ಭಾರತ ಪಾಕ್ ನಡುವೆ ಉದ್ವಿಗ್ನತೆ:ಐಪಿಎಲ್ ನ ಉಳಿದ ಪಂದ್ಯಗಳನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸಿದ ಬಿಸಿಸಿಐ

ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮ ಉಂಟಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಉದ್ವಿಗ್ನತೆಯ ಪರಿಣಾಮ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL)‌ ನ ಉಳಿದ ಪಂದ್ಯಗಳನ್ನು ಬಿಸಿಸಿಐ ಅಮಾನತು ಮಾಡಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪಂದ್ಯಾವಳಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ನಂತರ, ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಅಭಿಮಾನಿಗಳ ಸುರಕ್ಷತೆಯೇ ಪ್ರಮುಖ ಕಾಳಜಿ ಎಂದು ಘೋಷಿಸಿದೆ. ಗುರುವಾರ (ಮೇ 08) ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್‌ ಕಿಂಗ್ಸ್‌ […]

ಆರ್​​ಸಿಬಿಗೆ ದೊಡ್ಡ ಆಘಾತ; ಟೂರ್ನಿಯಿಂದ ಹೊರಬಿದ್ದ ಪ್ರಮುಖ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್.!

ಈ ವರುಷ ಟಾಟಾ ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಪ್ಲೇಆಫ್‌ಗೇರಲು ತುದಿಗಾಲಿನಲ್ಲಿ ನಿಂತಿದೆ. ಇದುವರೆಗೆ ಆಡಿರುವ 11 ಪಂದ್ಯಗಳ ಪೈಕಿ 8 ಪಂದ್ಯಗಳನ್ನು ಗೆದ್ದು 3 ಪಂದ್ಯಗಳಲ್ಲಿ ಸೋತಿರುವ ಆರ್​ಸಿಬಿ 16 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಪ್ರಸ್ತುತ 2ನೇ ಸ್ಥಾನದಲ್ಲಿದೆ. ಇದೀಗ ಪ್ಲೇಆಫ್‌ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕೆಂದರೆ ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಶತಾಯಗತಾಯ ಗೆಲ್ಲಲೇಬೇಕಿದೆ. ಆದರೆ ಈ ನಡುವೆ ತಂಡಕ್ಕೆ ಆಘಾತಕ್ಕಾರಿ ಸುದ್ದಿಯೊಂದು ಎದುರಾಗಿದೆ. ತಂಡದ ಪ್ರಮುಖ ಬ್ಯಾಟರ್ […]

ಜೈಪುರ:IPL 2025-ವಿಶ್ವ ದಾಖಲೆ ನಿರ್ಮಿಸಿದ 14ರ ಹರೆಯದ ವೈಭವ್ ಸೂರ್ಯವಂಶಿ

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಹೀಗೆ ಹೊಸ ಇತಿಹಾಸ ನಿರ್ಮಿಸಿದ್ದು 14 ವರ್ಷದ ವೈಭವ್ ಸೂರ್ಯವಂಶಿ . ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಐಪಿಎಲ್​ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದರ ಜೊತೆಗೆ ಟಿ20 […]

ಮಣಿಪಾಲ್‌ ಮ್ಯಾರಥಾನ್ ನಲ್ಲಿ ಸಾವಿರಾರು ಜನ ಭಾಗಿ

ಮಣಿಪಾಲ: ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ನಡೆಸಿಕೊಂಡು ಬರುತ್ತಿರುವ ದೇಶದ ಪ್ರತಿಷ್ಠಿತ ಮಣಿಪಾಲ್ ಮ್ಯಾರಥಾನ್ ಏಳನೇ ಆವೃತ್ತಿ ಭಾನುವಾರ ನಡೆಯಿತು. ಭಾರತ ಸೇರಿದಂತೆ ಅನೇಕ ದೇಶಗಳ ಕ್ರೀಡಾಪಟುಗಳು ಈ ಮ್ಯಾರಥಾನ್ ನಲ್ಲಿ ಭಾಗಿಯಾದರು. 42kmಗಳ ಫುಲ್ ಮ್ಯಾರಥಾನ್ ಸಹಿತ ವಿವಿಧ ಹಂತಗಳಲ್ಲಿ ಸ್ಪರ್ಧಾಕೂಟ ನಡೆಯಿತು.ದೇಶದಲ್ಲೇ ಪ್ರತಿಷ್ಠಿತ ಎನಿಸಿರುವ ಮಣಿಪಾಲ್‌ ಮ್ಯಾರಥಾನ್ ಮುಂಜಾನೆ ಆರಂಭಗೊಂಡಿತು.ಸುಮಾರು 17,000ಕ್ಕೂ ಅಧಿಕ ಮಂದಿ ಓಟಗಾರರು ದೇಶವಿದೇಶಗಳಿಂದ ಈ ಮ್ಯಾರಥಾನ್ ನಲ್ಲಿ ಭಾಗಿಯಾದರು. ಆರೋಗ್ಯ ಮತ್ತು ಸದೃಢತೆಗಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಎಂಬ ಘೋಷ ವಾಕ್ಯದೊಂದಿಗೆ ಮ್ಯಾರಾಥಾನ್ […]

ದುಬೈ ಫ್ರೈಡೇ ಕ್ರಿಕೆಟ್ ಲೀಗ್; ಟೆಕ್ನೋ ಟೈಟಾನ್ಸ್ ಕ್ವಾರ್ಟರ್ ಫೈನಲ್ ಗೆ ತೇರ್ಗಡೆ.

ದುಬೈನಲ್ಲಿ ಜರಗುತ್ತಿರುವ ಅತ್ಯಂತ ಪ್ರತಿಷ್ಠಿತ ಫ್ರೈಡೇ ಕ್ರಿಕೆಟ್ ಲೀಗ್-9ರಲ್ಲಿ ಅವಿಭಜಿತ ದಕ್ಷಿಣಕನ್ನಡ ಮೂಲದ ಒಡೆತನ ಹೊಂದಿರುವ ಟೆಕ್ನೋ ಟೈಟಾನ್ಸ್ ಕ್ರಿಕೆಟ್ ತಂಡವು ಈಗಾಗಲೇ ಆಡಿದ ಎಂಟು ಪಂದ್ಯಗಳಲ್ಲಿ ಐದುಪಂದ್ಯಗಳನ್ನು ಭರ್ಜರಿಯಾಗಿ ಜಯಿಸಿ ಪ್ರೀ-ಕ್ವಾರ್ಟರ್ ಹಂತವನ್ನು ತಲುಪಿದೆ. ಮುಂದಿನ ಪಂದ್ಯದ ಜಯವು ತಂಡವನ್ನು ಸೆಮಿಫೈನಲಗೆ ತಲುಪಿಸುತ್ತದೆ. ಟೆಕ್ನೋ ಟೈಟಾನ್ಸ್ ತಂಡವು ಉಡುಪಿಜಿಲ್ಲೆಯ ಸೂರಾಲಿನ ವಿಠಲ ರಿಷಾನ್ ನಾಯಕ್ ರವರ ನಾಯಕತ್ವ ಹಾಗೂ ಅಕದ್ ಅವರ ಉಪನಾಯಕತ್ವದಲ್ಲಿ ಕಣಕ್ಕೆ ಇಳಿದಿದೆ. ಉಳಿದಂತೆ ಅಬಿದ್, ಅಸ್ಮಾರ್, ನದೀಮ್, ಅಮಾನ್, ಓವೈಸಿ, ರಹೀಂ, […]