2024ರ ಪ್ಯಾರಿಸ್ ಒಲಂಪಿಕ್ಗೆ ಅರ್ಹತೆ ಪಡೆದ ಪಾರುಲ್ : 3000 ಮೀಟರ್ ಓಟದಲ್ಲಿ ದಾಖಲೆ

ಬುಡಾಪೆಸ್ಟ್ (ಹಂಗೇರಿ): 3000 ಮೀಟರ್ ಸ್ಟೀಪಲ್ಚೇಸ್ ಫೈನಲ್ನಲ್ಲಿ ಭಾರತದ ಅಥ್ಲೀಟ್ ಪಾರುಲ್ ಚೌಧರಿ 11ನೇ ಸ್ಥಾನ ಪಡೆದು 2024ರ ಪ್ಯಾರಿಸ್ ಒಲಂಪಿಕ್ಸ್ಗೆ ಆಯ್ಕೆ ಆಗಿದ್ದಾರೆ.ಸ್ಪರ್ಧೆಯಲ್ಲಿ 9:15.31 ಸಮಯದಲ್ಲಿ ಓಟ ಪೂರ್ಣಗೊಳಿಸಿದ ಅವರು, 11ನೇ ಸ್ಥಾನ ಪಡೆದರು. ಈ ಮೂಲಕ ಪಾರುಲ್ 2024 ರ ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದರು. 3000 ಮೀಟರ್ ಓಟವನ್ನು 9:15.31 ನಿಮಿಷದಲ್ಲಿ ಪೂರೈಸಿದ್ದು ಭಾರತದ ದಾಖಲೆಯಾಗಿದೆ.ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2023ರ 3000 ಮೀಟರ್ ಸ್ಟೀಪಲ್ಚೇಸ್ ಫೈನಲ್ನಲ್ಲಿ ಭಾರತದ ಅಥ್ಲೀಟ್ ಪಾರುಲ್ […]
ಶಿವಮೊಗ್ಗ ಲಯನ್ಸ್ ಮಣಿಸಿ ಫೈನಲ್ಗೇರಿದ ಹುಬ್ಬಳ್ಳಿ ಟೈಗರ್ಸ್: ಮಹಾರಾಜ ಟ್ರೋಫಿ

ಬೆಂಗಳೂರು: ಶಿವಮೊಗ್ಗ ಲಯನ್ಸ್ ತಂಡವನ್ನು ಅನಾಯಾಸವಾಗಿ ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದೆ. ಪ್ರಸಕ್ತ ಆವೃತ್ತಿಯ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಹುಬ್ಬಳ್ಳಿ ಟೈಗರ್ಸ್ ಸೆಮಿಫೈನಲ್ನಲ್ಲಿ ಶಿವಮೊಗ್ಗ ಲಯನ್ಸ್ ವಿರುದ್ಧ ಮುಗ್ಗರಿಸಿತು. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮೊಹಮ್ಮದ್ ತಾಹಾ (69) ಮತ್ತು ಕೆ.ಎಲ್.ಶ್ರೀಜಿತ್ (61*) ಜೊತೆಯಾಟದ ಬಲದಿಂದ ಶಿವಮೊಗ್ಗವನ್ನು ಆರು ಓವರ್ಗಳು ಬಾಕಿ ಇರುವಂತೆಯೇ 8 ವಿಕೆಟ್ಗಳಿಂದ ಮಣಿಸಿತು.ಟಾಸ್ ಸೋತು ಶಿವಮೊಗ್ಗ […]
ಮಹಿಳಾ ಅಂಧರ ಕ್ರಿಕೆಟ್ ತಂಡಕ್ಕೆ ಚಿನ್ನ ಪದಕ ಗೆದ್ದ ಹಿನ್ನೆಲೆ: ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ : ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್ 2023 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ನಿನ್ನೆ (ಶನಿವಾರ) ಹೊಸ ಇತಿಹಾಸ ನಿರ್ಮಿಸಿದೆ.ಐತಿಹಾಸಿಕ ಪದಕ ವಿಜೇತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, “ನಿಮ್ಮ ಯಶಸ್ಸಿನಿಂದ ಇಡೀ ದೇಶವೇ ಹೆಮ್ಮೆಯಿಂದ ಬೀಗುತ್ತಿದೆ” ಎಂದು ಹೇಳಿದ್ದಾರೆ. ಐಬಿಎಸ್ಎ ವಿಶ್ವ ಕ್ರೀಡಾಕೂಟದಲ್ಲಿ ಮಹಿಳಾ ಅಂಧರ ಕ್ರಿಕೆಟ್ ತಂಡವು ಚಿನ್ನದ […]
ಭಾರತದ ಚೆಸ್ ಪ್ರತಿಭೆ ಪ್ರಜ್ಞಾನಂದ ಪೋಸ್ಟ್: ಸದಾ ಬೆಂಬಲಿಸುವ ಅಮ್ಮನ ಜೊತೆಗೆ

