ಕಣ್ಣೀರಿಟ್ಟ ವಿನೇಶ್‌ ಫೋಗಟ್‌ : ಮಹಿಳಾ ಕುಸ್ತಿಪಟುಗಳು ಕಿರುಕುಳ ಎದುರಿಸುವುದು ಮುಂದುವರಿಯಲಿದೆ ಎಂದು ಹೇಳಿಕೆ

ಹೊಸದಿಲ್ಲಿ: “ಫೆಡರೇಷನ್‌ ಅಧ್ಯಕ್ಷರಾಗಿ ಸಂಜಯ ಸಿಂಗ್‌ ಆಯ್ಕೆಯಾಗಿರುವುದರಿಂದ ಮಹಿಳಾ ಕುಸ್ತಿಪಟುಗಳು ಕಿರುಕುಳ ಎದುರಿಸುವುದು ಮುಂದುವರಿಯಲಿದೆ,” ಎಂದು ವಿನೇಶ್‌ ಫೋಗಟ್‌ ಹೇಳಿದರು. “ದೇಶದಲ್ಲಿ ನ್ಯಾಯ ಹೇಗೆ ಪಡೆದುಕೊಳ್ಳುವುದು ಎಂದು ತಿಳಿದಿಲ್ಲ,” ಎಂದು ಕಾಮನ್ವೆಲ್ತ್ ಮತ್ತು ಏಷ್ಯನ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆಯಾಗಿರುವ ಫೋಗಟ್‌ ಹೇಳಿದರು. ಭಾರತದ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ ಕುಸ್ತಿಪಟು ವಿನೇಶ್‌ ಫೋಗಟ್‌, ಗುರುವಾರ ಫೆಡರೇಷನ್‌ಗೆ ನಡೆದ ಚುನಾವಣೆಯಲ್ಲಿ ಬ್ರಿಜ್‌ ಭೂಷಣ್‌ ಆಪ್ತ ಸಂಜಯ್‌ ಸಿಂಗ್‌ ಗೆಲುವು […]

ತೈಲ ಬೆಲೆ ಹೆಚ್ಚಳ ಸಾಧ್ಯತೆ : ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ದಾಳಿ

ಲಂಡನ್(ಬ್ರಿಟನ್​) : ಯೆಮೆನ್ ನ ಹೌತಿ ಬಂಡುಕೋರರು ಹಡಗುಗಳ ಮೇಲೆ ಸತತವಾಗಿ ದಾಳಿ ನಡೆಸುತ್ತಿರುವುದರಿಂದ ಹಲವಾರು ಶಿಪ್ಪಿಂಗ್ ಕಂಪನಿಗಳು ಈ ಮಾರ್ಗದ ಮೂಲಕ ಸಾಗಣೆಯನ್ನು ಸ್ಥಗಿತಗೊಳಿಸಿವೆ ಎಂದು ಬಿಬಿಸಿ ವರದಿ ಮಾಡಿದೆ. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳಿಂದಾಗಿ ತೈಲ ಮತ್ತು ಇತರ ಸರಕುಗಳ ಬೆಲೆಗಳು ಹೆಚ್ಚಾಗುವ ಅಪಾಯವಿದೆ ಎಂದು ವಿಶ್ಲೇಷಕರು ಎಚ್ಚರಿಸಿದ್ದಾರೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ ವಿಶ್ವದ ಎರಡನೇ ಅತಿದೊಡ್ಡ ಹಡಗು ಸಾರಿಗೆ ಕಂಪನಿ ಮೆರ್ಸ್ಕ್ ಮಂಗಳವಾರ ತನ್ನ ಕೆಲವು ಹಡಗುಗಳನ್ನು […]

