ಮೈಸೂರು ದಸರಾ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅರ್ಜಿ ಸಲ್ಲಿಸುತ್ತಿರುವ ಕಲಾವಿದರು

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಲವು ಕಲಾವಿದರು ಮತ್ತು ಕಲಾ ತಂಡಗಳು ಈಗಾಗಲೇ ಅರ್ಜಿ ಸಲ್ಲಿಸುತ್ತಿದ್ದಾರೆ.ದಸರಾದಲ್ಲಿ ಜರುಗುವ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ವೀರಗಾಸೆ, ಕತ್ತಿಕುಣಿತ , ಕರಡಿ ಕುಣಿತ, ಕಂಸಾಳೆ, ನಂದಿಧ್ವಜ, ನಗಾರಿ, ಬುಡಕಟ್ಟು ಮತ್ತು ಜಾನಪದ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಕಾತರದಿಂದ ಕಾಯುತ್ತಿವೆ. ಈ ಹಿನ್ನೆಲೆ ನಾಡಹಬ್ಬ ದಸರಾದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನೇಕ ಕಲಾವಿದರು ಮತ್ತು ಕಲಾ ತಂಡಗಳು ಸಿದ್ಧತೆ ನಡೆಸುತ್ತಿರುವ […]

ಉಡುಪಿಯ ಲಯನ್ಸ್ ಕ್ಲಬ್ ಬನ್ನಂಜೆ ಟೈಗರ್ ಪದಪ್ರಧಾನ

ಲಯನ್ಸ್ ಕ್ಲಬ್ ಬನ್ನಂಜೆ ಟೈಗರ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಲಯನ್ ಅನುಪಮ ಜಯಕುಮಾರ್ ಮತ್ತು ಅವರ ತಂಡದ ಕಾರ್ಯಕಾರಿ ಸಮಿತಿಯ ಪದ ಪ್ರಧಾನ ಕಾರ್ಯಕ್ರಮವು ಉಡುಪಿಯ ಪುರಭವನದಲ್ಲಿ ಗುರುವಾರ ನಡೆಯಿತು.ಲಯನ್ಸ್ ಜಿಲ್ಲೆಯ ಮಾಜಿ ಗವರ್ನರ್ ೮, ಜಯಕುಮಾರ್ ಶೆಟ್ಟಿ ಇಂದ್ರಾಳಿ ಪದಪ್ರಧಾನ ಕಾರ್ಯಕ್ರಮವನ್ನು ನೆರವೇರಿಸಿ ಶುಭ ಹಾರೈಸಿದರು. ಕಳೆದ ವರ್ಷ ಅಧ್ಯಕ್ಷ ಕಾರ್ಯದರ್ಶಿ ಮತ್ತು ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ ಪ್ರಮುಖರನ್ನು ವೇದಿಕೆಯಲ್ಲಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಲಯನ್ಸ್ ಜಿಲ್ಲಾ ಕಾರ್ಯಕ್ರಮದಲ್ಲಿ ‘ಧೀರ ಮಹಿಳೆ’ ಪ್ರಶಸ್ತಿ ಪುರಸ್ಕೃತ […]