ಚೆನ್ನೈ (ತಮಿಳುನಾಡು) : ಫಿಡೆ ವಿಶ್ವಕಪ್ ಚೆಸ್ ಚಾಂಪಿಯನ್ಶಿಪ್ ಟೂರ್ನಿಯ ಫೈನಲ್ನಲ್ಲಿ ಬೆಳ್ಳಿ ಪದಕ ಗೆದ್ದ ತಮಿಳುನಾಡಿನ ಆಟಗಾರ ಆರ್.ಪ್ರಜ್ಞಾನಂದ, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ವೊಂದನ್ನು ಮಾಡಿದ್ದು, ಪ್ರೋತ್ಸಾಹ ಹಾಗೂ ಬೆಂಬಲ ನೀಡಿದ ಎಲ್ಲರಿಗೂ, ಅದ್ರಲ್ಲೂ ವಿಶೇಷವಾಗಿ ತಾಯಿ ಆರ್.ನಾಗಲಕ್ಷ್ಮಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.”ನಾನು ಚೆಸ್ ವಿಶ್ವಕಪ್ ಫೈನಲ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದೇನೆ. ಮುಂದಿನ ವರ್ಷದ ಸ್ಪರ್ಧೆಗೆ ಅರ್ಹತೆ ಪಡೆದಿದ್ದೇನೆ. ನಿಮ್ಮ ಪ್ರೀತಿ, ಬೆಂಬಲ ಮತ್ತು ಪ್ರಾರ್ಥನೆಗಳಿಗಾಗಿ ನಾನು ಕೃತಜ್ಞ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ವಿಶೇಷವಾಗಿ, […]
ಮಂಗಳೂರಿನ ವಿರುದ್ಧ ಗೆದ್ದು ಸೆಮಿಫೈನಲ್ ಪ್ರವೇಶಿಸಿದ ಹಾಲಿ ಚಾಂಪಿಯನ್ ಗುಲ್ಬರ್ಗ : ಮಹಾರಾಜ ಟ್ರೋಫಿ

ಬೆಂಗಳೂರು: ಮಂಗಳೂರು ಡ್ರ್ಯಾಗನ್ಸ್ ವಿರುದ್ಧ 8 ವಿಕೆಟ್ಗಳಿಂದ ಜಯ ಸಾಧಿಸುವ ಮೂಲಕ ಹಾಲಿ ಚಾಂಪಿಯನ್ ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದೆ. ಗುಲ್ಬರ್ಗ ಪರ ಬೌಲಿಂಗ್ನಲ್ಲಿ ಅಭಿಲಾಷ್ ಶೆಟ್ಟಿ (3/33) ಬ್ಯಾಟಿಂಗ್ನಲ್ಲಿ ಕೆ.ವಿ ಅನೀಶ್ (72*) ಹಾಗೂ ಎಲ್.ಆರ್ ಚೇತನ್ (58) ಗೆಲುವಿನ ರೂವಾರಿಗಳಾಗಿ ಮಿಂಚಿದರು. ಹುಬ್ಬಳ್ಳಿ, ಮೈಸೂರು ತಂಡಗಳು ಕ್ವಾಲಿಫೈ ಆದ ನಂತರ ಮೂರನೇ ತಂಡವಾಗಿ ಸೆಮಿಸ್ಗೆ ಗುಲ್ಬರ್ಗ ಪ್ರವೇಶಿಸಿದೆ. ಸಧ್ಯ ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ಪಂದ್ಯ ನಡೆಯುತ್ತಿದ್ದು, ಬೆಂಗಳೂರು ಗೆದ್ದಲ್ಲಿ […]