ಯು ಮುಂಬಾ ಪಲ್ಟಿ ಹೊಡಿಸಿದ ಪುಣೇರಿ ಪಲ್ಟನ್​ಗೆ ಎರಡನೇ ಗೆಲುವು : ಪ್ರೊ ಕಬಡ್ಡಿ 10ನೇ ಆವೃತ್ತಿ

ಬೆಂಗಳೂರು: ಶುಕ್ರವಾರ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ 17 ರೈಡಿಂಗ್‌ಗಳಲ್ಲಿ 12 ಅಂಕಗಳನ್ನು ಗಳಿಸಿದ ಮೋಹಿತ್‌ ಗೋಯತ್ ಅವರು, ಪಲ್ಟನ್‌ ತಂಡದ ಅದ್ಭುತ ಜಯಕ್ಕೆ ಕಾರಣರಾದರು. ಯು ಮುಂಬಾ ತಂಡವನ್ನು 43- 32 ಅಂಕಗಳ ಅಂತರದಿಂದ ಸೋಲಿಸುವ ಮೂಲಕ ಪ್ರೊ ಕಬಡ್ಡಿ 10ನೇ ಆವೃತ್ತಿಯಲ್ಲಿ ಪುಣೇರಿ ಪಲ್ಟನ್‌ ತಂಡ ತನ್ನ ಎರಡನೇ ಗೆಲುವು ದಾಖಲಿಸಿದೆ.ಪ್ರೊ ಕಬಡ್ಡಿ 10ನೇ ಆವೃತ್ತಿಯ ನಿನ್ನೆ (ಶುಕ್ರವಾರ) ನಡೆದ ಪಂದ್ಯದಲ್ಲಿ ಯು ಮುಂಬಾ ಮಣಿಸಿ ಪುಣೇರಿ ಪಲ್ಟನ್ ತಂಡವು […]

ಭಾರತದ ಮಹಿಳಾ, ಪುರುಷ ತಂಡಗಳಿಗೆ ಗೆಲುವಿನ ಸಿಹಿ : ಜೂನಿಯರ್ ಹಾಕಿ ವಿಶ್ವಕಪ್​

ಕೌಲಾಲಂಪುರ್/ಸ್ಯಾಂಟಿಯಾಗೊ: ಮಲೇಷ್ಯಾದಲ್ಲಿ ನಡೆಯುತ್ತಿರುವ ಪುರುಷರ ಜೂನಿಯರ್ ಹಾಕಿ ವಿಶ್ವಕಪ್​-2023ರಲ್ಲಿ ಭಾರತ ತಂಡ ಗೆಲುವಿನ ಶುಭಾರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ಫಾರ್ವರ್ಡ್ ಆಟಗಾರ ಅರೈಜೀತ್ ಸಿಂಗ್ ಹುಂಡಾಲ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಭಾರತದ ಜೂನಿಯರ್ ಪುರುಷರ ಹಾಕಿ ತಂಡವು ಏಷ್ಯಾ ತಂಡವಾದ ಕೊರಿಯಾವನ್ನು 4-2 ಗೋಲುಗಳ ಅಂತರದಿಂದ ಸೋಲಿಸಿತು. ಜೂನಿಯರ್ ಹಾಕಿ ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಮಹಿಳಾ ಮತ್ತು ಪುರುಷ ತಂಡಗಳು ಗೆಲುವು ಸಾಧಿಸಿವೆ. ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಪುರುಷರ ಪಂದ್ಯಾವಳಿಯಲ್ಲಿ ಭಾರತ ತಂಡ ಕೊರಿಯಾವನ್ನು 4-2 […]

ಮೈದಾನದ ಸುತ್ತ ಪೊಲೀಸ್ ಭದ್ರತೆ : ಭಾರತ – ಆಸ್ಟ್ರೇಲಿಯಾ ಅಂತಿಮ ಟಿ20

ಬೆಂಗಳೂರು: ಸರಣಿ ಜಯಿಸಿದ ಭಾರತ: 2023ರ ಏಕದಿನ ವಿಶ್ವಕಪ್​ ಮುಕ್ತಾಯವಾದ ನಾಲ್ಕು ದಿನದ ಅಂತರದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣೆ 5 ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲಾಗಿತ್ತು. ನಡೆದ ನಾಲ್ಕು ಪಂದ್ಯದಲ್ಲಿ ಟೀಮ್​ ಇಂಡಿಯಾ 3-1ರಿಂದ ಸರಣಿ ವಶಪಡಿಸಿಕೊಂಡಿದೆ. ಮೊದಲ ಎರಡು ಟಿ20 ಪಂದ್ಯಗಳನ್ನು ಗೆದ್ದ ಭಾರತ ಮೂರನೇ ಪಂದ್ಯದಲ್ಲಿ ಎಡವಿತು. ರಾಯಪುರದಲ್ಲಿ ನಡೆದ ನಾಲ್ಕನೇ ಪಂದ್ಯವನ್ನು ಗೆದ್ದು ಭಾರತ 3-1ರಿಂದ ಸರಣಿ ತನ್ನದಾಗಿಸಿಕೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಸಿದ್ಧವಾಗಿದ್ದು, […]