ಉಲ್ಲಂಘನೆ ಪ್ರಕರಣ, ಶೇ.50 ರಿಯಾಯಿತಿಯಲ್ಲಿ₹27,500 ಪಾವತಿಸಿದ ವಾಹನ ಸವಾರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಬಾಕಿ ದಂಡಗಳನ್ನು ಪಾವತಿಸಲು ರಾಜ್ಯ ಸರ್ಕಾರ ನೀಡಿರುವ ಶೇ.50ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ನಾಗರಿಕರೊಬ್ಬರು ತಮ್ಮ ವಾಹನದ ಮೇಲೆ ದಾಖಲಾಗಿದ್ದ 100 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ ಸೌಲಭ್ಯ ಪಡೆದು ಒಟ್ಟು ₹27,500 ದಂಡವನ್ನು ಪಾವತಿಸಿದ್ದಾರೆ. ಈ ಮೂಲಕ ಸರ್ಕಾರದ ವಿಶೇಷ ರಿಯಾಯಿತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಬಾಕಿ ದಂಡಗಳ ಮೇಲೆ ಜೂನ್ […]