ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದ ಎರಡನೇ ಅತಿ ದೊಡ್ಡ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ: ಮೇ. 23 ರಂದು ಶಂಕುಸ್ಥಾಪನೆ

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಿರ್ಮಾಣವಾಗಲಿರುವ ನೂತನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಮೇ 23ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸುಮಾರು 80,000 ಆಸನ ಸಾಮರ್ಥ್ಯ ಹೊಂದಿರುವ ಈ ಬೃಹತ್ ಕ್ರೀಡಾಂಗಣವು, ನರೇಂದ್ರಮೋದಿ ಸ್ಟೇಡಿಯಂ ನಂತರ ದೇಶದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಸುಮಾರು ₹943 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಮಹತ್ವಾಕಾಂಕ್ಷಿ ಯೋಜನೆ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕ್ರೀಡಾಂಗಣ ನಿರ್ಮಾಣದ ಜಾಗತಿಕ ಟೆಂಡರ್ ಪ್ರಕ್ರಿಯೆಯೂ ಇದೇ ದಿನ ಅಂತ್ಯಗೊಳ್ಳಲಿದೆ. ಆನೇಕಲ್‌ನ ಸೂರ್ಯನಗರ 4ನೇ ಹಂತದಲ್ಲಿರುವ […]

ಖಾಸಗಿ ಬಸ್‌ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ 36 ಪ್ರಯಾಣಿಕರು ಪಾರು

ಹಾಸನ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ತಾಲೂಕಿನ ಶಾಂತಿಗ್ರಾಮ ಸಮೀಪ ಶುಕ್ರವಾರ ತಡರಾತ್ರಿ ಏಕಾಏಕಿ ಬೆಂಕಿ ತಗುಲಿದ ಘಟನೆ ನಡೆದಿದೆ. ಬಸ್‌ನ ಟೈಯರ್ ಸ್ಫೋಟಗೊಂಡ ಪರಿಣಾಮ ಮೊದಲು ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಕವಾಗಿ ಹಬ್ಬಿದ ಪರಿಣಾಮ ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿಯನ್ನು ಅರಿತ ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಒಳಗಿದ್ದ 36 ಮಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರೀ ಅನಾಹುತ […]

ಮುರ್ಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಮಾರ್ಗದಲ್ಲಿ ಬದಲಾವಣೆ

ಉಡುಪಿ: ನೈರುತ್ಯ ರೈಲ್ವೇ ವತಿಯಿಂದ ಕೆ.ಎಸ್.ಆರ್. ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ KSR Bengaluru Railway Station ನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಿನ್ನೆಲೆ, ಮುರ್ಡೇಶ್ವರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ರೈಲು ಸಂಖ್ಯೆ 16586 ಎಕ್ಸ್‌ಪ್ರೆಸ್ ರೈಲಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಕೊಂಕಣ್ ರೈಲ್ವೇ Konkan Railway ಪ್ರಕಟಣೆ ತಿಳಿಸಿದೆ. ಮುಂದಿನ ಜುಲೈ 16 ಮತ್ತು 17ರಂದು ಸಂಚರಿಸುವ ಮುರ್ಡೇಶ್ವರ-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕೆ.ಎಸ್.ಆರ್. ಬೆಂಗಳೂರು, ಯಶವಂತಪುರ, ಹೆಬ್ಬಾಳ ಹಾಗೂ ಬಾಣಸವಾಡಿ ಮೂಲಕ ಸಂಚರಿಸಲಿದೆ. […]

ಜನತೆಗೆ ಮತ್ತೊಂದು ಶಾಕ್, ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ

ರಾಜ್ಯದಲ್ಲಿ ಇಂಧನ ದರ ಏರಿಕೆಯ ಪರಿಣಾಮ ಇದೀಗ ಬಸ್ ಪ್ರಯಾಣ ದರದ ಮೇಲೂ ನೇರವಾಗಿ ಬಿದ್ದಿದೆ. ಡೀಸೆಲ್ ಬೆಲೆ ಲೀಟರ್‌ಗೆ 3 ರೂಪಾಯಿ ಹೆಚ್ಚಳವಾಗಿರುವುದರಿಂದ ಖಾಸಗಿ ಬಸ್ ಮಾಲೀಕರಿಗೆ ದಿನನಿತ್ಯ ಹೆಚ್ಚುವರಿ ವೆಚ್ಚದ ಭಾರ ಎದುರಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ, “ಪ್ರತಿದಿನ ಒಂದು ಬಸ್‌ಗೆ ಕನಿಷ್ಠ 150 ಲೀಟರ್ ಡೀಸೆಲ್ ಅಗತ್ಯವಿರುತ್ತದೆ. ಬೆಲೆ ಏರಿಕೆಯಿಂದ ದಿನಕ್ಕೆ ಸುಮಾರು 450 ರೂಪಾಯಿ ಹೆಚ್ಚುವರಿ ಖರ್ಚಾಗುತ್ತಿದೆ. ಈ […]

ಸುಪ್ರಿಂ ಕೋರ್ಟ್ ಮಹತ್ವದ ಆದೇಶ, ನಟ ದರ್ಶನ್ ಗೆ ಜಾಮೀನು ನಿರಾಕರಣೆ, ಪರಪ್ಪನ ಅಗ್ರಹಾರವೇ ಗತಿ

ಬೆಂಗಳೂರು: ದರ್ಶನ್ ವಿರುದ್ಧದ ರೇಣುಕಾ ಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ನಟ ದರ್ಶನ್ ಅವರಿಗೆ ಜಾಮೀನು ನಿರಾಕರಿಸಿದೆ. ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠ, ಪ್ರಕರಣದ ವಿಚಾರಣೆಯನ್ನು ವೇಗವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ. “ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು. ನಿಗದಿತ ಅವಧಿಯೊಳಗೆ ಟ್ರಯಲ್ ಮುಗಿಯದಿದ್ದರೆ ಜಾಮೀನು ಪರಿಗಣಿಸಲಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದು, ಕಳೆದ ಏಳು ತಿಂಗಳಲ್ಲಿ ಕೇವಲ 10 ಮಂದಿಯ […]