ರಾಸಲೀಲೆಯ ವೀಡಿಯೋ ವೈರಲ್:IPS ಅಧಿಕಾರಿ ಡಿಜಿಪಿ ಕೆ.ರಾಮಚಂದ್ರ ರಾವ್ ಅಮಾನತು

ಬೆಂಗಳೂರು: ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ರಾಮಚಂದ್ರರಾವ್ ತನ್ನ ಕಚೇರಿಯ ಒಳಗಡೆ ಸಮವಸ್ತ್ರದಲ್ಲಿರುವಾಗ ನಡೆದಿರುವ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚನೆ […]

ಸ್ಪೇನ್: ಹೈ ಸ್ಪೀಡ್ ರೈಲು ಮತ್ತೊಂದು ರೈಲಿಗೆ ಡಿಕ್ಕಿ: 21 ಮಂದಿ ಮೃತ್ಯು; 100ಕ್ಕೂ ಹೆಚ್ಚು ಮಂದಿ ಗಾಯ!

ಮ್ಯಾಡ್ರಿಡ್‌(ಸ್ಪೇನ್‌): ಹಳಿ ತಪ್ಪಿದ ಹೈಸ್ಪೀಡ್‌ ರೈಲೊಂದು ಪಕ್ಕದ ಹಳಿಯಲ್ಲಿ ಸಂಚರಿಸುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 21 ಜನರು ಮೃತಪಟ್ಟು, 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಕಾರ್ಡೋಬಾದ ಆಡಮುಜ್ ಬಳಿ ಭಾನುವಾರ ನಡೆದಿದೆ. ಇಲ್ಲಿಯವರೆಗೆ 21 ಜನರು ಮೃತಟ್ಟಿದ್ದಾರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮ್ಯಾಡ್ರಿಡ್‌ನಿಂದ ಹುಯೆಲ್ವಾಗೆ ಸಂಚರಿಸುತ್ತಿದ್ದ ರೈಲಿನ ಲೋಕೋ ಪೈಲಟ್‌ ಕೂಡ ಮೃತರಲ್ಲಿ ಒಬ್ಬರು ಎಂದು ವರದಿಯಾಗಿದೆ. ‘ಮಲಗಾದಿಂದ ಮ್ಯಾಡ್ರಿಡ್‌ಗೆ ಸಂಚರಿಸುತ್ತಿದ್ದ ಇರಿಯೊ ರೈಲು ಆಡಮುಜ್‌ ಬಳಿ ಹಳಿ ತಪ್ಪಿದ್ದು, ಪಕ್ಕದ ಹಳಿಯಲ್ಲಿ […]

ಶಬರಿಮಲೆ ಅಯ್ಯಪ್ಪ ದೇಗುಲ: ಮಕರಜ್ಯೋತಿಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು

ಶಬರಿಮಲೆ: ಇಲ್ಲಿನ ಅಯ್ಯಪ್ಪ ದೇಗುಲಕ್ಕೆ ವಿವಿಧ ರಾಜ್ಯಗಳಿಂದ ಬಂದಿದ್ದ ಸಾವಿರಾರು ಭಕ್ತರು ಬುಧವಾರ ಸಂಜೆ 6.43ಕ್ಕೆ ಮಕರಜ್ಯೋತಿಯನ್ನು ಕಣ್ತುಂಬಿಕೊಂಡರು. ಇರುಮುಡಿ ಹೊತ್ತಿದ್ದ ಭಕ್ತರು ದೇವಾಲಯದ ಆವರಣ ಮತ್ತು ಇತರೆಡೆಗಳಲ್ಲಿ ಮಕರಜ್ಯೋತಿ ದರ್ಶನಕ್ಕಾಗಿ ಮಧ್ಯಾಹ್ನದಿಂದಲೇ ಕಾದು ನಿಂತಿದ್ದರು. ದೇಗುಲದಿಂದ 8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದ ಕಾಡಿನೊಳಗಿನಿಂದ ಮಕರಜ್ಯೋತಿ ಕಾಣಿಸಿಕೊಂಡಾಗ ಪುಳಕಿತರಾದರು. ಜ್ಯೋತಿಯನ್ನು ವೀಕ್ಷಿಸಲು ಶಬರಿಮಲೆ ಮತ್ತು ಸುತ್ತಮುತ್ತಲಿನ ವಿವಿಧ ವೀಕ್ಷಣಾ ಸ್ಥಳಗಳಲ್ಲಿ ಸಾವಿರಾರು ಭಕ್ತರು ನೆರೆದಿದ್ದರು. ಪತ್ತನಂತಿಟ್ಟದ ಪಂದಳಂ ಅರಮನೆಯಿಂದ ಮೆರವಣಿಗೆ ಮೂಲಕ ತರಲಾದ ‘ತಿರುವಾಭರಣ’ದಿಂದ (ಪವಿತ್ರ […]