ಶ್ರಾವಣ ಮಾಸದ ಆರಂಭದ ಹಿನ್ನೆಲೆ :ಬಾಳೆಹಣ್ಣಿನ ಬೆಲೆ ಏರಿಕೆ

ಬೆಂಗಳೂರು: ಶ್ರಾವಣ ಮಾಸದಲ್ಲಿ ಹಬ್ಬಗಳ ಸೀಸನ್ ಆರಂಭವಾಗುತ್ತಿದ್ದಂತೆಯೇ ಬಾಳೆ ಬೆಲೆ ಸದ್ದಿಲ್ಲದೇ ಹೆಚ್ಚಾಗಿದೆ. ಬಹುಮುಖ್ಯ ಬೇಡಿಕೆಯುಳ್ಳ ಈ ಹಣ್ಣಿನ ಬೆಲೆ ಶತಕ ದಾಟಿರುವುದು ಗ್ರಾಹಕರಿಗೆ ತಲೆಬಿಸಿ ತರಿಸಿದೆ. ಬೇಡಿಕೆ ಹಾಗೂ ಪೂರೈಕೆ ವ್ಯತ್ಯಾಸದಿಂದ ಈ ವಾರ ನಗರದಲ್ಲಿ ಒಂದು ಕೆ.ಜಿ. ಏಲಕ್ಕಿ ಬಾಳೆಹಣ್ಣಿನ ದರ 100 ರಿಂದ 140 ರೂ ಆಗಿದೆ.ಟೊಮೆಟೊ, ತರಕಾರಿ ಬೆಲೆ ಏರಿಕೆ ಬಿಸಿಯಿಂದ ಹೊರಬಾರದ ಜನರಿಗೆ ಈಗ ಬಾಳೆಹಣ್ಣಿನ ಬೆಲೆ ಹೆಚ್ಚಳ ಮತ್ತೊಂದು ಆಘಾತ ಉಂಟುಮಾಡಿದೆ. ಶ್ರಾವಣ ಮಾಸದ ಹಬ್ಬಗಳ ಋತು ಆರಂಭವಾಗುತ್ತಿದ್ದಂತೆ […]

ಉಡುಪಿಯಲ್ಲಿ ಛಾಯಾ ಸಮ್ಮಾನ ಅಭಿನಂದನಾ ಸಮಾರಂಭ

ತಮ್ಮದೇ ವೃತ್ತಿ ಬಾಂಧವರನ್ನು ವ್ಯಾಪಾರ ವಹಿವಾಟನ್ನು ನಡೆಸುವ ವೃತ್ತಿ ಪರ ಸಂಸ್ಥೆಗಳೊಂದಿಗೆ ಸೇರಿ ಗುರುತಿಸಿ ಗೌರವಿಸುವುದು. ಬೇರೆಯವರ ಮುಖದಲ್ಲಿ ನಗುವಿರಲೆಂದು ಆಶಿಸಿ ಸದಾ ಸ್ಮೈಲ್ ಪ್ಲೀಸ್ ಎಂದೆನ್ನುವವರು ಛಾಯಾಗ್ರಾಹಕರು ಮಾತ್ರ. ಹಾಗಾಗಿ ಅವರು ಎಲ್ಲರಿಗೂ ಆತ್ಮೀಯರು.ಅಭಿನಂದನೀಯ ಎಂದು ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯ ಹಾಗೂ ತನಿಷ್ಕ್ ಗೋಲ್ಡ್ ಮತ್ತು ಡೈಮಂಡ್ ಜ್ಯುವೆಲ್ಲರಿ ಉಡುಪಿಯಲ್ಲಿ ಆಯೋಜಿಸಿದ್ದ ಛಾಯಾ ಸಮ್ಮಾನ್ ಕಾರ್ಯಕ್ರಮವನ್ನು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉದ್ಘಾಟಿಸಿ ಮಾತನಾಡಿದರು‌. ಹಿರಿಯ ಹಾಗೂ ಛಾಯಾ […]

ಗಜಪಯಣಕ್ಕೂ ಮುನ್ನವೇ ಮೈಸೂರು ದಸರಾ ಆಚರಣೆಗೆ 16 ಉಪಸಮಿತಿ ರಚನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನೂ ಎರಡು ತಿಂಗಳು ಬಾಕಿ ಇರುವಾಗಲೇ,‌ ಅದ್ಧೂರಿ ಆಚರಣೆಗೆ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ 16 ಉಪ ಸಮಿತಿಗಳಿಗೆ ಜಿಲ್ಲೆಯ ಅಧಿಕಾರಿಗಳನ್ನು ನೇಮಿಸಲಾಗಿದೆ.ದಸರಾವನ್ನು ಸಾಂಪ್ರದಾಯಿಕ ಹಾಗೂ ಅದ್ಧೂರಿಯಾಗಿ ನಾಡಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮವನ್ನಾಗಿ ಮಾಡಲು ಸ್ವತಃ ಮೈಸೂರಿನವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ನಂತರ ಮೈಸೂರಿನಲ್ಲಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ನೇತೃತ್ವದಲ್ಲಿ ಸಭೆ ನಡೆದಿದ್ದು ಉಪ ಸಮಿತಿಗಳನ್ನು ರಚಿಸಿ, ಅದಕ್ಕೆ ಉಪ ವಿಶೇಷಾಧಿಕಾರಿಗಳು, […]