₹145.50 ಶಾಸಕರ ನಿಧಿಯ ಮೊದಲ ಕಂತು ಕೋಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ಆಯವ್ಯಯದಲ್ಲಿ ಒದಗಿಸಿರುವ ಅನುದಾನದಡಿ ಮೊದಲನೇ ಕಂತಿನ ಅನುದಾನವನ್ನು ಸರ್ಕಾರ ಇಂದು (ಗುರುವಾರ) ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ಆಯವ್ಯಯ ಅಂದಾಜಿನಲ್ಲಿ ಮೊದಲನೆಯ ಕಂತಿನ ಅನುದಾನವನ್ನು (224 ವಿಧಾನಸಭಾ ಕ್ಷೇತ್ರಗಳು ಹಾಗೂ 67 ವಿಧಾನ ಪರಿಷತ್ ಸದಸ್ಯರಿಗೆ) ಪ್ರತಿ ಕ್ಷೇತ್ರಕ್ಕೆ ತಲಾ ರೂ.50 ಲಕ್ಷಗಳಂತೆ ಒಟ್ಟು 145.50 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2023-24ನೇ ಸಾಲಿನ ಆಯವ್ಯಯ […]
ಬಿಜೆಪಿ ಅಭ್ಯರ್ಥಿಗಳ ಮಧ್ಯಪ್ರದೇಶ, ಛತ್ತೀಸ್ಗಢ ವಿಧಾನಸಭೆ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಛತ್ತೀಸ್ಗಢದ 21 ಅಭ್ಯರ್ಥಿಗಳ ಪಟ್ಟಿ ಹಾಗೂ ಮಧ್ಯಪ್ರದೇಶದ 39 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲ ಹಂತದಲ್ಲೇ ಉಭಯ ರಾಜ್ಯಗಳಲ್ಲೂ ತಲಾ ಐವರು ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಗುರುವಾರ) ಬಿಡುಗಡೆ ಮಾಡಿದೆ.ಮಧ್ಯಪ್ರದೇಶ ಹಾಗೂ ಛತ್ತೀಸ್ಗಢದ ಮುಂಬರುವ ವಿಧಾನಸಭೆ ಚುನಾವಣೆಗೆ ಕ್ರಮವಾಗಿ 39 ಹಾಗೂ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ […]
ಗಡಿಜಿಲ್ಲೆ ಚಾಮರಾಜನಗರದಲ್ಲಿ ಬಾಗಿಲು ಮುಚ್ಚುವ ಹಂತ ತಲುಪಿದ 13 ಸರ್ಕಾರಿ ಶಾಲೆಗಳು

ಚಾಮರಾಜನಗರ: 2023-24ನೇ ಶೈಕ್ಷಣಿಕ ಸಾಲಿನಲ್ಲಿ ಮೂಲಸೌಕರ್ಯ ಕೊರತೆ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳಿಂದ ಆತಂಕಗೊಂಡು ಮಕ್ಕಳ ಶೂನ್ಯ ದಾಖಲಾತಿಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 13 ಸರ್ಕಾರಿ ಶಾಲೆಗಳಿಗೆ ಬೀಗ ಹಾಕಲಾಗಿದೆ.ಮೂಲಸೌಕರ್ಯದ ಕೊರತೆಯಿಂದಾಗಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಹಲವು ಸರ್ಕಾರಿ ಶಾಲೆಗಳು ಬಾಗಿಲು ಮುಚ್ಚುವ ಹಂತ ತಲುಪಿವೆ. ಈ ಪೈಕಿ ಒಂದು ಉರ್ದು ಮಾಧ್ಯಮದ ಶಾಲೆಯೂ ಸೇರಿದೆ.ಅಗತ್ಯ ಮೂಲಸೌಕರ್ಯ, ಶಿಕ್ಷಕರ ಕೊರತೆ, ಶಿಥಿಲ ಶಾಲಾ ಕಟ್ಟಡಗಳೇ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಉಂಟಾಗಲು ಕಾರಣವಾಗಿವೆ. ಕೋವಿಡ್ ವೇಳೆ […]
₹25 ಕೋಟಿ ಮೌಲ್ಯದ ಮದ್ಯ ವಶಕ್ಕೆ: ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆ

ಮೈಸೂರು: ನಂಜನಗೂಡಿನಲ್ಲಿರುವ ಕಂಪನಿ ತಯಾರಿಸಿದ್ದ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಕಂಡುಬಂದಿದೆ. ಕಂಪನಿಯ ಸ್ಟ್ರಾಂಗ್ ಹಾಗೂ ಅಲ್ಟ್ರಾ ಲ್ಯಾಗರ್ ಈ ಅಂಶ ಗೋಚರಿಸಿದ್ದು, 7e ಮತ್ತು 7c ನಮೂನೆಯ (ದಿನಾಂಕ 15-07-23ರಂದು) ಬಾಟಲಿಂಗ್ನಲ್ಲಿರುವುದು ತಿಳಿದುಬಂದಿದೆ. ಮದ್ಯಪ್ರಿಯರ ನೆಚ್ಚಿನ ಬಿಯರ್ ಬ್ರ್ಯಾಂಡ್ವೊಂದರಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ. ಹೀಗಾಗಿ, 25 ಕೋಟಿ ರೂಪಾಯಿ ಮೌಲ್ಯದ 78,678 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪ್ರತಿಷ್ಠಿತ ಬ್ರ್ಯಾಂಡ್ವೊಂದರ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದ್ದು ಕಂಪನಿಯ ವಿರುದ್ಧ ಪೊಲೀಸ್ ಕೇಸ್ […]
₹1.79 ಕೋಟಿಗೂ ಹೆಚ್ಚ ಹಣ ಸಂಗ್ರಹ : ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಇದ್ದುದರಿಂದ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಗಾಜಿನ ಮನೆಯ ಹೊರಾಂಗಣದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ, ಭದ್ರತಾ ಸಿಬ್ಬಂದಿ, ಸ್ವಯಂ ಸೇವಕರನ್ನು ನಿಯೋಜಿಸಲಾಗಿತ್ತು. ಭಾನುವಾರ ಒಂದೇ ದಿನ 1.25 ಲಕ್ಷ ಮಂದಿ ಆಗಮಿಸಿದ್ದು, ಪ್ರವೇಶ ಶುಲ್ಕದ ರೂಪದಲ್ಲಿ ಒಟ್ಟಾರೆ 80.50 ಲಕ್ಷ ರೂ. ಸಂಗ್ರಹವಾಗಿದೆ. ಪ್ರವೇಶ ದ್ವಾರಗಳಲ್ಲಿ ಒಳಗೂ, ಹೊರಗೂ ಭಾರಿ ಜನಸಂದಣಿ ಕಂಡುಬಂದಿತ್ತು. ಈ ರಸ್ತೆ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್ಗಳು, ಮೆಟ್ರೋ ರೈಲುಗಳಲ್ಲೂ ಪ್ರಯಾಣಿಕರ ಸಂಖ್ಯೆಯೂ ದುಪ್ಪಟ್ಟಾಗಿತ್ತು. […]