ಭಾರತದ ಮೇಲೆ ದಾಳಿಗೆ ಸಾವಿರಕ್ಕೂ ಹೆಚ್ಚು ಆತ್ಮಹತ್ಯಾ ಬಾಂಬರ್ ಗಳು ಸಿದ್ದ: ಉಗ್ರ ಮಸೂದ್ ಆಡಿಯೋ ವೈರಲ್!

ನಿಷೇಧಿತ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನ ಹೊಸ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ಆತ ಭಾರತದ ಮೇಲೆ ದಾಳಿ ಮಾಡಲು ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧರಿದ್ದಾರೆ ಎಂದು ಹೇಳಿದ್ದಾನೆ. ಮಸೂದ್ ಅಜರ್ ಯಾವುದೇ ಕ್ಷಣದಲ್ಲಿ ದಾಳಿ ಮಾಡಲು ಹೆಚ್ಚಿನ ಸಂಖ್ಯೆಯ ಆತ್ಮಹತ್ಯಾ ದಾಳಿಕೋರರು ಸಿದ್ಧರಾಗಿದ್ದಾರೆ ಮತ್ತು ಅವರು ಭಾರತಕ್ಕೆ ನುಸುಳಲು ಅವಕಾಶ ನೀಡುವಂತೆ ಅಜರ್ ಒತ್ತಾಯಿಸುತ್ತಿರುವುದು ಕೇಳಿಸುತ್ತದೆ. ತನ್ನ ಗುಂಪಿನ ಹೋರಾಟಗಾರರ ಸಂಖ್ಯೆಯನ್ನು ಬಹಿರಂಗಪಡಿಸಿದರೆ ಜಗತ್ತೇ ಬೆಚ್ಚಿಬೀಳುತ್ತದೆ ಎಂದು ಹೇಳಿದ್ದಾನೆ. ಈ ಆತ್ಮಹತ್ಯೆ ಬಾಂಬ್ […]

ಭಾರತದ ಗಡಿಯಲ್ಲಿ ಭದ್ರತೆ ಹೆಚ್ಚಿಸಬೇಕು: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊವಾಲ್

ನವದೆಹಲಿ: ಭಾರತ ಗಡಿಯಲ್ಲಿ ಭದ್ರತೆಯನ್ನು ಬಲಪಡಿಸಬೇಕು. ಪ್ರತಿಯೊಂದು ಕ್ಷೇತ್ರದಲ್ಲೂ ಭದ್ರತೆ ಹೆಚ್ಚಿಸಬೇಕು. ಇತಿಹಾಸದಲ್ಲಿ ನಡೆದ ದಾಳಿಗಳ ವಿರುದ್ಧ ‘ಪ್ರತೀಕಾರ’ಕ್ಕಾಗಿ ಮತ್ತು ಮುಂದೆ ಅಂಥ ದಾಳಿಗಳನ್ನು ತಡೆಯಲು ಭದ್ರತೆಯನ್ನು ಬಲಗೊಳಿಸಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೊವಾಲ್‌ ಹೇಳಿದರು. ವಿಕಸಿತ ಭಾರತ ಯುವ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದ ಅವರು, ‘ನೀವೆಲ್ಲಾ ಅದೃಷ್ಟವಂತರು, ಸ್ವತಂತ್ರ ಭಾರತದಲ್ಲಿ ಜನಿಸಿದ್ದೀರಿ. ನಾನು ವಸಹಾತುಶಾಹಿ ಭಾರತದಲ್ಲಿ ಜನಿಸಿದೆ. ನನ್ನ ಪೂರ್ವಜರು ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಅನೇಕ ವಿಚಾರಣೆಗಳನ್ನು ಎದುರಿಸಿದರು’ ಎಂದು ಹೇಳಿದರು. […]